Andolana originals

ಕೆಟ್ಟುನಿಂತ ಕೆಎಸ್ಆರ್‌ಟಿಸಿ ಇಂಟಲಿಜೆಂಟ್ ಟ್ರಾನ್ಸ್‌ಪೋರ್ಟ್‌ ಸಿಸ್ಟಂ

ಪ್ರಶಾಂತ್ ಎಸ್.

೨೩ ಕೋಟಿ ರೂ. ವೆಚ್ಚದಲಿ ಜಾರಿಗೆ ತಂದಿದ್ದ ಯೋಜನೆ

ಯಾವ ಬಸ್ ಎಲ್ಲಿದೆ ಎಂಬ ಮಾಹಿತಿ ನೀಡುತ್ತಿದ್ದ ಸಿಸ್ಟಂ 

ಮೈಸೂರು: ನಗರಾದ್ಯಂತ ಅಪಘಾತಗಳಾಗದಂತೆ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವ ಗುರಿಯಿಟ್ಟುಕೊಂಡು ಪ್ರಥಮ ಬಾರಿಗೆ ಕೆಎಸ್‌ಆರ್‌ಟಿಸಿ ವತಿಯಿಂದ ಪರಿಚಯಿಸಿದ್ದ ಇಂಟಲಿಜೆಂಟ್ ಟ್ರಾನ್ಸ್‌ಪೋರ್ಟ್ ಸಿಸ್ಟಂ (ಐಟಿಎಸ್) ಹಲವು ತಿಂಗಳಿಂದ ಕೆಟ್ಟುನಿಂತಿವೆ.

೨೦೧೨ರಲ್ಲಿ ಅಂದಾಜು ೨೩ ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಗೆ ತರಲಾಗಿತ್ತು. ನಿತ್ಯ ಬೆಳಿಗ್ಗೆ ೫ ರಿಂದ ರಾತ್ರಿ ೧೧ರವರೆಗೆ ಬಂದು ಹೋಗುವ ಬಸ್ಗಳ ಚಲನವಲನವನ್ನು ಜಿಪಿಎಸ್ ಸಹಾಯದಿಂದ ಮಾನಿಟರಿಂಗ್ ಮಾಡುವ ಐಟಿಎಸ್ ವ್ಯವಸ್ಥೆಯನ್ನು ಮೈಸೂರಿನಲ್ಲಿ ಜಾರಿಗೊಳಿಸಲಾಗಿತ್ತು.

ಸೂಕ್ತ ನಿರ್ವಹಣೆಯಿಲ್ಲದೇ ಸ್ಥಗಿತ: ನಗರ ವ್ಯಾಪ್ತಿಯಲ್ಲಿ ಯಾವ ಬಸ್ ಎಲ್ಲಿ ಸಂಚರಿಸುತ್ತಿದೆ, ಎಷ್ಟು ವೇಗವಾಗಿ ಹೋಗುತ್ತಿದೆ? ಚಾಲಕ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದಾರೆಯೇ ಎಂಬುದನ್ನು ನಗರ ಕೇಂದ್ರ ಬಸ್ ನಿಲ್ದಾಣದ ನಿಯಂತ್ರಣ ಕೊಠಡಿಯಲ್ಲಿ ಗಮನಿಸಲಾಗುತ್ತಿತ್ತು. ಒಂದು ವೇಳೆ ಯಾರಾದರೂ ಚಾಲಕರು ಬಸ್‌ಗಳನ್ನು ಮನಬಂದಂತೆ ಚಾಲನೆ ಮಾಡುತ್ತಿದ್ದರೆ, ಕೂಡಲೇ ಅವರನ್ನು ಸಂಪರ್ಕಿಸಿ ನಿಧಾನವಾಗಿ ಚಾಲನೆ ಮಾಡುವಂತೆ ಸೂಚನೆ ನೀಡಲಾಗುತ್ತಿತ್ತು. ಇದರಿಂದಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳ ಅಪಘಾತ ಪ್ರಮಾಣವೂ ಕಡಿಮೆಯಾಗಿತ್ತು. ಆದರೆ, ಸದ್ಯ ಇಂತಹದೊಂದು ಉಪಯುಕ್ತ ಯೋಜನೆ ಸೂಕ್ತ ನಿರ್ವಹಣೆ ಕೊರತೆಯಿಂದ ಸ್ಥಗಿತಗೊಂಡಿದೆ.

