ಹನೂರು ತಾಲ್ಲೂಕು ವ್ಯಾಪ್ತಿಯ ರೈತರಲ್ಲಿ ಆತಂಕ
ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದ ಹಿನ್ನೆಲೆಯಲ್ಲಿ ಉಡುತೊರೆ ಜಲಾಶಯ ಭರ್ತಿಯಾಗದೆ, ಇರುವ ನೀರು ಕೂಡ ಖಾಲಿಯಾಗುತ್ತಿರುವುದರಿಂದ ರೈತರಲ್ಲಿ ಆತಂಕ ಮನೆ ಮಾಡಿದೆ.
ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಸಮರ್ಪಕವಾಗಿ ಮಳೆಯಾಗದೆ ಜಲಾಶಯಗಳೆಲ್ಲ ಬರಿದಾಗುತ್ತಿದ್ದು, ಮುಂದಿನ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ತೊಂದರೆಯಾಗಲಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಒಂದು ದಿನ ನಿರಂತರವಾಗಿ ಭಾರಿ ಮಳೆ ಬಿದ್ದ ಪರಿಣಾಮ ಉಡುತೊರೆ ಜಲಾಶಯಕ್ಕೆ ಅಲ್ಪ ಪ್ರಮಾಣದಲ್ಲಿ ನೀರು ಹರಿದು ಜಲಾಶಯ ಅರ್ಧ ಭರ್ತಿಯಾಗಿತ್ತು. ಕುಡಿಯುವ ನೀರಿಗೆ ಹಾಗೂ ಜಾನುವಾರುಗಳಿಗೆ ತೊಂದರೆಯಾಗುತ್ತಿದ್ದರಿಂದ ಉಡುತೊರೆ ಜಲಾಶಯದಿಂದ ಮಾರ್ಟಳ್ಳಿ ಸಮೀಪದ ಕೀರೆಪಾತಿ ಹಾಗೂ ಕೌದಳ್ಳಿ ಭಾಗದ ಹಲವು ಗ್ರಾಮಗಳಿಗೆ ಹಳ್ಳದ ಮೂಲಕ ನೀರು ಹರಿಸಲಾಗಿತ್ತು. ಇದೀಗ ಜಲಾಶಯದಲ್ಲಿನೀರಿನ ಪ್ರಮಾಣ ಕಡಿಮೆ ಆಗಿರುವುದರಿಂದ ಈ ಭಾಗದರೈತರಿಗೆ ಮುಂದಿನ ದಿನಗಳಲ್ಲಿ ನೀರಿನ ಸಮಸ್ಯೆಯಾಗಬಹುದು ಎಂಬ ಆತಂಕ ಎದುರಾಗಿದೆ.
ಕ್ಷೇತ್ರ ವ್ಯಾಪ್ತಿಯ ಮೂರು ಜಲಾಶಯಗಳಿಗೆ ಮಾತ್ರ ಕಾವೇರಿ ನದಿ ಮೂಲದಿಂದ ನೀರು ತುಂಬಿಸುವ ಯೋಜನೆ ಪ್ರಗತಿಯಲ್ಲಿದೆ. ಉಳಿದ ಜಲಾಶಯಗಳಿಗೂ ಕಾವೇರಿ ನದಿ ಮೂಲದಿಂದ ನೀರು ತುಂಬಿಸಿದರೆ ಕ್ಷೇತ್ರ ವ್ಯಾಪ್ತಿಯ ಸಾವಿರಾರು ರೈತರಿಗೆ ಅನುಕೂಲವಾಗಲಿದೆ ಎಂದು ರೈತ ಮುಖಂಡರು ಮನವಿ ಮಾಡಿದ್ದಾರೆ.
” ಈ ಬಾರಿ ಸಮರ್ಪಕವಾಗಿ ಮಳೆಯಾಗದೆ ಜಲಾಶಯ ಭರ್ತಿಯಾಗಿಲ್ಲ. ಕುಡಿಯುವ ನೀರಿನ ಸಮಸ್ಯೆ ಇರುವ ಕಡೆ ಜಲಾಶಯದಿಂದ ನೀರು ಬಿಡಲಾಗಿದೆ. ಜಲಾಶಯದಲ್ಲಿ ೦.೧ ಟಿಎಂಸಿ ನೀರು ಮಾತ್ರ ಇದೆ. ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಜಲಾಶಯದಿಂದ ನೀರು ಹರಿಸಿದರೆ ಸಂಪೂರ್ಣ ಖಾಲಿಯಾಗಲಿದೆ. ಮಳೆಯಾದರೆ ಬೇಸಿಗೆ ಸಮಯದಲ್ಲಿ ಅನುಕೂಲವಾಗಲಿದೆ. ಇಲ್ಲದಿದ್ದರೆ ಕುಡಿಯುವ ನೀರಿನ ಸಮಸ್ಯೆ ಎದುರಾಗಲಿದೆ.”
ಕರುಣಾಮಯಿ, ಎಇಇ, ಕಾವೇರಿ ನೀರಾವರಿ ನಿಗಮ
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…