Andolana originals

ಕೆಟ್ಟುನಿಂತ ಕೆಎಸ್ಆರ್‌ಟಿಸಿ ಇಂಟಲಿಜೆಂಟ್ ಟ್ರಾನ್ಸ್‌ಪೋರ್ಟ್‌ ಸಿಸ್ಟಂ

ಪ್ರಶಾಂತ್ ಎಸ್.

೨೩ ಕೋಟಿ ರೂ. ವೆಚ್ಚದಲಿ ಜಾರಿಗೆ ತಂದಿದ್ದ ಯೋಜನೆ

ಯಾವ ಬಸ್ ಎಲ್ಲಿದೆ ಎಂಬ ಮಾಹಿತಿ ನೀಡುತ್ತಿದ್ದ ಸಿಸ್ಟಂ 

ಮೈಸೂರು: ನಗರಾದ್ಯಂತ ಅಪಘಾತಗಳಾಗದಂತೆ ಪ್ರಯಾಣಿಕರಿಗೆ ಉತ್ತಮ ಸೇವೆ ನೀಡುವ ಗುರಿಯಿಟ್ಟುಕೊಂಡು ಪ್ರಥಮ ಬಾರಿಗೆ ಕೆಎಸ್‌ಆರ್‌ಟಿಸಿ ವತಿಯಿಂದ ಪರಿಚಯಿಸಿದ್ದ ಇಂಟಲಿಜೆಂಟ್ ಟ್ರಾನ್ಸ್‌ಪೋರ್ಟ್ ಸಿಸ್ಟಂ (ಐಟಿಎಸ್) ಹಲವು ತಿಂಗಳಿಂದ ಕೆಟ್ಟುನಿಂತಿವೆ.

೨೦೧೨ರಲ್ಲಿ ಅಂದಾಜು ೨೩ ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆ ಜಾರಿಗೆ ತರಲಾಗಿತ್ತು. ನಿತ್ಯ ಬೆಳಿಗ್ಗೆ ೫ ರಿಂದ ರಾತ್ರಿ ೧೧ರವರೆಗೆ ಬಂದು ಹೋಗುವ ಬಸ್ಗಳ ಚಲನವಲನವನ್ನು ಜಿಪಿಎಸ್ ಸಹಾಯದಿಂದ ಮಾನಿಟರಿಂಗ್ ಮಾಡುವ ಐಟಿಎಸ್ ವ್ಯವಸ್ಥೆಯನ್ನು ಮೈಸೂರಿನಲ್ಲಿ ಜಾರಿಗೊಳಿಸಲಾಗಿತ್ತು.

ಸೂಕ್ತ ನಿರ್ವಹಣೆಯಿಲ್ಲದೇ ಸ್ಥಗಿತ: ನಗರ ವ್ಯಾಪ್ತಿಯಲ್ಲಿ ಯಾವ ಬಸ್ ಎಲ್ಲಿ ಸಂಚರಿಸುತ್ತಿದೆ, ಎಷ್ಟು ವೇಗವಾಗಿ ಹೋಗುತ್ತಿದೆ? ಚಾಲಕ ಅಡ್ಡಾದಿಡ್ಡಿಯಾಗಿ ಚಾಲನೆ ಮಾಡುತ್ತಿದ್ದಾರೆಯೇ ಎಂಬುದನ್ನು ನಗರ ಕೇಂದ್ರ ಬಸ್ ನಿಲ್ದಾಣದ ನಿಯಂತ್ರಣ ಕೊಠಡಿಯಲ್ಲಿ ಗಮನಿಸಲಾಗುತ್ತಿತ್ತು. ಒಂದು ವೇಳೆ ಯಾರಾದರೂ ಚಾಲಕರು ಬಸ್‌ಗಳನ್ನು ಮನಬಂದಂತೆ ಚಾಲನೆ ಮಾಡುತ್ತಿದ್ದರೆ, ಕೂಡಲೇ ಅವರನ್ನು ಸಂಪರ್ಕಿಸಿ ನಿಧಾನವಾಗಿ ಚಾಲನೆ ಮಾಡುವಂತೆ ಸೂಚನೆ ನೀಡಲಾಗುತ್ತಿತ್ತು. ಇದರಿಂದಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳ ಅಪಘಾತ ಪ್ರಮಾಣವೂ ಕಡಿಮೆಯಾಗಿತ್ತು. ಆದರೆ, ಸದ್ಯ ಇಂತಹದೊಂದು ಉಪಯುಕ್ತ ಯೋಜನೆ ಸೂಕ್ತ ನಿರ್ವಹಣೆ ಕೊರತೆಯಿಂದ ಸ್ಥಗಿತಗೊಂಡಿದೆ.

