Andolana originals

ಕುಶಾಲನಗರ: ಕೆಎಸ್‌ಆರ್‌ಟಿಸಿ ಡಿಪೋ ಕಾಮಗಾರಿ ಚುರುಕು

ಪುನೀತ್ ಮಡಿಕೇರಿ

ಒಟ್ಟು ೮ ಕೋಟಿ ರೂ. ಮೊತ್ತದ ಯೋಜನೆ; ಸಾರಿಗೆ ಸಮಸ್ಯೆಗಳಿಗೆ ಸಿಗಲಿದೆ ಪರಿಹಾರ 

ಮಡಿಕೇರಿ: ಕುಶಾಲನಗರದ ಬಹು ನಿರೀಕ್ಷಿತ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಕಾಮಗಾರಿ ಭರದಿಂದ ಸಾಗಿದ್ದು,ಎಲ್ಲವೂ ಅಂದುಕೊಂಡಂತೆ ಆದರೆ ಮಳೆಗಾಲದ ಒಳಗೆ ಕಾರ್ಯಾರಂಭ ಮಾಡುವ ಎಲ್ಲಾ  ಸಾಧ್ಯತೆಗಳಿವೆ.

ಒಟ್ಟು ೮ ಕೋಟಿ ರೂ. ಮೊತ್ತದ ಈ ಯೋಜನೆಯ ಕಟ್ಟಡ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ನೆಲಕ್ಕೆ ಕಾಂಕ್ರೀಟ್ ಹಾಕು ವುದು ಮತ್ತು ಯಂತ್ರೋಪಕರಣಗಳ ಅಳವಡಿಕೆ ಕೆಲಸ ನಡೆಯಬೇಕಿದೆ. ಇಲ್ಲಿ ಬಸ್ ಡಿಪೋ ಆರಂಭವಾದ ನಂತರ ಕೊಡಗಿನ ಸಾರಿಗೆ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ.

ಪಶ್ಚಿಮ ಘಟ್ಟದ ಸೆರಗಿನಲ್ಲಿ ಇರುವ ಕೊಡಗು ಬೆಟ್ಟ ಗುಡ್ಡಗಳಿಂದ ಕೂಡಿದ ಪ್ರದೇಶವಾಗಿದ್ದು, ಇಲ್ಲಿನ ಕೆಲವು ಕುಗ್ರಾಮಗಳಿಗೆ ಈಗಲೂ ಬಸ್ ಸಂಪರ್ಕವೇ ಇಲ್ಲ. ಜಿಗೆ ದಿನಂಪ್ರತಿ ಸಾವಿರಾರು ಪ್ರವಾಸಿಗರು ಭೇಟಿ ನೀಡುತ್ತಾರೆ. ವಾರಾಂತ್ಯ ಮತ್ತು ರಜಾ ದಿನಗಳಲ್ಲಿ ಪ್ರವಾಸಿಗರ ಸಂಖ್ಯೆ ಮತ್ತಷ್ಟು ಹೆಚ್ಚು ಇರುತ್ತದೆ. ಆದರೆ, ಭಾಗ ಮಂಡಲ, ತಲಕಾವೇರಿಯಂತಹ ಯಾತ್ರಾ ಸ್ಥಳಗಳು ಸೇರಿದಂತೆ ಬಹುತೇಕ ಪ್ರವಾಸಿ ತಾಣಗಳಿಗೆ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಸಮರ್ಪಕವಾಗಿ ಇಲ್ಲದೆ ಪರಿತಪಿಸುವಂತಾಗಿದೆ. ಕೊಡಗು ಜಿಲ್ಲೆಯಲ್ಲಿ ಸದ್ಯಕ್ಕೆ ಮಡಿಕೇರಿ ಯಲ್ಲಿ ಮಾತ್ರ ಏಕೈಕ ಕೆಎಸ್‌ಆರ್‌ಟಿಸಿ ಬಸ್ ಡಿಪೋ ಇದೆ. ಆದ್ದರಿಂದ ಸಾರಿಗೆ ಸಂಪರ್ಕದಲ್ಲಿ ಸಾಕಷ್ಟು ಅವ್ಯವಸ್ಥೆ ಕಂಡು ಬರುತ್ತಿದೆ.

