Andolana originals

ಕುಶಾಲನಗರ ಪುರಸಭೆ ೨೩ವಾರ್ಡ್‌ಗಳಾಗಿ ವಿಂಗಡಣೆ

ಮೇಲ್ದರ್ಜೆಗೆ ಏರಿದ ಮೂರು ವರ್ಷಗಳ ಬಳಿಕ ವಿಂಗಡಣೆ; ಶೀಘ್ರ ಚುನಾವಣೆ ನಡೆಸಲು ಒತ್ತಾಯ 

ಕುಶಾಲನಗರ: ಪುರಸಭೆಯಾಗಿ ಮೇಲ್ದರ್ಜೆಗೆ ಏರಿದ ಮೂರು ವರ್ಷಗಳ ಬಳಿಕ ಕುಶಾಲನಗರ ಪುರಸಭೆಯ ವಾರ್ಡ್‌ಗಳ ವಿಂಗಡಣೆ ಮಾಡಲಾಗಿದ್ದು, ಆಕ್ಷೇಪಣೆ ಅಥವಾ ಸಲಹೆಗಳನ್ನು ನೀಡಲು ಅವಕಾಶ ಕಲ್ಪಿಸಲಾಗಿದೆ. ಕುಶಾಲನಗರ ಪಟ್ಟಣ ಪಂಚಾಯಿತಿಯು ೨೦೨೧ರಲ್ಲಿ ಪುರಸಭೆಯಾಗಿ ಘೋಷಣೆಯಾಗಿತ್ತು. ಅಂದು ಕುಶಾಲನಗರ ಪಟ್ಟಣ ಪಂಚಾಯಿತಿ ೧೬ ವಾರ್ಡ್‌ಗಳನ್ನು ಒಳಗೊಂಡಿತ್ತು. ಇದೀಗ ೨೩ ವಾರ್ಡ್‌ಗಳಾಗಿ ವಿಂಗಡಿಸಲಾಗಿದೆ. ೨೦೧೧ರ ಜನಗಣತಿ ಪ್ರಕಾರ ವಾರ್ಡ್ ವಿಂಗಡಣೆ ಮಾಡಲಾಗಿದೆ.

ಇದನ್ನೂ ಓದಿ: ಯುವ ಸಂಭ್ರಮ | ಮೋಡಿ ಮಾಡಿದ ಶಿವತಾಂಡವ, ಶಿಳ್ಳೆ ಚಪ್ಪಾಳೆಯ ಝೇಂಕಾರ

ಕುಶಾಲನಗರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯಾಗಿ ಮೇಲ್ದರ್ಜೆಗೆ ಏರಿಸಿದ ಹಿನ್ನೆಲೆಯಲ್ಲಿ ಒಂದಷ್ಟು ಮಂದಿ ಸಂತಸ ವ್ಯಕ್ತಪಡಿಸಿದರೆ, ಮತ್ತಷ್ಟು ಮಂದಿ ವಿರೋಧ ವ್ಯಕ್ತಪಡಿಸುತ್ತಾ ಬಂದಿದ್ದರು. ಕುಶಾಲನಗರ ಪಟ್ಟಣ ಪಂಚಾಯಿತಿಯೊಂದಿಗೆ ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೂರ್ಣ ಕಂದಾಯ ಗ್ರಾಮ ಹಾಗೂ ಗುಡ್ಡೆಹೊಸೂರು ಗ್ರಾಮದ ಒಂದಷ್ಟು ವ್ಯಾಪ್ತಿ ಕುಶಾಲನಗರ ಪುರಸಭೆಗೆ ಸೇರ್ಪಡೆಯಾಗಿವೆ. ಇದರಿಂದ ನಗರದ ಅಭಿವೃದ್ಧಿ ಕುಂಠಿತವಾಗಲಿದೆ ಎಂಬ ಆರೋಪಗಳು ಕೇಳಿ ಬಂದಿವೆ.

