ಓದುಗರ ಪತ್ರ
ಮೈಸೂರಿನ ವಿಜಯನಗರದ ೪ನೇ ಹಂತದಲ್ಲಿರುವ ಮುಕ್ತಿಧಾಮದಲ್ಲಿ ಶವಸಂಸ್ಕಾರ ಮಾಡುವವರ ಬವಣೆ ಹೇಳತೀರದಾಗಿದೆ. ಮೈಸೂರು ಅಭಿ ವೃದ್ಧಿ ಪ್ರಾಧಿಕಾರದಿಂದ ನಿರ್ವಹಿಸಲ್ಪಡುವ ಅತ್ಯಾಧುನಿಕ ಚಿತಾಗಾರವಿರುವ ಈ ಮುಕ್ತಿಧಾಮದಲ್ಲಿ ಅನಿಲ ಚಿತಾಗಾರ ಕೆಟ್ಟಿದ್ದು, ಇರುವ ವಿದ್ಯುತ್ ಚಿತಾಗಾರದ ಕಾರ್ಯಕ್ಷಮತೆಯೂ ಸಮರ್ಪಕವಾಗಿಲ್ಲ.
ಒಂದು ಮೃತ ದೇಹವನ್ನು ದಹಿಸಲು ಒಂದೂವರೆ ಗಂಟೆ ತೆಗೆದುಕೊಳ್ಳುತ್ತದೆ.ನಂತರ ಯಂತ್ರ ತಣಿಯಲು ೨ ಗಂಟೆಗಳ ಸಮಯ ಬೇಕಾಗುತ್ತದೆ. ಮೃತ ಶರೀರದ ಅಂತಿಮ ಯಾತ್ರೆಯೂ ಸರಿಯಾದ ಸಮಯಕ್ಕೆ ನೆರವೇರದ ಕಾರಣ ಶವ ಸಂಸ್ಕಾರ ಮಾಡುವವರ ಸ್ಥಿತಿ ಅತಂತ್ರವಾಗಿದೆ. ಕೆಲವು ಬಾರಿ ಸಿಬಂದಿಯೇ ಲಭ್ಯವಿರುವುದಿಲ್ಲ. ಆದ ಕಾರಣ ಶವಸಂಸ್ಕಾರಕ್ಕೆ ಗಂಟೆಗಟ್ಟಲೇ ಕಾಯ ಬೇಕಾದ ಪರಿಸ್ಥಿತಿ ಇದೆ ಎನ್ನುತ್ತಾರೆ ಈ ಭಾಗದ ಜನರು. ಸಂಬಂಧ ಪಟ್ಟವರು ಇತ್ತ ಗಮನಹರಿಸಿ ವಿದ್ಯುತ್ ಚಿತಾಗಾರವು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಮಾಡಿ, ಶವ ಸಂಸ್ಕಾರ ನಡೆಸುವವರ ಬವಣೆಗೆ ಸ್ಪಂದಿಸಲಿ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…