Andolana originals

ಕುಕ್ಕರಹಳ್ಳಿ ಕೆರೆ ವಿವಾದ : ʻಶ್ವಾನ ಶಾಲಾʼ ಗಳನ್ನು ನಿರ್ಮಿಸಿ

ವಸಂತಕುಮಾರ್ ಮೈಸೂರು ಮಠ,

ಸಾಮಾಜಿಕ ಹೋರಾಟಗಾರ ಮತ್ತು ಪರಿಸರವಾದಿ.

ಮೈ ಸೂರಿನ ಕುಕ್ಕರಹಳ್ಳಿ ಕೆರೆಯಲ್ಲಿ ಬೀದಿ ನಾಯಿಗಳಿಗೆ ಶ್ವಾನ ಪ್ರಿಯರು ಆಹಾರ ನೀಡುವುದರ ಬಗ್ಗೆ ಸಾಕಷ್ಟು ವಾದ ವಿವಾದಗಳು ಹರಿದಾಡುತ್ತಿವೆ. ಮೈಸೂರು ವಿಶ್ವವಿದ್ಯಾನಿಲಯಕ್ಕೆ ಇದೊಂದು ನುಂಗಲಾರದ ಬಿಸಿ ತುಪ್ಪವಾಗಿದೆ. ಬೀದಿ ನಾಯಿಗಳಿಂದ ಕಚ್ಚಿಸಿಕೊಂಡಿರುವ ಹಲವರು, ಅದರಲ್ಲೂ ಮಕ್ಕಳು, ಹೆಂಗಸರು ಪಡಬಾರದ ಪಾಡುಪಟ್ಟಿರುವುದನ್ನು ನಾವು ಕಂಡಿದ್ದೇವೆ. ಒಂದು ಕಡೆ ಇದು ಸತ್ಯವಾದರೆ, ನಾಯಿಗಳಿಗೆ ಆಹಾರ ನೀಡುವುದು ಜನರ ಹಕ್ಕು ಎಂದು ಹಲವರು ಶ್ವಾನ ಪ್ರಿಯರು ಪ್ರತಿಪಾದಿಸುತ್ತಿದ್ದಾರೆ. ಮೈಸೂರು ನಗರಪಾಲಿಕೆಯ ನಾಯಿ ಸ್ಕ್ವಾಡ್ ಆಗಾಗ ಬೀದಿ ನಾಯಿಗಳನ್ನು ಹಿಡಿದೊಯ್ದು ಅದಕ್ಕೆ ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿ, ಮತ್ತೆ ಬೀದಿಗೆ ಬಿಡುತ್ತಿರುವುದು ಗೊತ್ತಿರುವ ವಿಷಯ. ಅಷ್ಟರೊಳಗೆ ಆ ನಾಯಿಗಳು ಸಾಕಷ್ಟು ಸಂತಾನ ಉತ್ಪಾದನೆ ಮಾಡಿರುತ್ತವೆ; ಒಂದು ಹೆಣ್ಣು ನಾಯಿ ಸರಿಸುಮಾರು ೪-೬ ಮರಿಗಳಿಗೆ ಜನ್ಮ ಕೊಡುತ್ತದೆ.

