ಓದುಗರ ಪತ್ರ
ಮೈಸೂರಿನ ವಿಜಯನಗರದ ೪ನೇ ಹಂತದಲ್ಲಿರುವ ಮುಕ್ತಿಧಾಮದಲ್ಲಿ ಶವಸಂಸ್ಕಾರ ಮಾಡುವವರ ಬವಣೆ ಹೇಳತೀರದಾಗಿದೆ. ಮೈಸೂರು ಅಭಿ ವೃದ್ಧಿ ಪ್ರಾಧಿಕಾರದಿಂದ ನಿರ್ವಹಿಸಲ್ಪಡುವ ಅತ್ಯಾಧುನಿಕ ಚಿತಾಗಾರವಿರುವ ಈ ಮುಕ್ತಿಧಾಮದಲ್ಲಿ ಅನಿಲ ಚಿತಾಗಾರ ಕೆಟ್ಟಿದ್ದು, ಇರುವ ವಿದ್ಯುತ್ ಚಿತಾಗಾರದ ಕಾರ್ಯಕ್ಷಮತೆಯೂ ಸಮರ್ಪಕವಾಗಿಲ್ಲ.
ಒಂದು ಮೃತ ದೇಹವನ್ನು ದಹಿಸಲು ಒಂದೂವರೆ ಗಂಟೆ ತೆಗೆದುಕೊಳ್ಳುತ್ತದೆ.ನಂತರ ಯಂತ್ರ ತಣಿಯಲು ೨ ಗಂಟೆಗಳ ಸಮಯ ಬೇಕಾಗುತ್ತದೆ. ಮೃತ ಶರೀರದ ಅಂತಿಮ ಯಾತ್ರೆಯೂ ಸರಿಯಾದ ಸಮಯಕ್ಕೆ ನೆರವೇರದ ಕಾರಣ ಶವ ಸಂಸ್ಕಾರ ಮಾಡುವವರ ಸ್ಥಿತಿ ಅತಂತ್ರವಾಗಿದೆ. ಕೆಲವು ಬಾರಿ ಸಿಬಂದಿಯೇ ಲಭ್ಯವಿರುವುದಿಲ್ಲ. ಆದ ಕಾರಣ ಶವಸಂಸ್ಕಾರಕ್ಕೆ ಗಂಟೆಗಟ್ಟಲೇ ಕಾಯ ಬೇಕಾದ ಪರಿಸ್ಥಿತಿ ಇದೆ ಎನ್ನುತ್ತಾರೆ ಈ ಭಾಗದ ಜನರು. ಸಂಬಂಧ ಪಟ್ಟವರು ಇತ್ತ ಗಮನಹರಿಸಿ ವಿದ್ಯುತ್ ಚಿತಾಗಾರವು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಮಾಡಿ, ಶವ ಸಂಸ್ಕಾರ ನಡೆಸುವವರ ಬವಣೆಗೆ ಸ್ಪಂದಿಸಲಿ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.ಅಶೋಕ್ ಹೇಳಲಿ…
ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…
ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…
ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…
ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…