Andolana originals

ಕುಕ್ಕರಹಳ್ಳಿ ಕೆರೆ ವಿವಾದ : ʻಶ್ವಾನ ಶಾಲಾʼ ಗಳನ್ನು ನಿರ್ಮಿಸಿ

ವಸಂತಕುಮಾರ್ ಮೈಸೂರು ಮಠ,

ಸಾಮಾಜಿಕ ಹೋರಾಟಗಾರ ಮತ್ತು ಪರಿಸರವಾದಿ.

ಮೈ ಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಬೀದಿ ನಾಯಿಗಳಿಗೆ ಶ್ವಾನ ಪ್ರಿಯರು ಆಹಾರ ನೀಡುವುದರ ಬಗ್ಗೆ ಸಾಕಷ್ಟು ವಾದ ವಿವಾದಗಳು ಹರಿದಾಡುತ್ತಿವೆ. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಇದೊಂದು ನುಂಗಲಾರದ ಬಿಸಿ ತುಪ್ಪವಾಗಿದೆ. ಬೀದಿ ನಾಯಿಗಳಿಂದ ಕಚ್ಚಿಸಿಕೊಂಡಿರುವ ಹಲವರು, ಅದರಲ್ಲೂ ಮಕ್ಕಳು, ಹೆಂಗಸರು ಪಡಬಾರದ ಪಾಡುಪಟ್ಟಿರುವುದನ್ನು ನಾವು ಕಂಡಿದ್ದೇವೆ. ಒಂದು ಕಡೆ ಇದು ಸತ್ಯವಾದರೆ, ನಾಯಿಗಳಿಗೆ ಆಹಾರ ನೀಡುವುದು ಜನರ ಹಕ್ಕು ಎಂದು ಹಲವರು ಶ್ವಾನ ಪ್ರಿಯರು ಪ್ರತಿಪಾದಿಸುತ್ತಿದ್ದಾರೆ. ಮೈಸೂರು ನಗರಪಾಲಿಕೆಯ ನಾಯಿ ಸ್ಕ್ವಾಡ್ ಆಗಾಗ ಬೀದಿ ನಾಯಿಗಳನ್ನು ಹಿಡಿದೊಯ್ದು ಅದಕ್ಕೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿ, ಮತ್ತೆ ಬೀದಿಗೆ ಬಿಡುತ್ತಿರುವುದು ಗೊತ್ತಿರುವ ವಿಷಯ. ಅಷ್ಟರೊಳಗೆ ಆ ನಾಯಿಗಳು ಸಾಕಷ್ಟು ಸಂತಾನ ಉತ್ಪಾದನೆ ಮಾಡಿರುತ್ತವೆ; ಒಂದು ಹೆಣ್ಣು ನಾಯಿ ಸರಿಸುಮಾರು ೪-೬ ಮರಿಗಳಿಗೆ ಜನ್ಮ ಕೊಡುತ್ತದೆ.

ಈ ಸಮಸ್ಯೆಯನ್ನು ಬಗೆಹರಿಸಲು ಇದೊಂದು ಸಲಹೆ. ಭಾರತದಲ್ಲಿ ಗೋವುಗಳನ್ನು ಕಂಡರೆ ಪೂಜ್ಯತಾ ಭಾವನೆ ಇದೆ. ಆದರೆ ಬಿಡಾಡಿ ಹೋರಿಗಳನ್ನು ಸಾಕಲಾರದೆ, ಅವುಗಳನ್ನು ನಡುಬೀದಿಗಳಲ್ಲಿ ಬಿಟ್ಟಿರುವುದನ್ನು ಮತ್ತು ಅವುಗಳಿಂದ ವಾಹನ ಸವಾರರಿಗೆ ಎಷ್ಟು ಅನನುಕೂಲವಾಗುತ್ತದೆ ಎನ್ನುವುದನ್ನು ಇಂದಿಗೂ ನಾವು ಕಾಣುತ್ತಿದ್ದೇವೆ. ಒಂದು ಕಾಲದಲ್ಲಿ ದನದ ಮಾಂಸ ತಿನ್ನುವವರು ಅವುಗಳನ್ನು ಸಾಗಿಸುತ್ತಿದ್ದುದು ಒಂದು ನೋವಿನ ಸಂಗತಿಯಾಗಿತ್ತು. ಈ ದಾರುಣ ಪರಿಸ್ಥಿತಿಯನ್ನು ನೀಗಿಸಲು ಸರ್ಕಾರ ಮತ್ತು ಗೋವು ಪ್ರಿಯರು ಹಲವಾರು ಗೋವು ಶಾಲೆಗಳನ್ನು ನಿರ್ಮಿಸಿ, ಅವುಗಳಿಗೆ ಆಹಾರ, ನೀರು ಮತ್ತು ಅವು ಸ್ವಾಭಾವಿಕ ಮರಣ ಹೊಂದುವವರೆಗೆ ಅವುಗಳ ಆರೋಗ್ಯ ಮತ್ತು ಔಷಧಗಳನ್ನು ನೀಡುವ ವ್ಯವಸ್ಥೆ ಮಾಡಿದ್ದಾರೆ.

