ಓದುಗರ ಪತ್ರ
ಮೈಸೂರಿನ ವಿಜಯನಗರದ ೪ನೇ ಹಂತದಲ್ಲಿರುವ ಮುಕ್ತಿಧಾಮದಲ್ಲಿ ಶವಸಂಸ್ಕಾರ ಮಾಡುವವರ ಬವಣೆ ಹೇಳತೀರದಾಗಿದೆ. ಮೈಸೂರು ಅಭಿ ವೃದ್ಧಿ ಪ್ರಾಧಿಕಾರದಿಂದ ನಿರ್ವಹಿಸಲ್ಪಡುವ ಅತ್ಯಾಧುನಿಕ ಚಿತಾಗಾರವಿರುವ ಈ ಮುಕ್ತಿಧಾಮದಲ್ಲಿ ಅನಿಲ ಚಿತಾಗಾರ ಕೆಟ್ಟಿದ್ದು, ಇರುವ ವಿದ್ಯುತ್ ಚಿತಾಗಾರದ ಕಾರ್ಯಕ್ಷಮತೆಯೂ ಸಮರ್ಪಕವಾಗಿಲ್ಲ.
ಒಂದು ಮೃತ ದೇಹವನ್ನು ದಹಿಸಲು ಒಂದೂವರೆ ಗಂಟೆ ತೆಗೆದುಕೊಳ್ಳುತ್ತದೆ.ನಂತರ ಯಂತ್ರ ತಣಿಯಲು ೨ ಗಂಟೆಗಳ ಸಮಯ ಬೇಕಾಗುತ್ತದೆ. ಮೃತ ಶರೀರದ ಅಂತಿಮ ಯಾತ್ರೆಯೂ ಸರಿಯಾದ ಸಮಯಕ್ಕೆ ನೆರವೇರದ ಕಾರಣ ಶವ ಸಂಸ್ಕಾರ ಮಾಡುವವರ ಸ್ಥಿತಿ ಅತಂತ್ರವಾಗಿದೆ. ಕೆಲವು ಬಾರಿ ಸಿಬಂದಿಯೇ ಲಭ್ಯವಿರುವುದಿಲ್ಲ. ಆದ ಕಾರಣ ಶವಸಂಸ್ಕಾರಕ್ಕೆ ಗಂಟೆಗಟ್ಟಲೇ ಕಾಯ ಬೇಕಾದ ಪರಿಸ್ಥಿತಿ ಇದೆ ಎನ್ನುತ್ತಾರೆ ಈ ಭಾಗದ ಜನರು. ಸಂಬಂಧ ಪಟ್ಟವರು ಇತ್ತ ಗಮನಹರಿಸಿ ವಿದ್ಯುತ್ ಚಿತಾಗಾರವು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಮಾಡಿ, ಶವ ಸಂಸ್ಕಾರ ನಡೆಸುವವರ ಬವಣೆಗೆ ಸ್ಪಂದಿಸಲಿ.
-ಬೆಸಗರಹಳ್ಳಿ ರವಿಪ್ರಸಾದ್, ಮೈಸೂರು
ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…
ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…
ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…
ಮಂಡ್ಯ: ರಾಜ್ಯದಲ್ಲಿ ಕೆಆರ್ಎಸ್ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್ ನೀರು ಹರಿದು ಬರುತ್ತಿರುವ ಡ್ಯಾಂನಿಂದ…
ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…