Andolana originals

ಮುಂದಿನ ಶೈಕ್ಷಣಿಕ ವರ್ಷದಿಂದ ಕಾನೂನು ಕಾಲೇಜು ಆರಂಭ

ಪ್ರಾಂಶುಪಾಲರು, ಬೋಧಕರ ನೇಮಕ; ಮೊದಲ ವರ್ಷ ೬೦ ವಿದ್ಯಾರ್ಥಿಗಳ ಪ್ರವೇಶಕ್ಕೆ ಸಿದ್ಧ 

ಪ್ರಸಾದ್ ಲಕ್ಕೂರು

ಚಾಮರಾಜನಗರ: ಕಳೆದ ೭ ವರ್ಷಗಳ ಹಿಂದೆ ನಗರದಲ್ಲಿ ಸ್ಥಾಪಿಸಲಾಗಿದ್ದ ಸರ್ಕಾರಿ ಕಾನೂನು ಪದವಿ ಕಾಲೇಜಿನ ತರಗತಿಗಳು ಮುಂದಿನ ಶೈಕ್ಷಣಿಕ ವರ್ಷದಲ್ಲಿ ಆರಂಭವಾಗುವ ಸಾಧ್ಯತೆಯಿದೆ. ಇದಕ್ಕಾಗಿ ಎಲ್ಲ ಸಿದ್ಧತೆಗಳೂ ನಡೆದಿವೆ. ನಗರದ ಸಂತೇಮರಹಳ್ಳಿ ರಸ್ತೆ ಬದಿಯಲ್ಲಿರುವ ರೇಷ್ಮೆ ಇಲಾಖೆ ಕಟ್ಟಡದಲ್ಲಿ ಕಾನೂನು ಕಾಲೇಜಿದೆ. ಹುಬ್ಬಳ್ಳಿ ಕಾನೂನು ವಿಶ್ವ ವಿದ್ಯಾನಿಲಯದ ವ್ಯಾಪ್ತಿಗೆ ಬರುವ ಈ ಕಾಲೇಜಿಗೆ ಈಗಾಗಲೇ ಪ್ರಾಂಶುಪಾಲರು, ಐವರು ಉಪನ್ಯಾಸಕರು, ಗುಮಾಸ್ತರು, ಡಿ-ದರ್ಜೆ ನೌಕರರನ್ನು ನೇಮಿಸಲಾಗಿದೆ.

ಕಾನೂನು ವಿಶ್ವವಿದ್ಯಾನಿಲಯದ ತಜ್ಞರ ತಂಡ ಇತ್ತೀಚೆಗೆ ಭೇಟಿ ನೀಡಿ ನೂತನ ಕಾಲೇಜಿನಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸಿದ್ದು, ಕಾರ್ಯಾರಂಭಕ್ಕೆ ಒಪ್ಪಿಗೆ ಸೂಚಿಸಿದೆ.

ಆದ್ದರಿಂದ ಮುಂಬರುವ ಮೇ-ಜೂನ್ ತಿಂಗಳಲ್ಲಿ ಕಾಲೇಜಿಗೆ ಪ್ರವೇಶಾತಿ ಪ್ರಕ್ರಿಯೆ ಆರಂಭವಾಗಲಿದೆ. ಸುಮಾರು ೬೦ ವಿದ್ಯಾರ್ಥಿಗಳನ್ನು ದಾಖಲು ಮಾಡಿಕೊಳ್ಳಲಾಗುವುದು. ಪ್ರವೇಶಾತಿ ನಡೆದ ಬಳಿಕ ನೇಮಕವಾಗಿರುವ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಕರ್ತವ್ಯ ಶುರು ಮಾಡಲಿದ್ದಾರೆ.