ಜನದಟ್ಟಣೆಯೂ ತಗ್ಗಿತ್ತು: ಜಾಣ ಸಾರಿಗೆ ಯೋಜನೆಯಂತೆ ಪ್ರಯಾಣಿಕರು ಕೆಎಸ್‌ಆರ್‌ಟಿಸಿಗೆ ಸಂಬಂಧಿಸಿದ ಆಪ್‌ವೊಂದನ್ನು ಡೌನ್‌ಲೋಡ್ ಮಾಡಿಕೊಂಡಲ್ಲಿ ತಾವು ಹೋಗಬೇಕಾದ ಸ್ಥಳಕ್ಕೆ ಬಸ್ ಎಷ್ಟು ಹೊತ್ತಿಗೆ ಬರುತ್ತದೆ ಎಂಬ ಮಾಹಿತಿ ಎಸ್‌ಎಂಎಸ್ ಮೂಲಕ ಲಭ್ಯ ವಾಗುತ್ತಿತ್ತು. ಇದರಿಂದ ಪ್ರಯಾಣಿಕರು ಬಸ್‌ಗಾಗಿ ಗಂಟೆಗಟ್ಟಲೇ ಕಾಯುವ ಬದಲಿಗೆ, ಬಸ್ ಬರುವ ಸಮಯಕ್ಕೆ ಸರಿಯಾಗಿ ನಿಲ್ದಾಣಕ್ಕೆ ಬರಬಹುದಾಗಿತ್ತು. ಇದರಿಂದ ನಿಲ್ದಾಣಗಳಲ್ಲಿ ಜನದಟ್ಟಣೆ ಕ್ಷೀಣಿಸಿತ್ತು.

ಸ್ಥಗಿತಗೊಳ್ಳಲು ಕಾರಣ?: ಈ ಯೋಜನೆಯನ್ನು ಅನುಷ್ಠಾನಗೊಳಿಸಿದ ಸಂಸ್ಥೆಯು ಒಪ್ಪಂದದಂತೆ ಮೊದಲ ಮೂರು ವರ್ಷಗಳ ಕಾಲ ಅದನ್ನು ನಿರ್ವಹಣೆ ಮಾಡಿತು. ನಂತರ ಆ ಜವಾಬ್ದಾರಿಯನ್ನು ಇಲಾಖೆಗೆ ಹಸ್ತಾಂತರಿಸಿತು. ಅದಾದ ಒಂದೆರಡು ವರ್ಷ ವ್ಯವಸ್ಥಿತವಾಗಿ ಚಾಲನೆಯಾದರೂ ನಂತರದ ದಿನಗಳಲ್ಲಿ ಸೂಕ್ತ ನಿರ್ವಹಣೆ ಕೊರತೆಯಿಂದ ಕೋಟ್ಯಂತರ ರೂ ವ್ಯಯಿಸಿ ಅನುಷ್ಠಾನಗೊಳಿಸಲಾದ ವ್ಯವಸ್ಥೆಗೆ ತುಕ್ಕು ಹಿಡಿದಂತಾಗಿದೆ.

” ನಮ್ಮ ಅವಧಿಯಲ್ಲಿ ಇಂಟಲಿಜೆಂಟ್ ಟ್ರಾನ್ಸ್‌ಪೋರ್ಟ್ ಸಿಸ್ಟಂ ವ್ಯವಸ್ಥೆಯಿಂದ ಮೂರು ವರ್ಷಗಳ ಯಾವುದೇ ಅಪಘಾತಗಳು ಸಂಭವಿಸಿರಲಿಲ್ಲ. ಚಾಲಕ ಎಷ್ಟು ವೇಗವಾಗಿ ಹೋಗಿದ್ದಾನೆ, ಎಷ್ಟು ಬಾರಿ ಬ್ರೇಕ್ ಹಾಕಿದ್ದಾನೆ ಎಂಬ ಮಾಹಿತಿ ದೊರೆಯುತ್ತಿತ್ತು. ಅದನ್ನು ಕೇಳುತ್ತಾರೆ ಎಂಬ ಭಯದಿಂದಲೇ ನಿಧಾನವಾಗಿ ಚಾಲನೆ ಮಾಡುತ್ತಿದ್ದರು. ಮತ್ತೆ ಈ ವ್ಯವಸ್ಥೆ ಜಾರಿಗೆ ಬರಬೇಕು.”

-ವೀರೇಶ್, ನಗರ ವಿಭಾಗೀಯ ನಿಯಂತ್ರಣಾಧಿಕಾರಿ

ಸೇವ್ ಅವರ್ ಸೋಲ್ ಬಟನ್ ಅಳವಡಿಕೆ: 

ಈ ಯೋಜನೆಯಂತೆ ನಗರ ವ್ಯಾಪ್ತಿಯಲ್ಲಿ ಸಂಚರಿಸುವ ಎಲ್ಲ ಬಸ್‌ಗಳ ಚಾಲಕರು ಕೂರುವ ಜಾಗದ ಮೇಲ್ಭಾಗದಲ್ಲಿ ಎಸ್‌ಒಎಸ್ (ಸೇವ್ ಅವರ್ ಸೋಲ್) ಬಟನ್ ಅಳವಡಿಸಲಾಗಿತ್ತು. ಬಸ್ ಅಪಘಾತಕ್ಕೆ ಒಳಗಾದಲ್ಲಿ ಚಾಲಕ ಈ ಬಟನ್ ಒತ್ತಿದಲ್ಲಿ ನಗರ ಬಸ್ ನಿಲ್ದಾಣದಲ್ಲಿರುವ ನಿಯಂತ್ರಣ ಕೊಠಡಿಗೆ ಬಸ್ ಅಪಾಯದಲ್ಲಿದೆ, ಯಾರಾದರೂ ಸಹಾಯಕ್ಕೆ ಧಾವಿಸಿ ಎಂಬ ಸಂದೇಶ ರವಾನಿಸುತ್ತಿತ್ತು. ಪ್ರಯಾಣಿಕರ ಸುರಕ್ಷತೆಯ ದೃಷ್ಟಿಯಿಂದ ಈ ವಿಧಾನ ಅತ್ಯಂತ ಉಪಯುಕ್ತವಾಗಿತ್ತು.

