ಆರ್. ಟಿ. ವಿಠ್ಠಲಮೂರ್ತಿ
ಅದು ಎಸ್. ಎಂ. ಕೃಷ್ಣ ಮುಖ್ಯಮಂತ್ರಿಯಾಗಿದ್ದ ಕಾಲ. ಆ ಸಂದರ್ಭದಲ್ಲಿ ಉಪ ಪ್ರಧಾನಿಯಾಗಿದ್ದ ಬಿಜೆಪಿಯ ರಾಷ್ಟ್ರೀಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಕೇರಳಕ್ಕೆ ಭೇಟಿ ನೀಡಿದ್ದರು. ಹೀಗೆ ಭೇಟಿ ನೀಡಿದ ಸಂದರ್ಭದಲ್ಲಿ ದೇಶದ ರಾಜಕಾರಣದ ಬಗ್ಗೆ ಮಾತನಾಡುತ್ತಾ ಕರ್ನಾಟಕದಲ್ಲಿದ್ದ ಕಾಂಗ್ರೆಸ್ ಸರ್ಕಾರದ ವಿರುದ್ಧವೂ ಟೀಕಾಪ್ರಹಾರ ನಡೆಸಿದರು.
ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅದರ ಸಾಧನೆ ಶೂನ್ಯ ಎಂದು ಅಬ್ಬರಿಸಿದರು. ದೇಶದ ಉಪಪ್ರಧಾನಿ ಈ ರೀತಿ ವಾಗ್ಧಾಳಿ ಮಾಡಿದರೆ ಮುಖ್ಯಮಂತ್ರಿಯಾಗಿದ್ದವರು ಸುಮ್ಮನೆ ಕೂರಲು ಸಾಧ್ಯವೇ? ಹಾಗಂತಲೇ ಆಪ್ತರೆನ್ನಿಸಿಕೊಂಡವರು ಕೃಷ್ಣ ಅವರ ಬಳಿ ಹೋದರು. ಸಾರ್, ಉಪಪ್ರಧಾನಿಗಳು ನಿಮ್ಮ ಮೇಲೆ ಒಂದೇ ಸಮನೆ ವಾಗ್ಧಾಳಿ ನಡೆಸುತ್ತಿದ್ದಾರೆ. ಅವರ ಆರೋಪಕ್ಕೆ ನೀವು ತಕ್ಕ ಉತ್ತರ ನೀಡದಿದ್ದರೆ ದೇಶಕ್ಕೆ ತಪ್ಪು ಸಂದೇಶ ರವಾನೆಯಾಗುತ್ತದೆ. ಯಾಕೆಂದರೆ ಇವತ್ತು ದೇಶದಲ್ಲಿ ಕಾಂಗ್ರೆಸ್ ಪಾಲಿಗೆ ಶಕ್ತಿ ಅಂತಿರುವುದೇ ಕರ್ನಾಟಕದಲ್ಲಿ. ಹೀಗಾಗಿ ನೀವು ಅಡ್ವಾಣಿಯವರಿಗೆ ತಕ್ಕ ಉತ್ತರ ನೀಡಬೇಕು ಎಂದರು.
ಸರಿ, ಕೃಷ್ಣ ಅವರೂ ಅಡ್ವಾಣಿ ಅವರಿಗೆ ಉತ್ತರ ನೀಡಲು ತಯಾರಾದರು. ಇದಕ್ಕಾಗಿ ಕರೆದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಸರ್ಕಾರದ ಸಾಧನೆ ಏನು ಅನ್ನುವುದರ ಇಂಚಿಂಚು ವಿವರ ನೀಡಿದರು. ಅಷ್ಟೇ ಅಲ್ಲ, ನನ್ನ ಸರ್ಕಾರದ ಸಾಧನೆ ಶೂನ್ಯವೇ ಅಂತ ನೀವೇ ನಿರ್ಧರಿಸಿ ಎಂದುಬಿಟ್ಟರು. ಆದರೆ ಇಷ್ಟೆಲ್ಲದರ ನಡುವೆ ಅವರು ತಪ್ಪಿಯೂ ಅಡ್ವಾಣಿ ಅವರ ವಿರುದ್ಧ ಟೀಕೆ ಮಾಡಲಿಲ್ಲ. ಕೇಳಿದರೆ, ಟೀಕೆಗೆ ಪ್ರತಿ ಟೀಕೆ ಉತ್ತರವಲ್ಲ ಎಂದು ಕೂಲ್ ಆಗಿ ಉತ್ತರಿಸಿದರು.
ಕೃಷ್ಣರ ಉತ್ತರದಿಂದ ಕೆಲವರಿಗೆ ನಿರಾಸೆ ಆಯಿತು. ಏಕೆಂದರೆ ಅಡ್ವಾಣಿ ಅವರ ವಿರುದ್ಧ ಕೃಷ್ಣ ಟೀಕಾಪ್ರಹಾರ ನಡೆಸಿದ್ದರೆ ಅದು ರಾಷ್ಟ್ರ ಮಟ್ಟದ ಸುದ್ದಿಯಾಗುತ್ತಿತ್ತು ಎಂಬುದು ಅವರ ಹಳಹಳಿಕೆ. ಅಂದ ಹಾಗೆ ಇದೊಂದು ಘಟನೆ ಅಂತಲ್ಲ, ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಸಂದರ್ಭ ದಲ್ಲಿ ಎಸ್. ಎಂ. ಕೃಷ್ಣ ಅಗತ್ಯ ಮೀರಿ ಯಾವತ್ತೂ ಮಾತನಾಡಲಿಲ್ಲ. ಎಲ್ಲಕ್ಕಿಂತ ಮುಖ್ಯವಾಗಿ ಅವರಿಗೆ ಯಾವಾಗ ಮಾತನಾಡಬೇಕು? ಯಾವಾಗ ಮೌನ ಧರಿಸಬೇಕು ಎಂಬುದು ಗೊತ್ತಿತ್ತು.
ಎಲ್ಲಕ್ಕಿಂತ ಮುಖ್ಯವಾಗಿ ಮಾತು ಜ್ಯೋತಿರ್ಲಿಂಗವಾಗುವುದು ಹೇಗೆ ಅಂತ ಅವರಿಗೆ ಗೊತ್ತಿತ್ತು. ಹೀಗಾಗಿ ಅವರು ಯಾವ ಸಂದರ್ಭದಲ್ಲೇ ಬಾಯಿ ತೆರೆಯಲಿ, ಅವರೇನು ಹೇಳುತ್ತಾರೆ? ಎಂಬ ಕುತೂಹಲ ಇದ್ದೇ ಇರುತ್ತಿತ್ತು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…