ಕೆಎಸ್‌ಆರ್‌ಟಿಸಿ ಮೂಲಗಳ ಪ್ರಕಾರ ಮಡಿಕೇರಿ ಡಿಪೋದಲ್ಲಿ ೧೧ ರಾಜಹಂಸ ಸೇರಿದಂತೆ ಒಟ್ಟು ೧೨೫ ಬಸ್‌ಗಳು ಇವೆ. ಪ್ರತಿನಿತ್ಯ ಸಂಚಾರದ ೭೦ ಮಾರ್ಗಗಳು ಸೇರಿ ೧೧೨ ಮಾರ್ಗಗಳಲ್ಲಿ ಬಸ್‌ಗಳು ಓಡಾಡುತ್ತಿವೆ. ಮೈಸೂರು, ಬೆಂಗಳೂರು ಹಾಗೂ ನಗರ ಪ್ರದೇಶಗಳಿಗೆ ಮಡಿಕೇರಿ ಡಿಪೋದಿಂದ ಹೆಚ್ಚಿನ ಬಸ್‌ಗಳನ್ನು ಬಿಡಲಾಗಿದೆ. ಆದರೆ, ಜಿಯ ಗ್ರಾಮಾಂತರ ಪ್ರದೇಶಗಳನ್ನು ನಿರ್ಲಕ್ಷಿಸಲಾಗಿದೆ ಎನ್ನುವ ಆರೋಪಗಳಿವೆ. ಇದರಿಂದಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಉದ್ಯೋಗಿಗಳು, ಕಚೇರಿ ಕೆಲಸಗಳಿಗೆ ತೆರಳುವವರಿಗೆ ತೊಂದರೆ ಆಗುತ್ತಿದೆ.

೨೦೨೪ರ ಜನವರಿಯಲ್ಲಿ ಕೊಡಗಿಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯಕುಶಾಲನಗರ ಕೆಎಸ್‌ಆರ್‌ಟಿಸಿ ಬಸ್ ಡಿಪೋಗೆ ಶಂಕುಸ್ಥಾಪನೆ ನೆರವೇರಿಸಿದ್ದರು. ನಂತರ ಅದೇ ವರ್ಷ ಮಾ.೭ಕ್ಕೆ ಮಡಿಕೇರಿ ಕ್ಷೇತ್ರದ ಶಾಸಕ ಡಾ.ಮಂಥರ್‌ಗೌಡ ಕಾಮಗಾರಿಗೆ ಚಾಲನೆ ನೀಡಿದ್ದರು.

ಅಲ್ಲಿಂದ ಈಚೆಗೆ ಕಾಮಗಾರಿ ಚುರುಕಿನಿಂದ ನಡೆಯುತ್ತಿದ್ದು ಶೇ.೭೦ ಕೆಲಸ ಮುಗಿದಿರುವ ಬಗ್ಗೆ ಕೆಎಸ್‌ಆರ್‌ಟಿಸಿ ಅಽಕಾರಿಗಳು ಮಾಹಿತಿ ನೀಡಿದ್ದಾರೆ. ಉಳಿದಿರುವ ಕೆಲಸಗಳು ಇನ್ನು ೨ ತಿಂಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದ್ದು, ಮಳೆಗಾಲ ಶುರುವಾಗುವುದರೊಳಗೆ ಡಿಪೋ ಕಾರ್ಯಾರಂಭಿಸುವುದು ಬಹುತೇಕ ಖಚಿತವಾಗಿದೆ.