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಬಿಹಾರದಲ್ಲಿ ನಿತೀಶ್ ಕುಮಾರ್ ಆಡಳಿತಕ್ಕೆ ಎಳ್ಳುನೀರು

ಬಿಹಾರ ವಿಧಾನಸಭೆಗೆ ಚುನಾವಣೆ ನಡೆದು ಮೂರೂವರೆ ತಿಂಗಳಾಗುವಷ್ಟರಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆಗೆ ಏಕಿಷ್ಟು ಆತುರ? ಏನು ಕಾರಣ ಎನ್ನುವುದಕ್ಕೆಲ್ಲ ಉತ್ತರ…

49 mins ago

ಕೊಡಗಿನಲ್ಲಿ ಜೀತ ಪದ್ಧತಿ ಇನ್ನೂ ಜೀವಂತ

ಕೃಷ್ಣ ಸಿದ್ದಾಪುರ ತೋಟದ ಮಾಲೀಕನ ದೌರ್ಜನ್ಯಕ್ಕೆ ತುತ್ತಾದ ೮ ಕುಟುಂಬಗಳ ೨೬ ಮಂದಿ ರಕ್ಷಣೆ; ಸಾಬೀತಾಗದ ಆರೋಪ  ಸಿದ್ದಾಪುರ: ವ್ಯವಸ್ಥೆಯಲ್ಲಿ ಶತಮಾನಗಳಿಂದ…

54 mins ago

ಹನೂರು: ಗ್ರಾಮದೇವತೆ ಬೆಟ್ಟಳ್ಳಿ ಮಾರಮ್ಮ ಜಾತ್ರೆಗೆ ಸಿದ್ಧತೆ

ಮಹಾದೇಶ್‌ ಎಂ ಗೌಡ  ಮಾ.೯ರಿಂದ ೫ ದಿನಗಳ ಕಾಲ ನಡೆಯಲಿರುವ ಹಬ್ಬ; ಸಾವಿರಾರು ಜನರು ಸೇರುವ ನಿರೀಕ್ಷೆ ಹನೂರು: ಪಟ್ಟಣದ…

60 mins ago

ಮಹಿಳಾ ದಿನದಂದು ಮಹಾರಾಣಿ ವಾಣಿವಿಲಾಸ ಸ್ಮರಣೆ

ಸಿರಿ ಮೈಸೂರು ಮೈಸೂರಿನ ನ್ಯಾಯಾಲಯದ ಮುಂಭಾಗದಿಂದ ಮಾಧವ ರಾವ್ ವೃತ್ತದವರೆಗೂ (ಅಗ್ರಹಾರ ವೃತ್ತ) ಇರುವ ರಸ್ತೆಯನ್ನು ವಾಣಿವಿಲಾಸ ರಸ್ತೆ ಎಂದು…

1 hour ago

ಊರ ಕಾಯುವ ಹೆಣ್ಣು ದೇವಿಯರು ನಮ್ಮನ್ನು ಪೊರೆಯುವ ಸ್ತ್ರೀ ಚೈತನ್ಯದ ಕಥೆ ಹೇಳುವರು

ರಾಧಾ ಆದಿಕಾಲದಿಂದ ಮಾನವರನ್ನು ಮೂಕವಿಸ್ಮಿತನನ್ನಾಗಿ ಮಾಡುತ್ತಾ ಬಂದ ವಿಚಿತ್ರಮಯ ಜಗತ್ ಸೃಷ್ಟಿ ಅವರ ಪಾಲಿಗೆ ಬಿಡಿಸಲಾರದ ಒಗಟು. ಆದಿಮಾನವರಿಗಂತೂ, ಭೂಮ್ಯಾಕಾಶಗಳಲ್ಲಿ…

1 hour ago

ಯಾಕೆ ಇವತ್ತಿನ ಈ ಮಹಿಳಾ ದಿನ?

ಸುಕನ್ಯಾ ಕನಾರಳ್ಳಿ ಹೆಣ್ಣು ನಿಮ್ಮ ಆಸ್ತಿಗೆ ವಾರಸುದಾರರನ್ನ ಹುಟ್ಟಿಸುವ ಕೇವಲ ಗರ್ಭ ಅಲ್ಲ, ಅವಳೊಬ್ಬ ಪ್ರಜೆ, ಅಂತ ಸಾರಿ ಸಾರಿ…

1 hour ago