Andolana originals

ಅಪಘಾತ ನಿಯಂತ್ರಣಕ್ಕೆ ಕೆಎಸ್ಆರ್‌ಟಿಸಿ ಹೊಸ ಪ್ರಯೋಗ!

ಪ್ರಶಾಂತ್ ಎಸ್.

ವಿಡಿಯೋ ಪ್ರಾತ್ಯಕ್ಷಿಕೆ ಮೂಲಕ ಸಾರಿಗೆ ಬಸ್ ಚಾಲಕರಿಗೆ ತರಬೇತಿ 

ಮೈಸೂರು: ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಹೆಚ್ಚುತ್ತಿರುವ ರಸ್ತೆ ಅಪಘಾತ ಪ್ರಕರಣಗಳಿಂದಾಗಿ ವಾಹನ ಸವಾರರು ಹಾಗೂ ಪಾದಚಾರಿಗಳ ಜೀವ ಹಾನಿಯಾಗುತ್ತಿದ್ದು, ರಸ್ತೆ ಅಪಘಾತಗಳಿಗೆ ಬ್ರೇಕ್ ಹಾಕಲು ಕೆಎಸ್‌ಆರ್‌ಟಿಸಿ ಮುಂದಾಗಿದೆ. ಅಂತೆಯೇ ತನ್ನ ಚಾಲಕರಿಗೆ ವಿಶೇಷ ಸುರಕ್ಷಾ ಚಾಲನಾ ತರಬೇತಿಯನ್ನು ನೀಡಲೂ ಕ್ರಮ ಕೈಗೊಂಡಿದೆ.

ಕೆಎಸ್‌ಆರ್‌ಟಿಸಿ ಚಾಲಕರನ್ನು ಸಂಚಾರ ನಿರ್ವಹಣೆ ಕೇಂದ್ರಕ್ಕೆಆಹ್ವಾನಿಸುತ್ತಿರುವ ಅಽಕಾರಿಗಳು, ಸಂಚಾರ ಮತ್ತು ಚಾಲನಾ ಪರಿಣತರಿಂದ ತರಬೇತಿ ಕೊಡಿಸುತ್ತಿದ್ದಾರೆ. ರಸ್ತೆ ಗುಂಡಿಗಳಿದ್ದಾಗ ಯಾವ ರೀತಿ ಚಾಲನೆ ಮಾಡಬೇಕು, ಸಂಚಾರ ನಿಯಮ ಪಾಲಿಸುವುದರಿಂದ ಯಾವ ರೀತಿ ಅಪಘಾತ ತಪ್ಪಿಸಬಹುದು, ವೇಗದ ಚಾಲನೆಯಿಂದಾಗುವ ಅನಾಹುತ, ಓವರ್ ಟೇಕ್‌ನಿಂದಾಗುವ ಸಮಸ್ಯೆ ಏನು ಎಂಬುದೂ ಸೇರಿದಂತೆ ಇನ್ನಿತರೆ ವಿಷಯಗಳ ಬಗ್ಗೆ ವಿಡಿಯೋ ಪ್ರಾತ್ಯಕ್ಷಿಕೆ ಸಮೇತ ಚಾಲಕರಿಗೆ ತರಬೇತಿ ನೀಡಲು ಮುಂದಾಗಿದೆ.

ಅಪಘಾತದ ವಿಡಿಯೋ ಪ್ರದರ್ಶನ: ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಬಸ್ ಅಪಘಾತಗಳ ದೃಶ್ಯಗಳನ್ನು ಒಟ್ಟುಗೂಡಿಸಿ ವಿಡಿಯೋ ಸಿದ್ಧಪಡಿಸಲಾಗಿದ್ದು, ಇದನ್ನೇ ಚಾಲಕರಿಗೆ ಪ್ರದರ್ಶಿಸಲಾಗುತ್ತಿದೆ. ಆ ಮೂಲಕ ಅಪಘಾತಕ್ಕೆ ಕಾರಣವಾದ ಅಂಶಗಳನ್ನು ಮನದಟ್ಟು ಮಾಡಲಾಗುತ್ತಿದೆ. ವೃದ್ಧರು, ಮಹಿಳೆಯರು, ಮಕ್ಕಳು ರಸ್ತೆ ದಾಟುವ ಸಂದರ್ಭದಲ್ಲಿ ಎಚ್ಚರಿಕೆ ವಹಿಸುವಂತೆ ಚಾಲಕರಿಗೆ ತರಬೇತಿ ನೀಡುವುದರ ಜೊತೆಗೆ ಸಂಚಾರ ನಿಯಮಗಳ ಪಾಲನೆ, ರಸ್ತೆ ಸುರಕ್ಷತಾ ಕ್ರಮಗಳ ಜಾರಿ, ಸಾರ್ವಜನಿಕರ ಬಗ್ಗೆ ಕಾಳಜಿ ಹಾಗೂ ಇತರೆ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ.