೨೦೧೧ರ ಜನಗಣಿತಿಯ ನಂತರ ೨೦೨೧ ಜನಗಣತಿ ನಡೆಯದ ಕಾರಣ ಈ ಸಮಸ್ಯೆ ಎದುರಾಗಿದ್ದು, ೨೦೨೧ರ ಜನಗಣತಿ ಆಗಿದ್ದಲ್ಲಿ ಕುಶಾಲನಗರ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಜನಸಂಖ್ಯೆಯೇ ಸಾಕಷ್ಟಿತ್ತು ಎಂಬ ಅಭಿಪ್ರಾಯಗಳು ಕೂಡ ಕೇಳಿ ಬಂದಿವೆ. ಕುಶಾಲನಗರ ಪುರಸಭೆಯಾಗಿ ಮೇಲ್ದರ್ಜೆಗೇರಿದ ವೇಳೆ ಮುಳ್ಳುಸೋಗೆ ಗ್ರಾಮ ಪಂಚಾಯಿತಿಯ ಬಹುತೇಕ ಸದಸ್ಯರು ನ್ಯಾಯಾಲಯದಲ್ಲಿ ಆಕ್ಷೇಪಣೆ ಸಲ್ಲಿಸಿದ್ದರು. ಇದರಿಂದ ವಾರ್ಡ್ ವಿಂಗಡಣೆ ತಡವಾಗಿತ್ತು. ಕುಶಾಲನಗರ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿದ್ದ ಚುನಾಯಿತ ಸದಸ್ಯರೇ ಪುರಸಭೆ ಸದಸ್ಯರಾಗಿ ಮುಂದುವರಿದಿದ್ದರು. ಪುರಸಭೆಯ ನಾಮನಿರ್ದೇಶಿತ ಸದಸ್ಯರ ಆಯ್ಕೆಯಲ್ಲೂ ಕೂಡ ಆಕ್ಷೇಪಗಳು ವ್ಯಕ್ತವಾಗಿದ್ದವು. ಇದೀಗ ವಾರ್ಡ್ ವಿಂಗಡಣೆಯಾಗಿದ್ದು, ಆದಷ್ಟು ಬೇಗನೇ ಚುನಾವಣೆ ನಡೆಸಲು ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

ಆಕ್ಷೇಪಣೆ ಸಲ್ಲಿಸಲು ಅವಕಾಶ: ಕುಶಾಲನಗರ ಪಟ್ಟಣ ಪಂಚಾಯಿತಿಗೆ ಮುಳ್ಳುಸೋಗೆ ಗ್ರಾಮ ಪಂಚಾಯಿತಿಪೂರ್ಣ ಕಂದಾಯ ಗ್ರಾಮ ಹಾಗೂ ಗುಡ್ಡೆಹೊಸೂರು ಗ್ರಾಮ ಪಂಚಾ ಯಿತಿಯ ಮಾದಾಪಟ್ಟಣ ಗ್ರಾಮದ ಭಾಗಶಃಪ್ರದೇಶಗಳನ್ನು ಸೇರಿಸಿಕೊಂಡು ಕುಶಾಲನಗರ ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಿ ಅಽಸೂಚನೆ ಹೊರಡಿಸಲಾಗಿದೆ. ಈ ಬಗ್ಗೆ ಯಾವುದೇ ಆಕ್ಷೇಪಣೆ, ಸಲಹೆಗಳನ್ನು ಸಲ್ಲಸಲು ಇಚ್ಚಿಸುವವರು ಲಿಖಿತ ರೂಪದಲ್ಲಿ ಸಕಾರಣ ಸಹಿತವಾಗಿ ಸದರಿ ಅಧಿಸೂಚನೆಯನ್ನು ಸರ್ಕಾರಿ ರಾಜ್ಯಪತ್ರದಲ್ಲಿ ಪ್ರಕಟಿಸಿದ ದಿನಾಂಕದಿಂದ ಹದಿನೈದು ದಿನಗಳ ಒಳಗಾಗಿ ಜಿಲ್ಲಾಽಕಾರಿಗೆ ಸಲ್ಲಿಸಬೇಕು ಹಾಗೂ ಆಕ್ಷೇಪಣೆ, ಸಲಹೆಗಳನ್ನು ಸದರಿ ಅವಧಿಯ ತರುವಾಯ ಪರಿಶೀಲನೆಗೆ ತೆಗೆದುಕೊಳ್ಳಲಾಗುವು ದಿಲ್ಲವೆಂದು ಆದೇಶದಲ್ಲಿ ತಿಳಿಸಲಾಗಿದೆ.

” ಪುರಸಭೆ ವಾರ್ಡ್‌ಗಳು ವಿಂಗಡಣೆಯಾಗಿವೆ. ಆದಷ್ಟು ಬೇಗನೆ ಚುನಾವಣೆ ನಡೆಸುವ ಕೆಲಸ ಸರ್ಕಾರದಿಂದ ಆಗಬೇಕು. ಕೆಲವು ಸದಸ್ಯರು ಅಧಿಕಾರದ ಆಸೆಯಿಂದ ಆಕ್ಷೇಪಣೆ ಸಲ್ಲಿಸಲು ಮುಂದಾಗಿರುವುದು ಸರಿಯಲ್ಲ. ಈ ಹಿಂದೆ ಕೆಲವರು ಸಲ್ಲಿಸಿದ ಆಕ್ಷೇಪಣೆಯಿಂದ ಕುಶಾಲನಗರ ಅಭಿವೃದ್ಧಿ ಕುಂಠಿತವಾಗಿದೆ. ಆದ್ದರಿಂದ ಊರಿನ ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೂ ಸಹಕರಿಸಬೇಕು.”