ಒಂದು ಬಸ್ ಡಿಪೋಗೆ ಅಗತ್ಯವಿರುವ ಪೆಟ್ರೋಲ ಬಂಕ್, ವರ್ಕ್‌ಶಾಪ್, ಕಚೇರಿ, ಡಿಪೋ ಮ್ಯಾನೇಜರ್ ಚೇಂಬರ್, ಸಿಬ್ಬಂದಿ ವಸತಿ ಗೃಹ ಸೇರಿದಂತೆ ಎ ಮೂಲಭೂತ ಸೌಕರ್ಯಗಳನ್ನು ಇಲ್ಲಿ ಒದಗಿಸಲಾಗುತ್ತದೆ. ಎಲೆಕ್ಟ್ರಿಕ್ ಬಸ್‌ಗಳ ಚಾರ್ಜಿಂಗ್ ಸ್ಟೇಷನ್ ನಿರ್ಮಾಣ ಟೆಂಡರ್‌ನಲ್ಲಿ ಇಲ್ಲ. ಆದರೆ, ಈಗಿನ ಅಗತ್ಯಗಳಿಗೆ ತಕ್ಕಂತೆ ಸವಲತ್ತುಗಳನ್ನು ಕಲ್ಪಿಸುವ ಚಿಂತನೆಯೂ ಅಧಿಕಾರಿಗಳಲ್ಲಿ ಇದೆ. ಸದ್ಯ ಕಟ್ಟಡ ಕೆಲಸಗಳು ಬಹುತೇಕ ಮುಗಿದಿವೆ. ಕೇಬಲ ಅಳವಡಿಕೆ, ಟ್ರಾನ್ಸ್ಫಾರ್ಮರ್ ಅಳವಡಿಕೆ, ಬಸ್ ಗಳ ಸರ್ವಿಸ್‌ಗೆ ಅಗತ್ಯ ಇರುವ ಯಂತ್ರೋಪಕರಣಗಳ ಅಳವಡಿಕೆ, ನೆಲಕ್ಕೆ ಕಾಂಕ್ರೀಟ್ ಹಾಕುವ ಕೆಲಸ ಆಗಬೇಕಿದೆ.

ಇದೀಗ ಕಾಮಗಾರಿ ಶುರುವಾಗಿರುವ ಮೈಸೂರು – ಕುಶಾಲನಗರ ಚತುಷ್ಪಥ ಹೆದ್ದಾರಿ ಬಸವನಹಳ್ಳಿ ತನಕವೂ ಬರಲಿದ್ದು, ನೂತನ ಡಿಪೋಗೆ ಈ ಹೆದ್ದಾರಿಯಿಂದ ಸಂಪರ್ಕ ಕಲ್ಪಿಸುವ ರೀತಿಯಲ್ಲಿ ಯೋಜನೆ ರೂಪಿಸಲಾಗಿದೆ. ಜಿಎಸ್‌ಟಿ, ವಿನ್ಯಾಸ ವೆಚ್ಚ ಸೇರಿದಂತೆ ಸುಮಾರು ೮ ಕೋಟಿ ರೂ. ವೆಚ್ಚದಲ್ಲಿ ಕುಶಾಲನಗರ ಕೆಎಸ್‌ಆರ್‌ಟಿಸಿ ಬಸ್ ಡಿಪೋ ತಲೆ ಎತ್ತುತ್ತಿದೆ. ಈ ಡಿಪೋದಿಂದ ಕಾರ್ಯಾಚರಣೆ ನಡೆಸುವ ಬಸ್‌ಗಳ ಸಂಖ್ಯೆ ಇನ್ನೂ ನಿಗದಿಯಾಗಿಲ್ಲ. ಮೈಸೂರು ಮತ್ತು ಹಾಸನ ಜಿಗಳಿಗೆ ಹೊಂದಿಕೊಂಡಂತೆ ಕುಶಾಲನಗರ ಇರುವುದರಿಂದ ಇಲ್ಲಿಗೆ ಬಸ್‌ಗಳ ಬೇಡಿಕೆ ಹೆಚ್ಚಿದ್ದು, ಅದಕ್ಕೆ ಪೂರಕವಾಗಿ ಬಸ್‌ಗಳನ್ನು ಒದಗಿಸುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

” ಕುಶಾಲನಗರ ತಾಲ್ಲೂಕಿನ ಜನರ ಬಹು ದಿನಗಳ ಬೇಡಿಕೆ ಈಡೇರುವ ಕಾಲ ಬಂದಿದೆ. ಬಸವನ ಹಳ್ಳಿಯಲ್ಲಿ ಕೆಎಸ್‌ಆರ್‌ಟಿಸಿ ಡಿಪೋ ನಿರ್ಮಾಣ ಕೆಲಸಗಳು ಚುರುಕಾಗಿ ನಡೆದಿವೆ. ಬಹುತೇಕ ಕಾಮಗಾರಿ ಪೂರ್ಣಗೊಂಡಿದೆ. ಇನ್ನು ೧-೨ ತಿಂಗಳಲ್ಲಿ ಡಿಪೋ ಸಂಪೂರ್ಣ ಸಿದ್ಧವಾಗಲಿದೆ. ಕುಶಾಲನಗರ ಡಿಪೋ ಕಾರ್ಯಾರಂಭ ಮಾಡಿದ ನಂತರ ಜಿಯ ಸಾರಿಗೆ ಸಮಸ್ಯೆಗಳು ಬಹುತೇಕ ಪರಿಹಾರ ಆಗುವ ನಿರೀಕ್ಷೆ ಇದೆ.”