ಪ್ರತಿ ತಿಂಗಳು ಜಾಗೃತಿ: ಪ್ರತಿವರ್ಷ ಬಸ್‌ಗಳಿಂದ ನಡೆಯುವ ರಸ್ತೆ ಅಪಘಾತಗಳ ಬಗ್ಗೆ ಪ್ರತ್ಯೇಕವಾಗಿ ತನಿಖೆ ನಡೆಸುವ ಅಧಿಕಾರಿಗಳು, ಯಾವ ಕಾರಣಕ್ಕೆ ಅಪಘಾತ ನಡೆದಿದೆ, ಅಪಘಾತಕ್ಕೆ ಯಾರ ನಿರ್ಲಕ್ಷ್ಯ ಕಾರಣ ಎಂಬುದನ್ನು ಪತ್ತೆ ಹಚ್ಚಿ ಮುಂದೆ ಇಂತಹ ಅಪಫಾತಗಳು ಸಂಭವಿಸದಂತೆ ಚಾಲಕರಿಗೆ ಜಾಗೃತಿ ಮೂಡಿಸುವ ಕಾರ್ಯವನ್ನು ಪ್ರತಿ ತಿಂಗಳು ಮಾಡುತ್ತಿದ್ದಾರೆ.

ಅಮಾನತ್ತು ಶಿಕ್ಷೆ: ನಿರ್ಲಕ್ಷ್ಯ ಮತ್ತು ಅಸಡ್ಡೆಯಿಂದ ವಾಹನ ಚಾಲನೆ ಮಾಡಿ ರಸ್ತೆ ಅಪಘಾತಕ್ಕೆ ಕಾರಣವಾದರೆ ಅಂತಹ ಬಸ್ ಚಾಲಕರನ್ನು ಆರು ತಿಂಗಳು ಅಮಾನತ್ತು ಮಾಡುವ ಮೂಲಕ ಅವರಿಗೆ ಸಿಗಬೇಕಾದ ಸವಲತ್ತುಗಳನ್ನು ಕಡಿತಗೊಳಿಸಲಾಗುತ್ತದೆ. ಗುತ್ತಿಗೆ ಆಧಾರದ ಮೇಲೆ ನೇಮಕಗೊಂಡ ಚಾಲಕರನ್ನು ವಜಾ ಮಾಡಲಾಗುತ್ತದೆ.

” ಎಸ್‌ಆರ್‌ಟಿಸಿಯ ಕೆಲವು ಬಸ್ ಚಾಲಕರ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಮ್ಮ ಸಿಬ್ಬಂದಿಗೆ ತಿಂಗಳಿಗೊಮ್ಮೆ ತರಬೇತಿ ನೀಡಲಾಗುತ್ತಿತ್ತು. ಆದರೆ, ಈ ಬಾರಿ ವಿನೂತನವಾಗಿ ವಿಡಿಯೋ ಪ್ರಾತ್ಯಕ್ಷಿಕೆ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ.”

-ಶ್ರೀನಿವಾಸ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ

” ಎಸ್‌ಆರ್‌ಟಿಸಿಯ ಕೆಲವು ಚಾಲಕರ ನಿರ್ಲಕ್ಷ್ಯದಿಂದ ಹಾಗೂ ವಾಹನಗಳು ಹೆಚ್ಚು ಇದ್ದಂತಹ ಸಂದರ್ಭದಲ್ಲಿ ಆಗಾಗ್ಗೆ ಅಪಘಾತಗಳು ಆಗುತ್ತಿವೆ. ಇದನ್ನು ತಡೆಗಟ್ಟಲು ಜಿಲ್ಲಾ ವ್ಯಾಪ್ತಿಯಲಿ ರುವ ತರಬೇತಿ ಕೇಂದ್ರಗಳಲ್ಲಿ ಚಾಲಕರಿಗೆ ಪ್ರತಿ ತಿಂಗಳು ವಿಡಿಯೋ ಪ್ರಾತ್ಯಕ್ಷಿಕೆಯ ಮೂಲಕ ತರಬೇತಿ ನೀಡಲಾಗುತ್ತಿದೆ.”