ಈ ಸಮಸ್ಯೆಯನ್ನು ಬಗೆಹರಿಸಲು ಇದೊಂದು ಸಲಹೆ. ಭಾರತದಲ್ಲಿ ಗೋವುಗಳನ್ನು ಕಂಡರೆ ಪೂಜ್ಯತಾ ಭಾವನೆ ಇದೆ. ಆದರೆ ಬಿಡಾಡಿ ಹೋರಿಗಳನ್ನು ಸಾಕಲಾರದೆ, ಅವುಗಳನ್ನು ನಡುಬೀದಿಗಳಲ್ಲಿ ಬಿಟ್ಟಿರುವುದನ್ನು ಮತ್ತು ಅವುಗಳಿಂದ ವಾಹನ ಸವಾರರಿಗೆ ಎಷ್ಟು ಅನನುಕೂಲವಾಗುತ್ತದೆ ಎನ್ನುವುದನ್ನು ಇಂದಿಗೂ ನಾವು ಕಾಣುತ್ತಿದ್ದೇವೆ. ಒಂದು ಕಾಲದಲ್ಲಿ ದನದ ಮಾಂಸ ತಿನ್ನುವವರು ಅವುಗಳನ್ನು ಸಾಗಿಸುತ್ತಿದ್ದುದು ಒಂದು ನೋವಿನ ಸಂಗತಿಯಾಗಿತ್ತು. ಈ ದಾರುಣ ಪರಿಸ್ಥಿತಿಯನ್ನು ನೀಗಿಸಲು ಸರ್ಕಾರ ಮತ್ತು ಗೋವು ಪ್ರಿಯರು ಹಲವಾರು ಗೋವು ಶಾಲೆಗಳನ್ನು ನಿರ್ಮಿಸಿ, ಅವುಗಳಿಗೆ ಆಹಾರ, ನೀರು ಮತ್ತು ಅವು ಸ್ವಾಭಾವಿಕ ಮರಣ ಹೊಂದುವವರೆಗೆ ಅವುಗಳ ಆರೋಗ್ಯ ಮತ್ತು ಔಷಧಗಳನ್ನು ನೀಡುವ ವ್ಯವಸ್ಥೆ ಮಾಡಿದ್ದಾರೆ.

ಅಂತೆಯೇ ‘ಶ್ವಾನ ಶಾಲಾ’ಗಳನ್ನು ಏಕೆ ನಿರ್ಮಿಸಬಾರದು? ಶ್ವಾನಪ್ರಿಯರಾಗಲೀ, ಸರ್ಕಾರವಾಗಲಿ ಅಥವಾ ಸ್ವಯಂ ಸೇವಾ ಸಂಸ್ಥೆಗಳಾಗಲಿ ಮುಂದೆ ಬಂದು ಶ್ವಾನಗಳ ಮೇಲಿರುವ ತಮ್ಮ ಪ್ರೀತಿ, ಪ್ರೇಮವನ್ನು ‘ಶ್ವಾನ ಶಾಲಾ’ಗಳನ್ನು ನಿರ್ಮಿಸಿ ಗೋವು ಶಾಲಾಗಳಲ್ಲಿ ನೀಡುತ್ತಿರುವ ಸಕಲ ಸೌಕರ್ಯಗಳನ್ನು ಬೀದಿನಾಯಿಗಳಿಗೆ ಸಿಗುವಂತೆ ಮಾಡಿದರೆ ಎಲ್ಲರೂ ನಿರಾಳವಾಗಿರಬಹುದು ಅನಿಸುತ್ತಿದೆ. ಜೊತೆಗೆ ಶ್ವಾನ ಪ್ರಿಯರಿಗೆ ಒಂದು ಅವಕಾಶ ಕೊಡೋಣ, ‘ಶ್ವಾನ ಶಾಲಾ’ಗಳಲ್ಲಿ ಹಿಡಿದಿಟ್ಟುರುವ ಬೀದಿ ನಾಯಿಗಳ ಮೇಲೆ ಪ್ರೀತಿ ಇದ್ದರೆ, ಅವುಗಳನ್ನು ಕೊಂಡೊಯ್ದು ಮನೆಗಳಲ್ಲಿ ಇಟ್ಟುಕೊಂಡು ಸಾಕಲಿ, ಆದರೆ, ಅವುಗಳನ್ನು ಎಂದಿಗೂ ಬೀದಿಯಲ್ಲಿ ಬಿಡಕೂಡದು; ಬಿಟ್ಟರೆ ದಂಡ! ಬೀದಿನಾಯಿಗಳನ್ನು ಹಿಡಿದ ನಂತರ ಅವುಗಳನ್ನು ‘ಶ್ವಾನ ಶಾಲಾ’ದಲ್ಲಿ ನೋಂದಣಿ ಮಾಡಿ ಪ್ರತಿಯೊಂದು ನಾಯಿಗೂ ಕ್ರಮ ಸಂಖ್ಯೆ ನೀಡಿ, ಕಿವಿಗೆ ಆ ಸಂಖ್ಯೆಯಿರುವ ಬಿಲ್ಲೆಯನ್ನು ಸಿಕ್ಕಿಸಿದರೆ ಒಳಿತು. ಜೊತೆಗೆ ಆ ನಾಯಿಯನ್ನು ಕೊಂಡೊಯ್ಯುವ ಶ್ವಾನ ಪ್ರಿಯರ ಮಾಹಿತಿಯೂ ನೋಂದಣಿಯಾಗುವಂತೆ ಮಾಡುವ ವ್ಯವಸ್ಥೆ ಮಾಡಿದರೆ ಉತ್ತಮ ಅನಿಸಿದೆ.