ಜನದಟ್ಟಣೆಯೂ ತಗ್ಗಿತ್ತು: ಜಾಣ ಸಾರಿಗೆ ಯೋಜನೆಯಂತೆ ಪ್ರಯಾಣಿಕರು ಕೆಎಸ್‌ಆರ್‌ಟಿಸಿಗೆ ಸಂಬಂಧಿಸಿದ ಆಪ್‌ವೊಂದನ್ನು ಡೌನ್‌ಲೋಡ್ ಮಾಡಿಕೊಂಡಲ್ಲಿ ತಾವು ಹೋಗಬೇಕಾದ ಸ್ಥಳಕ್ಕೆ ಬಸ್ ಎಷ್ಟು ಹೊತ್ತಿಗೆ ಬರುತ್ತದೆ ಎಂಬ ಮಾಹಿತಿ ಎಸ್‌ಎಂಎಸ್ ಮೂಲಕ ಲಭ್ಯ ವಾಗುತ್ತಿತ್ತು. ಇದರಿಂದ ಪ್ರಯಾಣಿಕರು ಬಸ್‌ಗಾಗಿ ಗಂಟೆಗಟ್ಟಲೇ ಕಾಯುವ ಬದಲಿಗೆ, ಬಸ್ ಬರುವ ಸಮಯಕ್ಕೆ ಸರಿಯಾಗಿ ನಿಲ್ದಾಣಕ್ಕೆ ಬರಬಹುದಾಗಿತ್ತು. ಇದರಿಂದ ನಿಲ್ದಾಣಗಳಲ್ಲಿ ಜನದಟ್ಟಣೆ ಕ್ಷೀಣಿಸಿತ್ತು.

ಸ್ಥಗಿತಗೊಳ್ಳಲು ಕಾರಣ?: ಈ ಯೋಜನೆಯನ್ನು ಅನುಷ್ಠಾನಗೊಳಿಸಿದ ಸಂಸ್ಥೆಯು ಒಪ್ಪಂದದಂತೆ ಮೊದಲ ಮೂರು ವರ್ಷಗಳ ಕಾಲ ಅದನ್ನು ನಿರ್ವಹಣೆ ಮಾಡಿತು. ನಂತರ ಆ ಜವಾಬ್ದಾರಿಯನ್ನು ಇಲಾಖೆಗೆ ಹಸ್ತಾಂತರಿಸಿತು. ಅದಾದ ಒಂದೆರಡು ವರ್ಷ ವ್ಯವಸ್ಥಿತವಾಗಿ ಚಾಲನೆಯಾದರೂ ನಂತರದ ದಿನಗಳಲ್ಲಿ ಸೂಕ್ತ ನಿರ್ವಹಣೆ ಕೊರತೆಯಿಂದ ಕೋಟ್ಯಂತರ ರೂ ವ್ಯಯಿಸಿ ಅನುಷ್ಠಾನಗೊಳಿಸಲಾದ ವ್ಯವಸ್ಥೆಗೆ ತುಕ್ಕು ಹಿಡಿದಂತಾಗಿದೆ.

” ನಮ್ಮ ಅವಧಿಯಲ್ಲಿ ಇಂಟಲಿಜೆಂಟ್ ಟ್ರಾನ್ಸ್‌ಪೋರ್ಟ್ ಸಿಸ್ಟಂ ವ್ಯವಸ್ಥೆಯಿಂದ ಮೂರು ವರ್ಷಗಳ ಯಾವುದೇ ಅಪಘಾತಗಳು ಸಂಭವಿಸಿರಲಿಲ್ಲ. ಚಾಲಕ ಎಷ್ಟು ವೇಗವಾಗಿ ಹೋಗಿದ್ದಾನೆ, ಎಷ್ಟು ಬಾರಿ ಬ್ರೇಕ್ ಹಾಕಿದ್ದಾನೆ ಎಂಬ ಮಾಹಿತಿ ದೊರೆಯುತ್ತಿತ್ತು. ಅದನ್ನು ಕೇಳುತ್ತಾರೆ ಎಂಬ ಭಯದಿಂದಲೇ ನಿಧಾನವಾಗಿ ಚಾಲನೆ ಮಾಡುತ್ತಿದ್ದರು. ಮತ್ತೆ ಈ ವ್ಯವಸ್ಥೆ ಜಾರಿಗೆ ಬರಬೇಕು.”

-ವೀರೇಶ್, ನಗರ ವಿಭಾಗೀಯ ನಿಯಂತ್ರಣಾಧಿಕಾರಿ

ಸೇವ್ ಅವರ್ ಸೋಲ್ ಬಟನ್ ಅಳವಡಿಕೆ: 