ಅಂತೆಯೇ ‘ಶ್ವಾನ ಶಾಲಾ’ಗಳನ್ನು ಏಕೆ ನಿರ್ಮಿಸಬಾರದು? ಶ್ವಾನಪ್ರಿಯರಾಗಲೀ, ಸರ್ಕಾರವಾಗಲಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಾಗಲಿ ಮುಂದೆ ಬಂದು ಶ್ವಾನಗಳ ಮೇಲಿರುವ ತಮ್ಮ ಪ್ರೀತಿ, ಪ್ರೇಮವನ್ನು ‘ಶ್ವಾನ ಶಾಲಾ’ಗಳನ್ನು ನಿರ್ಮಿಸಿ ಗೋವು ಶಾಲಾಗಳಲ್ಲಿ ನೀಡುತ್ತಿರುವ ಸಕಲ ಸೌಕರ್ಯಗಳನ್ನು ಬೀದಿನಾಯಿಗಳಿಗೆ ಸಿಗುವಂತೆ ಮಾಡಿದರೆ ಎಲ್ಲರೂ ನಿರಾಳವಾಗಿರಬಹುದು ಅನಿಸುತ್ತಿದೆ. ಜೊತೆಗೆ ಶ್ವಾನ ಪ್ರಿಯರಿಗೆ ಒಂದು ಅವಕಾಶ ಕೊಡೋಣ, ‘ಶ್ವಾನ ಶಾಲಾ’ಗಳಲ್ಲಿ ಹಿಡಿದಿಟ್ಟುರುವ ಬೀದಿ ನಾಯಿಗಳ ಮೇಲೆ ಪ್ರೀತಿ ಇದ್ದರೆ, ಅವುಗಳನ್ನು ಕೊಂಡೊಯ್ದು ಮನೆಗಳಲ್ಲಿ ಇಟ್ಟುಕೊಂಡು ಸಾಕಲಿ, ಆದರೆ, ಅವುಗಳನ್ನು ಎಂದಿಗೂ ಬೀದಿಯಲ್ಲಿ ಬಿಡಕೂಡದು; ಬಿಟ್ಟರೆ ದಂಡ! ಬೀದಿನಾಯಿಗಳನ್ನು ಹಿಡಿದ ನಂತರ ಅವುಗಳನ್ನು ‘ಶ್ವಾನ ಶಾಲಾ’ದಲ್ಲಿ ನೋಂದಣಿ ಮಾಡಿ ಪ್ರತಿಯೊಂದು ನಾಯಿಗೂ ಕ್ರಮ ಸಂಖ್ಯೆ ನೀಡಿ, ಕಿವಿಗೆ ಆ ಸಂಖ್ಯೆಯಿರುವ ಬಿಲ್ಲೆಯನ್ನು ಸಿಕ್ಕಿಸಿದರೆ ಒಳಿತು. ಜೊತೆಗೆ ಆ ನಾಯಿಯನ್ನು ಕೊಂಡೊಯ್ಯುವ ಶ್ವಾನ ಪ್ರಿಯರ ಮಾಹಿತಿಯೂ ನೋಂದಣಿಯಾಗುವಂತೆ ಮಾಡುವ ವ್ಯವಸ್ಥೆ ಮಾಡಿದರೆ ಉತ್ತಮ ಅನಿಸಿದೆ.