-ಡಾ.ಮಂಥರ್‌ಗೌಡ, ಮಡಿಕೇರಿ ಶಾಸಕ 

 

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಮುತ್ತತ್ತಿ ನದಿ ಬಳಿ ಪೊಲೀಸರನ್ನು ನಿಯೋಜಿಸಿ

ಮಂಡ್ಯ ಜಿಲ್ಲೆಯ ಮುತ್ತತ್ತಿಯಲ್ಲಿ ಕಾವೇರಿ ನದಿ ನೀರಿಗೆ ಇಳಿದು ಸೆಲ್ಛಿ ತೆಗೆದುಕೊಳ್ಳಲು ಹೋದ ಒಂದೇ ಕುಟುಂಬದ ನಾಲ್ವರು ಹಾಗೂ ಕಾರು…

3 hours ago

ಓದುಗರ ಪತ್ರ: ಚಪ್ಪಲಿ ಎಸೆತ ಪ್ರಕರಣ ಎಳೆದಾಡುವುದು ಬೇಡ

ಚಿಕ್ಕಬಳ್ಳಾಪುರ ಶಾಸಕರಾದ ಪ್ರದೀಪ್ ಈಶ್ವರ್ ಅವರ ಮೇಲೆ ಜಾ.ದಳ ಕಾರ್ಯಕರ್ತರೊಬ್ಬರು ಚಪ್ಪಲಿಯನ್ನು ಎಸೆದಿದ್ದು, ಈಗಾಗಲೇ ಆ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ.…

3 hours ago

ಓದುಗರ ಪತ್ರ: ತರಬೇತಿಗೆ ಅರ್ಜಿ ಏಕೆ ಕರೆದಿಲ್ಲ?

ಸರ್ಕಾರದ ಯಾವುದೇ ಯೋಜನೆ, ಕಾರ್ಯಕ್ರಮ, ಸವಲತ್ತು ಮೊದಲು ದಲಿತ, ದಮನಿತ, ಶೋಷಿತ ವರ್ಗಕ್ಕೆ ತಲುಪಬೇಕು. ಅವರು ಸಾಮಾಜಿಕವಾಗಿ, ಆರ್ಥಿಕವಾಗಿ ಮೇಲೆ…

3 hours ago

ಓದುಗರ ಪತ್ರ: ಬಿಡದಿ ಟೌನ್ ಶಿಪ್: ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರಬೇಕು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಬಿಡದಿ ಟೌನ್ ಶಿಪ್ ನಿರ್ಮಾಣ ಮಾಡುವ ಮೊದಲು ಮತ್ತೊಮ್ಮೆ ಅದರ ಸಾಧಕ ಬಾಧಕಗಳ ಬಗ್ಗೆ ಯೋಚಿಸಿ…

3 hours ago

‘ರಾಮ ರಾಜಕಾರಣಕ್ಕೆ ಅಗ್ನಿ ಪರೀಕ್ಷೆ..!

ಅಯೋಧ್ಯೆಯ ಶ್ರೀರಾಮ ಮಂದಿರದಲ್ಲಿ ಭಕ್ತರು ನೀಡಿದ ಸಾವಿರಾರು ಕೋಟಿ ರೂಪಾಯಿ ದೇಣಿಗೆ ಹಣ, ಆಭರಣಗಳ ಕಳ್ಳತನ ಪ್ರಕರಣ ರಾಮಭಕ್ತರ ವಿಶ್ವಾಸವನ್ನು…

3 hours ago

ಇದು ಶೌಚಾಲಯ… ಈಗ ಅನುಪಯುಕ್ತ ವಸ್ತುಗಳ ಗೋದಾಮು!

ಎಚ್.ಎಸ್.ದಿನೇಶ್ ಕುಮಾರ್ ಮೈಸೂರಿನ ಶ್ರೀರಾಂಪುರದ ಉದ್ಯಾನದಲ್ಲಿರುವ ಶೌಚಾಲಯದ ದುಸ್ಥಿತಿ ಮೈಸೂರು: ಜನರ ಲಕ್ಷಾಂತರ ರೂ. ತೆರಿಗೆ ಹಣವನ್ನು ವ್ಯಯಿಸಿ ಕಟ್ಟಿಸಿರುವ…

3 hours ago