ಈ ಯೋಜನೆಯಂತೆ ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಎಲ್ಲ ಬಸ್‌ಗಳ ಚಾಲಕರು ಕೂರುವ ಜಾಗದ ಮೇಲ್ಭಾಗದಲ್ಲಿ ಎಸ್‌ಒಎಸ್ (ಸೇವ್ ಅವರ್ ಸೋಲ್) ಬಟನ್ ಅಳವಡಿಸಲಾಗಿತ್ತು. ಬಸ್ ಅಪಘಾತಕ್ಕೆ ಒಳಗಾದಲ್ಲಿ ಚಾಲಕ ಈ ಬಟನ್ ಒತ್ತಿದಲ್ಲಿ ನಗರ ಬಸ್ ನಿಲ್ದಾಣದಲ್ಲಿರುವ ನಿಯಂತ್ರಣ ಕೊಠಡಿಗೆ ಬಸ್ ಅಪಾಯದಲ್ಲಿದೆ, ಯಾರಾದರೂ ಸಹಾಯಕ್ಕೆ ಧಾವಿಸಿ ಎಂಬ ಸಂದೇಶ ರವಾನಿಸುತ್ತಿತ್ತು. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ವಿಧಾನ ಅತ್ಯಂತ ಉಪಯುಕ್ತವಾಗಿತ್ತು.

ಆಂದೋಲನ ಡೆಸ್ಕ್

Recent Posts

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವು

ಹಾಸನ: ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಮೋಗಲಿ ಗ್ರಾಮದಲ್ಲಿ…

7 mins ago

ಓದುಗರ ಪತ್ರ: ಚಾ.ಬೆಟ್ಟ: ಮೂಲ ಸ್ವರೂಪಕ್ಕೆ ಧಕ್ಕೆಯಾಗದಿರಲಿ

ಚಾಮುಂಡಿ ಬೆಟ್ಟದಲ್ಲಿ ಪ್ರಸಾದ ಯೋಜನೆಯಡಿಯಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಯ ಬಗ್ಗೆ ಮೈಸೂರು ರಾಜ ವಂಶಸ್ಥೆ ಪ್ರಮೋದಾದೇವಿ ಒಡೆಯರ್ ಹಾಗೂ ಪ್ರಜ್ಞಾವಂತ…

4 hours ago

ಓದುಗರ ಪತ್ರ: ಕೆಎಚ್‌ಬಿ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಿ

ಮೈಸೂರು ತಾಲ್ಲೂಕಿನ ಧನಗಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಕೆಂಚಲಗೂಡು ಗ್ರಾಮದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ)ಯಿಂದ ನಿರ್ಮಿಸಿರುವ ಬಡಾವಣೆಯಲ್ಲಿ ನೀರು,…

4 hours ago

ಓದುಗರ ಪತ್ರ: ಬೈಕ್ ಟ್ಯಾಕ್ಸಿ ಚಾಲಕರು ನಿಯಮ ಪಾಲಿಸಲಿ

ಮೈಸೂರಿನಲ್ಲಿ ಬಸ್ ನಿಲ್ದಾಣ, ರೈಲು ನಿಲ್ದಾಣ ಮೊದಲಾದ ಕಡೆಗೆ ತೆರಳುವವರು, ಅದರಲ್ಲೂ ಮುಖ್ಯವಾಗಿ ಒಬ್ಬರೇ ಪ್ರಯಾಣಿಸುವವರು ಹೆಚ್ಚಾಗಿ ಇತ್ತೀಚಿನ ದಿನಗಳಲ್ಲಿ…

4 hours ago

ಓದುಗರ ಪತ್ರ: ‘ಉದಯರವಿ’ಯನ್ನು ಸ್ಮಾರಕವನ್ನಾಗಿ ರೂಪಿಸಿ

ರಾಷ್ಟ್ರಕವಿ ಕುವೆಂಪು ಅವರು ವಾಸವಿದ್ದ ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ ‘ಉದಯರವಿ’ ಮನೆಯನ್ನು ಸ್ಮಾರಕವನ್ನಾಗಿ ಮಾಡಬೇಕೆಂದು ಸಾಹಿತ್ಯಾಸಕ್ತರು ಸರ್ಕಾರವನ್ನು ಒತ್ತಾಯಿಸುತ್ತಲೇ ಬಂದಿದ್ದರೂ ಸಂಬಂಧಪಟ್ಟವರು…

4 hours ago

ಪ್ರೊ.ಆರ್.ಎಂ.ಚಿಂತಾಮಣಿ ಅವರ ವಾರದ ಅಂಕಣ: ಸಮರ್ಥ ಕಾಯ್ದೆ ಪಾಲನಾ ವ್ಯವಸ್ಥೆ ಮುಖ್ಯ

ಪ್ರೊ.ಆರ್.ಎಂ.ಚಿಂತಾಮಣಿ ನುರಿತ ಹಣಕಾಸು ಆಡಳಿತಗಾರ ಮತ್ತು ದೇಶದ ಹಣಕಾಸು ಮತ್ತು ಬಂಡವಾಳ ಪೇಟೆಗಳ ಬೆಳವಣಿಗೆ ಮತ್ತು ನಿಯಂತ್ರಣದ ಉನ್ನತಾಧಿಕಾರವುಳ್ಳ ಭಾರತೀಯ…

4 hours ago