೨೦೧೩ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಧಿಕಾರ ವಹಿಸಿಕೊಂಡಿದ್ದ ಸಂದರ್ಭದಲ್ಲಿ ಬೀದರ್‌ಗೆ ಕಾನೂನು ಕಾಲೇಜು ಮಂಜೂರಾಯಿತು. ಆದರೆ, ಜಾಗದ ಸಮಸ್ಯೆಯಿಂದ ಸ್ಥಾಪನೆ ಸಾಧ್ಯವಾಗಲಿಲ್ಲ. ಇದೇ ವೇಳೆಯಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದ ಆರ್.ಧ್ರುವನಾರಾಯಣ ಮತ್ತು ಶಾಸಕರಾಗಿದ್ದ ಸಿ.ಪುಟ್ಟರಂಗ ಶೆಟ್ಟಿ ಅವರು ಅಂದಿನ ಕಾನೂನು ಸಚಿವ ಜಯಚಂದ್ರ ಅವರ ಮನವೊಲಿಸಿ ಚಾಮರಾಜನಗರಕ್ಕೆ ಸ್ಥಳಾಂತರಗೊಳಿಸಿದ್ದರು. ನಗರದ ಸಂತೇಮರಹಳ್ಳಿ ರಸ್ತೆಯ ಬದಿಯಲ್ಲಿದ್ದ ರೇಷ್ಮೆ ಇಲಾಖೆಗೆ ಸೇರಿದ ಕಟ್ಟಡದಲ್ಲಿದ್ದ ಕೇಂದ್ರೀಯ ವಿದ್ಯಾಲಯ ತನ್ನ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಂಡಾಗ ಅದೇ ಕಟ್ಟಡದಲ್ಲಿ ಕಾನೂನು ಕಾಲೇಜು ಆರಂಭಿಸುವ ಪ್ರಕ್ರಿಯೆ ಆರಂಭಿಸಿದ್ದರು.

ಆ ವೇಳೆಗೆ ಕಾಂಗ್ರೆಸ್ ಸರ್ಕಾರ ಅಧಿಕಾರ ಕಳೆದುಕೊಂಡು ಬಿಜೆಪಿ ಸರ್ಕಾರ ಅಽಕಾರಕ್ಕೆ ಏರಿತ್ತು. ನಂತರ ಹೊಸ ಕಾನೂನು ಕಾಲೇಜು ಆರಂಭಿಸುವುದು ಬೇಡ ಎಂಬ ಸರ್ಕಾರದ ನಿರ್ಧಾರದಿಂದ ನಗರದಲ್ಲಿ ಕಾನೂನು ಕಾಲೇಜು ತರಗತಿಗಳ ಆರಂಭಕ್ಕೆ ತೊಡಕಾಯಿತು.

ಬಳಿಕ ಮಾಜಿ ಸಂಸದರಾಗಿದ್ದ ಧ್ರುವನಾರಾಯಣ, ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಜೊತೆಯಾಗಿ ಸುತ್ತೂರಿನ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳ ಮೂಲಕ ಅಂದಿನ ಕಾನೂನು ಸಚಿವ ಮಾಧುಸ್ವಾಮಿ ಅವರಿಗೆ ಕಾಲೇಜನ್ನು ಪ್ರಾರಂಭಿಸುವ ಕುರಿತು ಮನವರಿಕೆ ಮಾಡಿದ್ದರು.

ಈಗ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದು, ಕಾನೂನು ಕಾಲೇಜು ಆರಂಭಕ್ಕೆ ಕಾನೂನು ಸಚಿವ ಎಚ್.ಕೆ.ಪಾಟೀಲ್ ಅವರು ಕ್ರಮ ವಹಿಸಿದ್ದಾರೆ. ಕಾಲೇಜಿಗೆ ಅಗತ್ಯವಾದ ಮೂಲ ಸೌಕರ್ಯವನ್ನು ಕಲ್ಪಿಸಲು, ನೌಕರರಿಗೆ ವೇತನ ನೀಡಲು ೧.೫ ಕೋಟಿ ರೂ.ಗಳನ್ನು ಮಂಜೂರು ಮಾಡಿದ್ದಾರೆ.

” ಮುಂದಿನ ಶೈಕ್ಷಣಿಕ ವರ್ಷದಿಂದ ನಗರದಲ್ಲಿ ಕಾನೂನು ಕಾಲೇಜಿನ ತರಗತಿಗಳು ಆರಂಭವಾಗಲಿವೆ. ಬೋಧಕರ, ಬೋಧಕೇತರರ ನೇಮಕಾತಿ ಆಗಿದೆ. ೬೦ ವಿದ್ಯಾರ್ಥಿಗಳನ್ನು ದಾಖಲು ಮಾಡಲಾಗುವುದು.”

-ಲಕ್ಷಿ ಬಾಯಿ, ಪ್ರಾಂಶುಪಾಲರು, ಕಾನೂನು ಕಾಲೇಜು.