-ಸುಮನ್ ಗೌಡ, ಬಿಜೆಪಿ ಯುವ ಮುಖಂಡ, ಕುಶಾಲನಗರ

” ಕುಶಾಲನಗರ ಪುರಸಭೆಯಾಗಿ ಮೇಲ್ದರ್ಜೆಗೇರಿ ಮೂರು ವರ್ಷಗಳಾಗಿವೆ. ಇದೀಗ ರಾಜ್ಯ ಸರ್ಕಾರ ವಾರ್ಡ್ ವಿಂಗಡಣೆ ಮಾಡಿ ರಾಜ್ಯಪತ್ರ ಹೊರಡಿಸಿರುವುದು ಸ್ವಾಗತಾರ್ಹ. ಆದಷ್ಟು ಬೇಗನೇ ಚುನಾವಣೆ ನಡೆಯಲಿ. ಕುಶಾಲನಗರ ಪುರಸಭೆಯ ಅಭಿವೃದ್ಧಿ ಕೆಲಸ ಆಗಲಿ.”

-ಸಿ.ಎಂ.ಅಜ಼ೀಜ್, ನಗರ ಕಾಂಗ್ರೆಸ್ ಮುಖಂಡ

ಆಂದೋಲನ ಡೆಸ್ಕ್

Recent Posts

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

2 hours ago

ಭಾನುವಾರದ ಹಾಡುಪಾಡು | ಈಗ ಕೇರಳದಲ್ಲೂ ಫ್ರೀ ಬಸ್ ಪ್ರಿಯದರ್ಶಿನಿ

ಕೇರಳಂ ಎಂಬ ಈ ಸ್ತ್ರೀ ರಾಜ್ಯದ ಮಹಿಳೆಯರು ಉಚಿತ ಪ್ರಯಾಣದ ಸಂಪೂರ್ಣ ಸುಖವನ್ನು ಪಡೆಯುತ್ತಿದ್ದಾರೆ. ಈ ಸುಖ ಕ್ಷಣಿಕವೋ, ಶಾಶ್ವತವೋ…

3 hours ago

ಭಾನುವಾರದ ಹಾಡುಪಾಡು | ಕೊಡಗು ಕಾಡಿನ ಆ ಕಾಲದ ಮಳೆಗಾಲ ವೈಭವ

ಕೃಪಾ ದೇವರಾಜ್, ಮಡಿಕೇರಿ ಧೋ... ಎಂದು ಸುರಿಯುವ ಮಳೆ, ಅಜ್ಜ ಕಟ್ಟಿದ ಹಳೇ ನಾಡ ಹೆಂಚಿನ ಮನೆ, ನಿರಂತರವಾಗಿ ಸುರಿಯುವ…

3 hours ago

ಭಾನುವಾರದ ಹಾಡುಪಾಡು | ಹತ್ತನೆಯ ಸಾಹಿತ್ಯ ಸಂಭ್ರಮದ ಹೊತ್ತಲ್ಲಿ ಹದಿನಾರರ ಹರಯದ ಬುಕ್ ಕ್ಲಬ್ ಕುರಿತು

ಜುಲೈ ನಾಲ್ಕು ಮತ್ತು ಐದರ ಶನಿವಾರ ಮತ್ತು ಭಾನುವಾರ ಮೈಸೂರಿನ ಸದರ್ನ್ ಸ್ಟಾರ್‌ನಲ್ಲಿ ವಾರ್ಷಿಕ ಸಾಹಿತ್ಯ ರಸದೂಟ ಪೃಥ್ವಿ ಸುಧೀಂದ್ರ…

4 hours ago

ಅಗ್ನಿ ದುರಂತ | ಕೊನೆಗೂ ಅಬಕಾರಿ ಡಿಸಿ ತಲೆದಂಡ

ಮೈಸೂರು : ನಗರದ ದಟ್ಟಗಳ್ಳಿಯಲ್ಲಿರುವ ಮಾರಾ ಬಾರ್ ಅಂಡ್ ರೆಸ್ಟೋರೆಂಟ್ (ಫಾಕ್ಸ್ಡೆನ್‌ಬಾರ್) ನಲ್ಲಿ ಸಂಭವಿಸಿದ  ಅಗ್ನಿದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ…

20 hours ago

ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ನನ್ನ ಆದರ್ಶ ವ್ಯಕ್ತಿ ಗಾಂಧಿ ಮಹಾತ್ಮ ಗಾಂಧೀಜಿ ತಮ್ಮ ಜೀವನದಲ್ಲಿ ಬಹಳ ಕಷ್ಟಪಟ್ಟು ಮೇಲೆ ಬಂದರು. ಭಾರತದ ಸ್ವಾತಂತ್ರ್ಯ ಕ್ಕಾಗಿ…

22 hours ago