Andolana originals

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ

ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು

ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು ಹಾಕಿದ್ದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ಕೈಸೇರದಂತಾಗಿದೆ. ತಾಲ್ಲೂಕಿನ ಕಸಬಾ ಹೋಬಳಿಯ ಬನ್ನಹಳ್ಳಿ ಹುಂಡಿ, ಅಲಸೀಕಟ್ಟೆ ಹುಂಡಿ ಸೇರಿದಂತೆ ಈ ಭಾಗದಲ್ಲಿ ಸುಮಾರು ೧೪-೧೫ ಹೆಕ್ಟೇರ್ ಪ್ರದೇಶ ದಲ್ಲಿ ಕಡಲೆಕಾಯಿ ಬೆಳೆಯುತ್ತಿದ್ದರು. ಅಲ್ಪ-ಸ್ವಲ್ಪ ಮಳೆಯಾಗಿರುವುದರಿಂದ ಕಡಲೆಕಾಯಿ ಬಿತ್ತನೆ ಮಾಡಲಾಗಿದೆ. ಆದರೆ ಮಳೆ ಪ್ರಮಾಣ ಕಡಿಮೆ ಆಗಿರುವುದರಿಂದ ಬೆಳೆಗಳು ಹೂ ಬಿಡದೆ ಬಾಡುತ್ತಿವೆ.

ಸೋಸಲೆ ಹೋಬಳಿಯ ೬೦೦ ಹೆಕ್ಟೇರ್‌ಗೂ ಹೆಚ್ಚು ಪ್ರದೇಶದಲ್ಲಿ ಮುಸುಕಿನ ಜೋಳ ಬೆಳೆಯಲಾಗುತ್ತಿತ್ತು. ಮಳೆ ಕೊರತೆಯಿಂದ ಮುಸುಕಿನ ಜೋಳ ಬೆಳೆ ಬೆಳೆಯಲಾಗಿಲ್ಲ. ಹೊರಳ ಹಳ್ಳಿ ವ್ಯಾಪ್ತಿಯಲ್ಲಿ ಸೂರ್ಯಕಾಂತಿ ಬೆಳೆಯನ್ನು ಬೆಳೆಯಲಾಗಿಲ್ಲ. ಬನ್ನೂರು ವ್ಯಾಪ್ತಿಯ ಭಾಗದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿ ಕಬ್ಬು ಬೆಳೆ ಒಣಗುತ್ತಿದೆ. ಕೆಲವು ಬೋರ್‌ವೆಲ್‌ಗಳಲ್ಲೂ ನೀರು ಬತ್ತಿ ಹೋಗುತ್ತಿದೆ. ಈಗ ಕಬಿನಿ ಜಲಾಶಯದಿಂದ ನಾಲೆಗೆ ನೀರು ಬಿಟ್ಟಿರುವುದರಿಂದ ಬೋರ್‌ವೆಲ್ ಗಳಲ್ಲಿ ನೀರು ಬತ್ತಿ ಹೋಗಿರುವುದು ಸ್ವಲ್ಪ ಸುಧಾರಣೆಯಾಗಿದೆ.

ನಮ್ಮ ತಾಲ್ಲೂಕಿನಲ್ಲಿ ೧೯ ಹೆಕ್ಟೇರ್‌ಗೂ ಹೆಚ್ಚು ಭೂ ಪ್ರದೇಶದಲ್ಲಿ ಭತ್ತ ಬೆಳೆಯುತ್ತಿದ್ದರು. ಆದರೆ ಈ ಬಾರಿ ಕಬಿನಿ ನಾಲೆಯಿಂದ ನೀರು ಬಿಡದಿದ್ದರಿಂದ ಭತ್ತದ ಬೆಳೆ ಇಲ್ಲದಂತಾಗಿದೆ. ಕಬಿನಿ ಜಲಾಶಯದ ಸಲಹಾ ಸಮಿತಿ ಸಭೆ ಈವರೆಗೂ ನಿರ್ಧಾರವಾಗಿಲ್ಲ. ಅಲ್ಪ ಪ್ರಮಾಣದ ನೀರನ್ನು ನಾಲೆಗೆ ಹರಿಸಿದರೆ ಕೆಲವು ರೈತರು ಭತ್ತ ಬೆಳೆಯುವ ಧೈರ್ಯ ಮಾಡುತ್ತಾರೆ. ಸಲಹಾ ಸಮಿತಿಯ ನಿರ್ಧಾರದ ಮೇಲೆ ಇದು ಅವಲಂಬಿತವಾಗಿದೆ.

