Andolana originals

ಜಲಾವೃತವಾಗುವ ಕುಳ್ಳಂಕನಹುಂಡಿ

ಮೈಸೂರು: ನಂಜನಗೂಡಿನಿಂದ ತಿ.ನರಸೀಪುರ ರಸ್ತೆಯಲ್ಲಿ ಹೊರಟು, ಸುಮಾರು 5 ಕಿ.ಮೀ. ಸಾಗಿದ ಬಳಿಕ ಸಿಗುವ ಮುಳ್ಳೂರು ಗ್ರಾಮದ ಗೇಟ್‌ನಲ್ಲಿ ಎಡಕ್ಕೆ ತಿರುವು ಪಡೆದು ನೇರವಾಗಿ ತೆರಳಿದರೆ, ಅಂದಾಜು 5 ಕಿ.ಮೀ. ದೂರದಲ್ಲಿ ಕುಳ್ಳಂಕನಹುಂಡಿ ಗ್ರಾಮ ಸಿಗುತ್ತದೆ. ಅದರ ಮಗ್ಗುಲಿನಲ್ಲೇ ಕಪಿಲಾ ನದಿಯ ಹರಿವು. ಕಣ್ಣನ ತಂಪು ಮಾಡುವ ನದಿಯ ಭವ್ಯ ನೋಟ; ಸ್ಥಳೀಯರನ್ನು ಜಡಗೊಳಿಸಿದೆ ಎನ್ನಬಹುದು.

ಕಾರಣವಿಷ್ಟೇ, ಹೊಸದಾಗಿ ಆ ಊರಿಗೆ ಭೇಟಿ ನೀಡುವ ಮಂದಿಯನ್ನು ನದಿಯು ಅತ್ಯಂತ ಆಕರ್ಷಕವಾಗಿ, ಸೂಜಿಗಲ್ಲಿನಂತೆ ಸೆಳೆಯಬಹದು. ಆದರೆ, ಗ್ರಾಮಸ್ಥರಿಗೆ ನದಿಯ ಅಬ್ಬರದ್ದೇ ಆತಂಕ. ಇತ್ತೀಚೆಗೆ ನದಿಯ ಒಡಲುಕ್ಕಿ ನೀರು ಹರಿದಾಗ, ಹಲವು ಮನೆಗಳಿಗೆ ನೀರು ನುಗ್ಗಿತ್ತು. ಅವರನ್ನು ಗ್ರಾಮದ ಎತ್ತರದ ಪ್ರದೇಶಕ್ಕೆ ಸ್ಥಳಾಂತರ ಗೊಳಿಸಲಾಗಿತ್ತು. 125 ಮನೆಗಳಿರುವ ಈ ಪುಟ್ಟ ಹಳ್ಳಿಯಲ್ಲಿ ಹತ್ತಾರು ಕುಟುಂಬದವರು ಸಾಮಾನ್ಯವಾಗಿ ನೆರೆಯ ಬರೆಗೆ ಒಳಗಾಗುತ್ತಾರೆ. ಉಳಿದವರು ಸುರಕ್ಷಿತವಾಗಿರುತ್ತಾರೆ. ಅವರಿಗೆ ಪ್ರವಾಹ, ನೆರೆಯ ಭಯವಿಲ್ಲ.

ಆದರೆ, ಕಪಿಲಾ ನದಿಯಲ್ಲಿ ಪ್ರವಾಹ ಉಂಟಾದರೆ, ಕುಳ್ಳಂಕನಹುಂಡಿ ಮತ್ತು ಮುಳ್ಳೂರು ಗ್ರಾಮದ ನಡುವಿನ ರಸ್ತೆಯ ಸಂಪರ್ಕ ಕಡಿದು ಹೋಗುತ್ತದೆ. ನದಿಯ ಇನ್ನೊಂದು ಭಾಗದಿಂದ ನೀರು ಊರೊಳಗೆ ನುಗ್ಗುತ್ತದೆ. ಅಂದರೆ ಬಹುತೇಕ ಗ್ರಾಮ ದ್ವೀಪದಂತಾಗುತ್ತದೆ. ಆದರೆ, ದಿನಸಿಗಳಿಗೆ ತಾಪತ್ರಯ ಆಗುವುದಿಲ್ಲ ಎನ್ನುತ್ತಾರೆ ಗ್ರಾಮದವರಾದ ಲೋಕೇಶ್, ರಂಗಸ್ವಾಮಿ, ಅಂಕ, ಜಯಕುಮಾರ್ ಮತ್ತು ರಾಜೇಶ್ ಅವರು.

ಆದರೆ, ಶಾಶ್ವತವಾಗಿ ಈ ಸಮಸ್ಯೆಯಿಂದ ರಕ್ಷಣೆ ಪಡೆಯಲು ಗ್ರಾಮವನ್ನೇ ಸ್ಥಳಾಂತರ ಮಾಡಬೇಕು ಎಂಬುದಕ್ಕೆ ಭಿನ್ನ ಅಭಿಪ್ರಾಯ ವ್ಯಕ್ತವಾಗುತ್ತಿದೆ. ಕೆಲವರು ಆಮೇಲೆ ನೋಡೋಣ ಬಿಡಿ ಎಂದು ಜಾರಿಕೊಂಡರೆ, ಇನ್ನಷ್ಟು ಮಂದಿ ಪಲ್ಲಟವಾಗಲಿ ಎನ್ನುತ್ತಾರೆ.

ಸ್ಥಳಾಂತರಿಸಿದರೆ ಹೋಗುವುದಕ್ಕೆ ಸಿದ್ಧ
ಕುಳ್ಳಂಕನಹುಂಡಿ ಗ್ರಾಮವು ಪ್ರವಾಹ ಬಂದಾಗಲೆಲ್ಲ ಕಂಗಾಲಾಗುತ್ತಿದ್ದು, ಶಾಶ್ವತವಾಗಿ ಸ್ಥಳಾಂತರ ಮಾಡುವ ಉದ್ದೇಶದಿಂದ ಸುಮಾರು 30 ವರ್ಷಗಳ ಹಿಂದೆ ಶಾಸಕರಾಗಿದ್ದ ಡಿ.ಟಿ.ಜಯ ಕುಮಾರ್‌ ಅವರು ನಂಜನಗೂಡು- ತಿ.ನರಸೀಪುರ ರಸ್ತೆಯಲ್ಲಿ ಮುಳ್ಳೂರು ಗೇಟ್ ಬಳಿ ನಿವೇಶನ ಗುರುತಿಸಿದ್ದರು. ಆದರೆ, ನಮ್ಮ ಹಿರೀಕರು ಒಪ್ಪಲಿಲ್ಲ. ಈಗಲೂ ಸ್ಥಳಾಂತರ ಮಾಡಿದರೆ ಹೋಗುವುದಕ್ಕೆ ನಮ್ಮ ಕುಟುಂಬ ಸಿದ್ಧ.
-ಮಹದೇವನಾಯಕ, ಕುಳ್ಳಂಕನಹುಂಡಿ.

 

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

3 hours ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

4 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

5 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

6 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

11 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

13 hours ago