-ಅಕ್ರಂಪಾಷ, ವ್ಯವಸ್ಥಾಪಕ ನಿರ್ದೇಶಕರು, ಕೆಎಸ್‌ಆರ್‌ಟಿಸಿ, ಬೆಂಗಳೂರು

ಆಂದೋಲನ ಡೆಸ್ಕ್

Recent Posts

ರಸ್ತೆಗಳ ದಾರುಣತೆ: ಬೇಕಿದೆ ಇಲಾಖೆಗಳ ಸಮನ್ವಯತೆ

ಶ್ರೇಯಸ್ ದೇವನೂರು ಮಾದರಿ ಮೈಸೂರು ಉಳಿವಿಗೆ ಒಂದು ಸಮಗ್ರ ಸಭೆ, ದೀರ್ಘಕಾಲಿಕ ಯೋಜನೆ ಅಗತ್ಯ ಮೈಸೂರು - ಅರಮನೆಗಳ ನಗರ,…

2 hours ago

ಕೊಡಗು ‘ಜಿಲ್ಲೆಯಲ್ಲಿ ಜಲ್‌ಜೀವನ್ ಮಿಷನ್ ಯೋಜನೆ ಪ್ರಗತಿ’

ಪುನೀತ್ ಮಡಿಕೇರಿ ೪೫೭ ಕಾಮಗಾರಿಗಳ ಪೈಕಿ ೩೬೯ ಕಾಮಗಾರಿಗಳು ಪೂರ್ಣ ಮಡಿಕೇರಿ: ಕುಡಿಯುವ ನೀರಿನ ಗೃಹ ನಳ ನೀರು ಸಂಪರ್ಕ…

2 hours ago

ಪ್ರವಾಸಿಗರ ಆಕರ್ಷಣೆಗೆ ವರುಣ ಕೆರೆಗೆ ನವಸ್ಪರ್ಶ

ಕೆ.ಬಿ.ರಮೇಶನಾಯಕ ೧೫ ಕೋಟಿ ರೂಪಾಯಿ ವೆಚ್ಚದಲ್ಲಿ ಕೆರೆ ಸೌಂದರ್ಯೀಕರಣ  ಪ್ರವಾಸಿಗರ ಕಣ್ಮನ ಸೆಳೆಯಲು ಹತ್ತು ಹಲವು ಮನರಂಜನಾ ಚಟುವಟಿಕೆಗಳು ಮೈಸೂರಿನಿಂದ…

2 hours ago

ಮೈಸೂರು ಜಿಲ್ಲೆಯಲ್ಲಿ ಪಶು ಪಾಲನೆಗೆ ಪಶು ವೈದ್ಯರ ಬರ

ಹೆಚ್.ಎಸ್. ದಿನೇಶ್‌ಕುಮಾರ್ ಮೈಸೂರು ಜಿಲ್ಲೆಯಲ್ಲಿ ೨೭ ಮಂದಿ ಪಶು ವೈದ್ಯರ ಹುದ್ದೆ ಖಾಲಿ ಮೈಸೂರು: ಹಸು, ಎಮ್ಮೆ, ಕುರಿಗಳಂತಹ ಪ್ರಾಣಿಗಳು…

2 hours ago

ಸಿದ್ದಾಪುರ | ಕಾಡಾನೆ ದಾಳಿಗೆ ಓರ್ವ ಗಂಭೀರ

ಸಿದ್ದಾಪುರ : ಕಾಡಾನೆ ದಾಳಿಗೆ ಸಿಲುಕಿ ಬೆಳೆಗಾರರೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ವಾಲ್ಕೂರು ತ್ಯಾಗತ್ತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಭ್ಯತ್‌ಮಂಗಲ…

13 hours ago