ಒಟ್ಟಾರೆ ನಿಗದಿತ ಅವಧಿಗೆ ಮಳೆ ಪ್ರಮಾಣ ಕಡಿಮೆಯಾಗಿರುವುದರಿಂದ ತಾಲೂಕಿನಲ್ಲಿ ವಿವಿಧ ಬೆಳೆಗಳನ್ನು ರೈತರು ಬೆಳೆಯದ ಸ್ಥಿತಿ ನಿರ್ಮಾಣವಾಗಿದೆ.

” ಕಬಿನಿ ನಾಲೆಗೆ ನೀರು ಬಿಡದಿರುವುದರಿಂದ ಕೃಷಿ ಇಲಾಖೆ ವತಿಯಿಂದ ಈ ಬಾರಿ ರೈತರಿಗೆ ಬಿತ್ತನೆ ಬೀಜ ವಿತರಣೆ ಮಾಡುತ್ತಿಲ್ಲ. ಅದರ ಬದಲಾಗಿ ಉದ್ದು, ಹಸಿರು, ಹಲಸಂದೆ, ಮುಸುಕಿನ ಜೋಳ ಸೇರಿದಂತೆ ದ್ವಿದಳ ಧಾನ್ಯ ಬೆಳೆಗಳನ್ನು ಬೆಳೆಯುವಂತೆ ರೈತರಿಗೆ ಮನವಿ ಮಾಡಲಾಗಿದೆ.”

-ಎಂ.ರೂಪ, ಸಹಾಯಕ ಕೃಷಿ ನಿರ್ದೇಶಕಿ, ತಿ.ನರಸೀಪುರ

” ಈ ಬಾರಿ ವಾಡಿಕೆಗಿಂತ  ಮಳೆ ಪ್ರಮಾಣ ತೀವ್ರ ಕಡಿಮೆಯಾಗಿರುವುದರಿಂದ ಜತೆಗೆ ನಿಗದಿತ ಸಮಯಕ್ಕೆ ಬಿತ್ತನೆ ಮಾಡುವ ವೇಳೆ ಮಳೆಯಾಗದಿದ್ದರಿಂದ ಕಡಲೆಕಾಯಿ, ಸೂರ್ಯಕಾಂತಿ, ದ್ವಿದಳ ಧಾನ್ಯ ಬೆಳೆಗಳು ಹೂ ಕಚ್ಚಲಿಲ್ಲ. ಇದರಿಂದ ರೈತರಿಗೆ ನಷ್ಟವಾಗಿದೆ.”

-ಮಹೇಶ್, ರೈತ, ಕೆಂಪೇಗೌಡನಕೊಪ್ಪಲು

 

 

ಆಂದೋಲನ ಡೆಸ್ಕ್

Recent Posts

ಸಕ್ಕರೆ ಬೆಲೆ ಗಗನಮುಖಿ; ಗ್ರಾಹಕರಿಗೆ ಬರೆ

ಚಿರಂಜೀವಿ ಸಿ ಹುಲ್ಲಹಳ್ಳಿ ಸ್ಥಳೀಯ ಮಾರುಕಟ್ಟೆ ದರ ೭೨ರಿಂದ ೭೫ರೂ. ಒಂದೇ ತಿಂಗಳ ಅಂತರದಲ್ಲಿ ದುಪ್ಪಟ್ಟು ಚಹ- ಕಾಫಿ, ಸಿಹಿ…

6 mins ago

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

11 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

20 mins ago

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

10 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

11 hours ago