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮನೆ ಗೇಟುಗಳ ಮುಂದೆ ಅಪರಿಚಿತರ ‘ಕಾರುಬಾರು’

ಮನೆಗಳ ಗೇಟಿನ ಮುಂದೆಯೇ ಅಪರಿಚಿತರ ಕಾರು ನಿಲ್ಲಿಸುವ ಕೆಟ್ಟ ಪರಂಪರೆಯನ್ನು ಅನೇಕ ಕಡೆ ಕಾಣಬಹುದು. ಸೂರ್ಯಬೇಕರಿ ಬಳಿಯ ಎರಡನೇ ಅಡ್ಡರಸ್ತೆಯಲ್ಲಿ…

2 hours ago

ಓದುಗರ ಪತ್ರ: ರೈಲು ನೀರಿನ ಬಾಟಲಿಗೆ ಒಂದು ರೂ. ಹೆಚ್ಚು ವಸೂಲಿ!

ಭಾರತೀಯ ರೈಲ್ವೆಯನ್ನು ನೆಚ್ಚಿಕೊಂಡಿರುವವರು ಕೊಟ್ಯಂತರ ಮಂದಿ ಇದ್ದಾರೆ. ಈ ಪ್ರಯಾಣಿಕರ ಅನುಕೂಲಕ್ಕಾಗಿ ಹಲವಾರು ರೈಲು ನಿಲ್ದಾಣಗಳಲ್ಲಿ ರೈಲು ನೀರಿನ ಬಾಟಲಿಗಳ…

2 hours ago

ಓದುಗರ ಪತ್ರ: ಹೆಚ್ಚಿನ ಟಿಕೆಟ್ ದರ ನೀಡಲು ಸಿದ್ಧರಾಗಬೇಕಾ?

ಬೆಲೆ ಹೆಚ್ಚಳವೆಂಬುದು ಈಗ ಅನಿರೀಕ್ಷಿತವಲ್ಲವೆಂಬುದು ಇತ್ತೀಚಿನ ದಿನಗಳಲ್ಲಿ ಕಂಡುಬರುತ್ತಿದೆ. ಸದ್ಯದಲ್ಲೆ ಇದಕ್ಕೆ ಸೇರ್ಪಡೆಯಾಗುವಂತಿದೆ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಬಸ್…

2 hours ago

ಬಡಮಕ್ಕಳಿಗೆ ಬೆಚ್ಚಗಿನ ಬದುಕು ನೀಡುವ ಕುಶಾಲ್ ರಾಜ್

ಪಂಜು ಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳ ಶಿಕ್ಷಣಕ್ಕೆ ನೆರವಾಗಲು ‘ಲೋಟಸ್ ಪೆಟಲ್ ಫೌಂಡೇಶನ್’ ಸ್ಥಾಪನೆ  ಜಾರ್ಖಂಡಿನ ರಾಂಚಿಯ ಕುಶಾಲ್ ರಾಜ್…

2 hours ago

ಬಸವನಹುಳು ಸಾಕಣೆಯೂ ಲಾಭದಾಯಕ

ಕೇಶವ್ ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯಿಂದ ಅಚ್ಚರಿಯ ಸಂಶೋಧನೆ! ಮೈಸೂರು: ಬಸವನಹುಳುಗಳನ್ನು ಜಮೀನುಗಳಲ್ಲಿ ರೈತರು ನೋಡಿದರೆ, ನಮ್ಮ…

2 hours ago

ಎಸ್‌ಐಆರ್: ಎನ್.ಆರ್.ಕ್ಷೇತ್ರದಲ್ಲೇ ೧ ಲಕ್ಷ ಮತದಾರರು ಔಟ್

ಕೆ.ಬಿ.ರಮೇಶನಾಯಕ ನಮೂನೆ-೬ ಸಲ್ಲಿಸಿ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಇನ್ನೂ ಇದೆ ಅವಕಾಶ  ಮೈಸೂರು: ಮುಂಬರುವ ವಿಧಾನಸಭೆ, ಲೋಕಸಭಾ ಚುನಾವಣೆಗೂ…

2 hours ago