Andolana originals

ಅಪಘಾತ ನಿಯಂತ್ರಣಕ್ಕೆ ಕೆಎಸ್ಆರ್‌ಟಿಸಿ ಹೊಸ ಪ್ರಯೋಗ!

ಪ್ರಶಾಂತ್ ಎಸ್.

ವಿಡಿಯೋ ಪ್ರಾತ್ಯಕ್ಷಿಕೆ ಮೂಲಕ ಸಾರಿಗೆ ಬಸ್ ಚಾಲಕರಿಗೆ ತರಬೇತಿ 

ಮೈಸೂರು: ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತ ಪ್ರಕರಣಗಳಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳ ಜೀವ ಹಾನಿಯಾಗುತ್ತಿದ್ದು, ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಕೆಎಸ್‌ಆರ್‌ಟಿಸಿ ಮುಂದಾಗಿದೆ. ಅಂತೆಯೇ ತನ್ನ ಚಾಲಕರಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿಯನ್ನು ನೀಡಲೂ ಕ್ರಮ ಕೈಗೊಂಡಿದೆ.

ಕೆಎಸ್‌ಆರ್‌ಟಿಸಿ ಚಾಲಕರನ್ನು ಸಂಚಾರ ನಿರ್ವಹಣೆ ಕೇಂದ್ರಕ್ಕೆಆಹ್ವಾನಿಸುತ್ತಿರುವ ಅಽಕಾರಿಗಳು, ಸಂಚಾರ ಮತ್ತು ಚಾಲನಾ ಪರಿಣತರಿಂದ ತರಬೇತಿ ಕೊಡಿಸುತ್ತಿದ್ದಾರೆ. ರಸ್ತೆ ಗುಂಡಿಗಳಿದ್ದಾಗ ಯಾವ ರೀತಿ ಚಾಲನೆ ಮಾಡಬೇಕು, ಸಂಚಾರ ನಿಯಮ ಪಾಲಿಸುವುದರಿಂದ ಯಾವ ರೀತಿ ಅಪಘಾತ ತಪ್ಪಿಸಬಹುದು, ವೇಗದ ಚಾಲನೆಯಿಂದಾಗುವ ಅನಾಹುತ, ಓವರ್ ಟೇಕ್‌ನಿಂದಾಗುವ ಸಮಸ್ಯೆ ಏನು ಎಂಬುದೂ ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ವಿಡಿಯೋ ಪ್ರಾತ್ಯಕ್ಷಿಕೆ ಸಮೇತ ಚಾಲಕರಿಗೆ ತರಬೇತಿ ನೀಡಲು ಮುಂದಾಗಿದೆ.

ಅಪಘಾತದ ವಿಡಿಯೋ ಪ್ರದರ್ಶನ: ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಬಸ್ ಅಪಘಾತಗಳ ದೃಶ್ಯಗಳನ್ನು ಒಟ್ಟುಗೂಡಿಸಿ ವಿಡಿಯೋ ಸಿದ್ಧಪಡಿಸಲಾಗಿದ್ದು, ಇದನ್ನೇ ಚಾಲಕರಿಗೆ ಪ್ರದರ್ಶಿಸಲಾಗುತ್ತಿದೆ. ಆ ಮೂಲಕ ಅಪಘಾತಕ್ಕೆ ಕಾರಣವಾದ ಅಂಶಗಳನ್ನು ಮನದಟ್ಟು ಮಾಡಲಾಗುತ್ತಿದೆ. ವೃದ್ಧರು, ಮಹಿಳೆಯರು, ಮಕ್ಕಳು ರಸ್ತೆ ದಾಟುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಚಾಲಕರಿಗೆ ತರಬೇತಿ ನೀಡುವುದರ ಜೊತೆಗೆ ಸಂಚಾರ ನಿಯಮಗಳ ಪಾಲನೆ, ರಸ್ತೆ ಸುರಕ್ಷತಾ ಕ್ರಮಗಳ ಜಾರಿ, ಸಾರ್ವಜನಿಕರ ಬಗ್ಗೆ ಕಾಳಜಿ ಹಾಗೂ ಇತರೆ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಪ್ರತಿ ತಿಂಗಳು ಜಾಗೃತಿ: ಪ್ರತಿವರ್ಷ ಬಸ್‌ಗಳಿಂದ ನಡೆಯುವ ರಸ್ತೆ ಅಪಘಾತಗಳ ಬಗ್ಗೆ ಪ್ರತ್ಯೇಕವಾಗಿ ತನಿಖೆ ನಡೆಸುವ ಅಧಿಕಾರಿಗಳು, ಯಾವ ಕಾರಣಕ್ಕೆ ಅಪಘಾತ ನಡೆದಿದೆ, ಅಪಘಾತಕ್ಕೆ ಯಾರ ನಿರ್ಲಕ್ಷ್ಯ ಕಾರಣ ಎಂಬುದನ್ನು ಪತ್ತೆ ಹಚ್ಚಿ ಮುಂದೆ ಇಂತಹ ಅಪಫಾತಗಳು ಸಂಭವಿಸದಂತೆ ಚಾಲಕರಿಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರತಿ ತಿಂಗಳು ಮಾಡುತ್ತಿದ್ದಾರೆ.

