ಓದುಗರ ಪತ್ರ
ಮೈಸೂರಿನ ವಿಜಯನಗರದ ೪ನೇ ಹಂತದಲ್ಲಿರುವ ಮುಕ್ತಿಧಾಮದಲ್ಲಿ ಶವಸಂಸ್ಕಾರ ಮಾಡುವವರ ಬವಣೆ ಹೇಳತೀರದಾಗಿದೆ. ಮೈಸೂರು ಅಭಿ ವೃದ್ಧಿ ಪ್ರಾಧಿಕಾರದಿಂದ ನಿರ್ವಹಿಸಲ್ಪಡುವ ಅತ್ಯಾಧುನಿಕ ಚಿತಾಗಾರವಿರುವ ಈ ಮುಕ್ತಿಧಾಮದಲ್ಲಿ ಅನಿಲ ಚಿತಾಗಾರ ಕೆಟ್ಟಿದ್ದು, ಇರುವ ವಿದ್ಯುತ್ ಚಿತಾಗಾರದ ಕಾರ್ಯಕ್ಷಮತೆಯೂ ಸಮರ್ಪಕವಾಗಿಲ್ಲ.
ಒಂದು ಮೃತ ದೇಹವನ್ನು ದಹಿಸಲು ಒಂದೂವರೆ ಗಂಟೆ ತೆಗೆದುಕೊಳ್ಳುತ್ತದೆ.ನಂತರ ಯಂತ್ರ ತಣಿಯಲು ೨ ಗಂಟೆಗಳ ಸಮಯ ಬೇಕಾಗುತ್ತದೆ. ಮೃತ ಶರೀರದ ಅಂತಿಮ ಯಾತ್ರೆಯೂ ಸರಿಯಾದ ಸಮಯಕ್ಕೆ ನೆರವೇರದ ಕಾರಣ ಶವ ಸಂಸ್ಕಾರ ಮಾಡುವವರ ಸ್ಥಿತಿ ಅತಂತ್ರವಾಗಿದೆ. ಕೆಲವು ಬಾರಿ ಸಿಬಂದಿಯೇ ಲಭ್ಯವಿರುವುದಿಲ್ಲ. ಆದ ಕಾರಣ ಶವಸಂಸ್ಕಾರಕ್ಕೆ ಗಂಟೆಗಟ್ಟಲೇ ಕಾಯ ಬೇಕಾದ ಪರಿಸ್ಥಿತಿ ಇದೆ ಎನ್ನುತ್ತಾರೆ ಈ ಭಾಗದ ಜನರು. ಸಂಬಂಧ ಪಟ್ಟವರು ಇತ್ತ ಗಮನಹರಿಸಿ ವಿದ್ಯುತ್ ಚಿತಾಗಾರವು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಮಾಡಿ, ಶವ ಸಂಸ್ಕಾರ ನಡೆಸುವವರ ಬವಣೆಗೆ ಸ್ಪಂದಿಸಲಿ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಮೈಸೂರು : ಸಮಾಜದಲ್ಲಿ ನಾನಾ ಕಾರಣಗಳಿಂದ ನೊಂದ ಪುರುಷರ ಹಕ್ಕುಗಳ ರಕ್ಷಣೆ ಹಾಗೂ ಅವರಿಗೆ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲು…
ಮೈಸೂರು : ನಗರದ ನರಸಿಂಹರಾಜ ವಿಧಾನಸಭಾ ಕ್ಷೇತ್ರದಲ್ಲಿ ಎಸ್ಐಆರ್ ಪ್ರಕ್ರಿಯೆ ನಿಯಮದಂತೆ ನಡೆಯುತ್ತಿಲ್ಲ. ಗುಂಪು ಗುಂಪಾಗಿ ಮತದಾರರ ಪಟ್ಟಿ ಪರಿಷ್ಕರಣೆ…
ಎಚ್.ಎಸ್.ದಿನೇಶ್ ಕುಮಾರ್ ನಿತ್ಯಾನಂದ ಕೊಲೆ ಪ್ರಕರಣದ ನಾಲ್ವರು ಆರೋಪಿಗಳ ಪಶ್ಚಾತ್ತಾಪದ ಕಣ್ಣೀರು ಮೈಸೂರು: ನಗರದ ಕುವೆಂಪುನಗರದಲ್ಲಿ ಪತ್ನಿಯಿಂದಲೇ ಹತ್ಯೆಯಾದ ನಿತ್ಯಾನಂದ…
ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮುಂಗಾರು ಮಳೆ ಚುರುಕು ಪಡೆದುಕೊಂಡಿದ್ದು, ಹಾರಂಗಿ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು ಏರಿಕೆ ಕಂಡುಬಂದಿದೆ. ಹಾರಂಗಿ ಜಲಾಶಯಕ್ಕೆ…
ಮಹಾತ್ಮನ ಚಿಂತನೆಯ ಹಾದಿಯಲ್ಲಿ ನಡೆಯಬೇಕಿದೆ ನಾನು ಕಂಡ ಗಾಂಧಿಜಿಯವರಲ್ಲಿ, ಅವರ ಜೀವನದಲ್ಲಿ ನನ್ನನ್ನು ಅತ್ಯಂತ ಹೆಚ್ಚಾಗಿ ಆಕರ್ಷಿಸಿದ ವಿಷಯ ಎಂದರೆ…
ಗಾಂಧಿಜಿಯವರ ಜೀವನ ಚರಿತ್ರೆ ದೇಶ, ಖಂಡಗಳ ಗಡಿ ದಾಟಿ ಮನುಷ್ಯರೆಲ್ಲರ ಒಳಿತನ್ನು ಬಯಸುವ ಬಯಕೆಯನ್ನು ಭಾವಿಸಿ, ಜೀವಿಸಿ ತೋರಿಸಿದವರ ಪುಣ್ಯ…