 

ಆಂದೋಲನ ಡೆಸ್ಕ್

Recent Posts

ಹಾಸನ: ಆಟೋ ಪಲ್ಟಿಯಾಗಿ ತಾಯಿ-ಮಗ ಸಾವು

ಹಾಸನ: ಮಗನನ್ನು ಶಾಲೆಗೆ ಸೇರಿಸಲಯ ಪತ್ರಕ್ಕಾಗಿ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಚಾಲಕನ ಅತಿಬೇಗ ಮತ್ತು ನಿರ್ಲಕ್ಷ್ಯದಿಂದ ಪಲ್ಟಿಯಾದ ಪರಿಣಾಮ ಅಮ್ಮ…

1 hour ago

ಚಾಮುಂಡಿಬೆಟ್ಟಕ್ಕೆ ಬಾಲಿವುಡ್ ನಟ ರಣವೀರ್ ಸಿಂಗ್ ಭೇಟಿ ವಿಚಾರ: ಅರ್ಚಕ ಸುನೀಲ್ ದೀಕ್ಷಿತ್ ಪ್ರತಿಕ್ರಿಯೆ

ಮೈಸೂರು: ನಾಡ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಭೇಟಿ ನೀಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಚಾಮುಂಡಿಬೆಟ್ಟದ…

2 hours ago

ರೈತರ ಆದಾಯ ಹೆಚ್ಚಿಸುವುದೇ ನಮ್ಮ ಸರ್ಕಾರದ ಗುರಿ: ಎನ್.ಚಲುವರಾಯಸ್ವಾಮಿ.

ಬೆಂಗಳೂರು: ಇಂದು ಕೃಷಿ ಕ್ಷೇತ್ರ ಅನೇಕ ಸವಾಲುಗಳನ್ನು ಎದುರಿಸುತ್ತಿದೆ. ಹವಾಮಾನ ವೈಪರೀತ್ಯ, ಉತ್ಪಾದನಾ ವೆಚ್ಚದ ಏರಿಕೆ, ಮಾರುಕಟ್ಟೆ ಅಸ್ಥಿರತೆ ಮತ್ತು…

3 hours ago

ಸಿಎಂ ಬದಲಾದರೆ ಪರಮೇಶ್ವರ್‌ ಸಿಎಂ ಆಗಲಿ: ಮಾಜಿ ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಿಎಂ ಬದಲಾವಣೆ ಆದರೆ ಪರಮೇಶ್ವರ್‌ ಮುಖ್ಯಮಂತ್ರಿಯಾಗಲಿ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಇಂದು…

3 hours ago

ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ವಿರೋಧಿಸಿ ಪ್ರತಿಭಟನೆ

ಮೈಸೂರು: ರಸಗೊಬ್ಬರ ಖರೀದಿಗೆ ಎಫ್‌ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು. ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ…

4 hours ago

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ…

4 hours ago