ತಿ.ನರಸೀಪುರ: ಪಟ್ಟಣದ ಕೆಎಸ್ಐಸಿ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣ ವಿರೋಽಸಿ ಕಳೆದ ೧೫ ದಿನಗಳಿಂದ ವಿವಿಧ ಸಂಘಟನೆಗಳವರು ನಡೆಸುತ್ತಿದ್ದ ಪ್ರತಿಭಟನೆ ಅಂತ್ಯಗೊಂಡಿದೆ.
ವಿಧಾನಸಭೆ ಅಧಿವೇಶನದಲ್ಲಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ರವರು ಈ ವಿಷಯ ಪ್ರಸ್ತಾಪಿಸಿದಾಗ ರೇಷ್ಮೆ ಸಚಿವ ಕೆ. ವೆಂಕಟೇಶ್ರವರು ಇದಕ್ಕೆ ಪ್ರತಿಕ್ರಿಯೆ ನೀಡಿ, ಕ್ರೀಡಾಂಗಣ ಜಾಗದ ಕುರಿತು ಅಧಿಕಾರಿಗಳು ನೀಡಿದ ವರದಿ ಮೇರೆಗೆ ಕ್ರೀಡಾಂಗಣ ನಿರ್ಮಾಣಕ್ಕೆ ಜಾಗದ ಹಸ್ತಾಂತರ ಮಾಡಿ ಕ್ರಮ ಕೈಗೊಳ್ಳಲಾಗಿತ್ತು. ಈಗ ಸ್ಥಳದ ವಸ್ತುಸ್ಥಿತಿಯನ್ನು ಅರಿತು ಅದನ್ನು ಕೈಬಿಟ್ಟು ಬೇರೆ ಕಡೆ ಕ್ರೀಡಾಂಗಣ ನಿರ್ಮಾಣ ಮಾಡಲಾಗುವುದು. ರೇಷ್ಮೆ ಕಾರ್ಖಾನೆ ಮುಚ್ಚುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಮುಷ್ಕರವನ್ನು ಕೈಬಿಡಲಾಗಿದೆ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘ, ಕರ್ನಾಟಕ ರಾಜ್ಯ ರೈತ ಸಂಘ, ದಸಂಸ ಸಂಘಟನೆಗಳು, ಪರಿಸರವಾದಿ ಗಳು, ಕನ್ನಡ ಸೇನೆ – ಕರ್ನಾಟಕ, ಪಕ್ಷದ ಮುಖಂಡರುಗಳು ತಿಳಿಸಿದ್ದಾರೆ.
ಬಿಜೆಪಿ ಹಿರಿಯ ಮುಖಂಡ ತೋಟದಪ್ಪ ಬಸವರಾಜು, ಮಾತನಾಡಿ, ಸರ್ಕಾರ ಕ್ರೀಡಾಂಗಣ ನಿರ್ಮಾಣ ಮಾಡುವುದಿಲ್ಲ ಎಂಬ ನಿರ್ಧಾರವನ್ನು ನಾವು ಸ್ವಾಗತಿಸುತ್ತೇವೆ. ಇದಕ್ಕಾಗಿ ಸರ್ಕಾರಕ್ಕೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ. ವಿಪಕ್ಷ ನಾಯಕ ಆರ್.ಅಶೋಕ್, ಸಂಸದ ಯದುವೀರ್, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಎನ್. ಮಹೇಶ್, ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ರಮೇಶ್, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ, ಸಂಸದ ಸುನಿಲ್ ಬೋಸ್, ವಿಧಾನ ಪರಿಷತ್ ಸದಸ್ಯ ಯತೀಂದ್ರ, ರೇಷ್ಮೆ ಕಾರ್ಖಾನೆ ಉಳಿಸಿ ಹೋರಾಟ ಸಮಿತಿಯ ಎಲ್ಲಾ ಪ್ರತಿಭಟನಾಕಾರರಿಗೂ ಕೃತಜ್ಞತೆ ಸಲ್ಲಿಸುತ್ತೇವೆ. ಇವರ ಪ್ರತಿಫಲದಿಂದ ನ್ಯಾಯ ದೊರಕಿದ್ದು, ನಾವು ಪ್ರತಿಭಟನೆ ಯನ್ನು ಕೈಬಿಟ್ಟಿದ್ದೇವೆ ಎಂದು ತಿಳಿಸಿದರು.
” ರೇಷ್ಮೆ ಕಾರ್ಖಾನೆ ಉಳಿಸಿ ಹೋರಾಟ ಸಮಿತಿ ರಚಿಸಿ, ವಿವಿಧ ಸಂಘಟನೆಗಳ ಮುಖಂಡರು ನಡೆಸಿದ ಹೋರಾಟದ ಪ್ರತಿಫಲದಿಂದ ಕೆಎಸ್ಐಸಿಯಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಿಲ್ಲ ಎಂದು ಸರ್ಕಾರ ಪ್ರಕಟಿಸಿರುವುದರಿಂದ ನಮ್ಮ ಹೋರಾಟವನ್ನು ಹಿಂಪಡೆದಿದ್ದೇವೆ.”
-ಕಿರುಗಸೂರು ಶಂಕರ್, ಕಬ್ಬು ಬೆಳೆಗಾರರ ಸಂಘ
” ಮುಖ್ಯಮಂತ್ರಿ ಸಿದ್ದರಾಮಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್. ಸಿ. ಮಹದೇವಪ್ಪ ಹಾಗೂ ತಾಲ್ಲೂಕಿನ ಎಲ್ಲಾ ಸಂಘಟನೆಗಳನ್ನು ದಿಕ್ಕು ತಪ್ಪಿಸಿ ಕೆಎಸ್ಐಸಿ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡಬಹುದು ಎಂದು ಸರ್ಕಾರಕ್ಕೆ ತಪ್ಪು ಮಾಹಿತಿ ನೀಡಿರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು.”
-ಆರ್.ಅರ್ಜುನ್, ಪುರಸಭಾ ಮಾಜಿ ಸದಸ್ಯ
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…