” ಕಾನೂನು ಕಾಲೇಜು ಆರಂಭಿಸಬೇಕೆಂದು ಕಾನೂನು ಸಚಿವರಲ್ಲಿ ಮನವಿ ಮಾಡಿದ್ದೆ. ಸರ್ಕಾರ ೧.೫ ಕೋಟಿ ರೂ. ನೀಡಿದೆ. ಹುಬ್ಬಳ್ಳಿಯ ಕಾನೂನು ವಿಶ್ವವಿದ್ಯಾನಿಲಯದ ತಜ್ಞರ ತಂಡವು ಭೇಟಿ ನೀಡಿ ಪರಿಶೀಲಿಸಿ ಒಪ್ಪಿಗೆ ಸೂಚಿಸಿದೆ.”

-ಸಿ.ಪುಟ್ಟರಂಗಶೆಟ್ಟಿ, ಶಾಸಕರು.

ಆಂದೋಲನ ಡೆಸ್ಕ್

Recent Posts

ಮೈಸೂರು ನಗರದಲ್ಲಿ ಹಳೆ ಬಸ್‌ಗಳ ಸಂಚಾರ ವಿಚಾರ: ಸಾರಿಗೆ ಇಲಾಖೆ ಪ್ರಾದೇಶಿಕ ಅಧಿಕಾರಿ ವಸಂತ್ ಚೌವ್ಹಾಣ್‌ ಪ್ರತಿಕ್ರಿಯೆ

ಮೈಸೂರು: ಬೆಂಗಳೂರು ಡಿಜಿಸ್ಟ್ರೇಷನ್‌ ಹಳೆಯ ಬಸ್‌ಗಳು ಮೈಸೂರು ನಗರದಲ್ಲಿ ಸಂಚಾರ ಮಾಡುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆಯ ಪ್ರಾದೇಶಿಕ ಅಧಿಕಾರಿ ವಸಂತ್…

9 mins ago

ಮೈಸೂರು: ಬೈಕ್‌ ಕಳ್ಳನ ಬಂಧನ

ಮೈಸೂರು: ಇಬ್ಬರು ಬೈಕ್ ಕಳ್ಳರನ್ನು ಬಂಧಿಸಿರುವ ಲಷ್ಕರ್ ಠಾಣೆ ಪೊಲೀಸರು, ಬಂಧಿತರಿಂದ 2.5 ಲಕ್ಷ ರೂ. ವೌಲ್ಯದ 3 ದ್ವಿಚಕ್ರ…

35 mins ago

ಮೈಸೂರು| ಅಂತರಾಜ್ಯ ಮನೆಗಳ್ಳನ ಬಂಧನ

ಮೈಸೂರು: ಅಂತರಾಜ್ಯ ಮನೆಗಳ್ಳನನ್ನು ಕುವೆಂಪು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ 2.6 ಲಕ್ಷ ರೂ. ವೌಲ್ಯದ 20 ಗ್ರಾಂ…

38 mins ago

ಹನೂರು| ವಿದ್ಯುತ್‌ ಟವರ್‌ ದುರಸ್ತಿ ಕಾರ್ಯ ಪ್ರಗತಿಯಲ್ಲಿ: ಹಲವು ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯ

ಹನೂರು: ವಿದ್ಯುತ್ 66/11 ಕೆವಿ ಟವರ್ ದುರಸ್ತಿ, ವಿವಿಧ ಭಾಗದಲ್ಲಿ ವಿದ್ಯುತ್ ನಿಲುಗಡೆ ದುರಸ್ತಿಕಾರ್ಯ ಪ್ರಗತಿಯಲ್ಲಿರುವುದರಿಂದ ಹಲವು ಗ್ರಾಮಗಳಲ್ಲಿ ವಿದ್ಯುತ್…

44 mins ago

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

ವಿರಾಜಪೇಟೆ: ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿರಾಜಪೇಟೆಯಲ್ಲಿ ನಡೆದಿದೆ. ವಿರಾಜಪೇಟೆ ಹೊರವಲಯದ ಅರಮೇರಿ ಬಳಿಯ ನಾಲ್ಕನೇ ರಸ್ತೆಯಲ್ಲಿ…

2 hours ago

ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ: ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ನಟನೆಯ ಟಾಕ್ಸಿಕ್‌ ಚಿತ್ರಕ್ಕೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಟಾಕ್ಸಿಕ್‌ ಚಿತ್ರದ ವಿರುದ್ಧ ಮಕ್ಕಳ ಹಕ್ಕುಗಳ…

2 hours ago