ಅಮಾನತ್ತು ಶಿಕ್ಷೆ: ನಿರ್ಲಕ್ಷ್ಯ ಮತ್ತು ಅಸಡ್ಡೆಯಿಂದ ವಾಹನ ಚಾಲನೆ ಮಾಡಿ ರಸ್ತೆ ಅಪಘಾತಕ್ಕೆ ಕಾರಣವಾದರೆ ಅಂತಹ ಬಸ್ ಚಾಲಕರನ್ನು ಆರು ತಿಂಗಳು ಅಮಾನತ್ತು ಮಾಡುವ ಮೂಲಕ ಅವರಿಗೆ ಸಿಗಬೇಕಾದ ಸವಲತ್ತುಗಳನ್ನು ಕಡಿತಗೊಳಿಸಲಾಗುತ್ತದೆ. ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಚಾಲಕರನ್ನು ವಜಾ ಮಾಡಲಾಗುತ್ತದೆ.

” ಎಸ್‌ಆರ್‌ಟಿಸಿಯ ಕೆಲವು ಬಸ್ ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸಿಬ್ಬಂದಿಗೆ ತಿಂಗಳಿಗೊಮ್ಮೆ ತರಬೇತಿ ನೀಡಲಾಗುತ್ತಿತ್ತು. ಆದರೆ, ಈ ಬಾರಿ ವಿನೂತನವಾಗಿ ವಿಡಿಯೋ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.”

-ಶ್ರೀನಿವಾಸ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ

” ಎಸ್‌ಆರ್‌ಟಿಸಿಯ ಕೆಲವು ಚಾಲಕರ ನಿರ್ಲಕ್ಷ್ಯದಿಂದ ಹಾಗೂ ವಾಹನಗಳು ಹೆಚ್ಚು ಇದ್ದಂತಹ ಸಂದರ್ಭದಲ್ಲಿ ಆಗಾಗ್ಗೆ ಅಪಘಾತಗಳು ಆಗುತ್ತಿವೆ. ಇದನ್ನು ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯಲಿ ರುವ ತರಬೇತಿ ಕೇಂದ್ರಗಳಲ್ಲಿ ಚಾಲಕರಿಗೆ ಪ್ರತಿ ತಿಂಗಳು ವಿಡಿಯೋ ಪ್ರಾತ್ಯಕ್ಷಿಕೆಯ ಮೂಲಕ ತರಬೇತಿ ನೀಡಲಾಗುತ್ತಿದೆ.”

-ಅಕ್ರಂಪಾಷ, ವ್ಯವಸ್ಥಾಪಕ ನಿರ್ದೇಶಕರು, ಕೆಎಸ್‌ಆರ್‌ಟಿಸಿ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

1 hour ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

1 hour ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

1 hour ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

1 hour ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

1 hour ago

ಮಲೆ ಮಹದೇಶ್ವರ ಬೆಟ್ಟ| ಕಾಲ್ನಡಿಗೆ ಪಾದಯಾತ್ರಿಗಳಿಗೆ ಸೌಲಭ್ಯ ಕಲ್ಪಿಸಿ: ಡಿಸಿಎಂ ಡಿಕೆಶಿ ಸೂಚನೆ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಶಿವರಾತ್ರಿ ಹಬ್ಬದ ಪ್ರಯುಕ್ತ ಪ್ರತಿ ವರ್ಷದಂತೆ ಈ ವರ್ಷವೂ ಸಹ…

1 hour ago