Andolana originals

ಅಂಚಿಪಾಳ್ಯ ಸರ್ಕಾರಿ ಶಾಲೆಯಲ್ಲಿ ಆತಂಕದಲ್ಲೇ ಪಾಠ ಪ್ರವಚನ

ಮಹಾದೇಶ್ ಎಂ.ಗೌಡ

ಮಳೆ ಬಂದರೆ ಸೋರುವ ಕೊಠಡಿಗಳು; ಉದುರಿ ಬೀಳುತ್ತಿರುವ ಸಿಮೆಂಟ್ ಚಕ್ಕೆಗಳು; ಆಟದ ಮೈದಾನವಿಲ್ಲದೆ ರಸ್ತೆಯಲ್ಲೇ ಮಕ್ಕಳ ಆಟೋಟ

ಹನೂರು: ಹನೂರು ಶೈಕ್ಷಣಿಕ ವಲಯದ ಕೂಡ್ಲೂರು ಕ್ಲಸ್ಟರ್ ವ್ಯಾಪ್ತಿಯ ಅಂಚಿಪಾಳ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕೊಠಡಿಯ ಚಾವಣಿ ಸಂಪೂರ್ಣವಾಗಿ ಶಿಥಿಲಗೊಂಡಿದ್ದು, ಮಳೆಯ ನೀರು ಸೋರುತ್ತಿದ್ದು ಕಾಂಕ್ರೀಟ್ ಚಕ್ಕೆಗಳು ಕೆಳಗೆ ಉದುರುವುದರಿಂದ ವಿದ್ಯಾರ್ಥಿಗಳ ಕಲಿಕೆಗೆ ತೀವ್ರ ತೊಂದರೆಯಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಪೋಷಕರು ಒತ್ತಾಯಿಸಿದ್ದಾರೆ.

ಹನೂರು ಶೈಕ್ಷಣಿಕ ವಲಯದ ಬಹುತೇಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಕೊಠಡಿಗಳು ಶಿಥಿಲಗೊಂಡಿರುವುದರಿಂದ ವಿದ್ಯಾರ್ಥಿಗಳು ಮಳೆಗಾಲದ ಸಂದರ್ಭದಲ್ಲಿ ಆತಂಕದಲ್ಲಿಯೇ ಪಾಠ ಪ್ರವಚನದಲ್ಲಿ ತೊಡಗಿಸಿಕೊಳ್ಳುವಂತಾಗಿದೆ. ಕಳೆದ ತಿಂಗಳು ಶಾಲೆಗೆ ಮೂಲಸೌಲಭ್ಯ ಒದಗಿಸುವಂತೆ ಆಗ್ರಹಿಸಿ ಪೆದ್ದನಪಾಳ್ಯ ಗ್ರಾಮದ ೬೨ ವಿದ್ಯಾರ್ಥಿಗಳನ್ನು ೯ ದಿನಗಳ ಕಾಲ ಶಾಲೆಗೆ ಕಳುಹಿಸದೆ ಪೋಷಕರು ಪ್ರತಿಭಟನೆ ನಡೆಸಿದ್ದರು.

ಅಂಚಿಪಾಳ್ಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದರಿಂದ ಐದನೇ ತರಗತಿಯವರೆಗೆ ೪೧ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ ಶಾಲೆಯಲ್ಲಿ ಆಟದ ಮೈದಾನ, ಶೌಚಾಲಯ, ಶುದ್ಧ ಕುಡಿಯುವ ನೀರು, ಶಾಲಾ ಕಾಂಪೌಂಡ್ ಸೇರಿದಂತೆ ಅಗತ್ಯ ಮೂಲಸೌಲಭ್ಯಗಳು ಇಲ್ಲದೆ ವಿದ್ಯಾರ್ಥಿಗಳು ಪರಿತಪಿಸುತ್ತಿದ್ದಾರೆ.

ಆಟದ ಮೈದಾನವೇ ಇಲ್ಲ: ಅಂಚಿಪಾಳ್ಯ ಗ್ರಾಮದ ಶಾಲೆಯಲ್ಲಿ ಆಟದ ಮೈದಾನ ಇಲ್ಲದೆ ಇರುವುದರಿಂದ ವಿದ್ಯಾರ್ಥಿಗಳು ರಸ್ತೆಯಲ್ಲಿ ಆಟವಾಡುವಂತಾಗಿದೆ. ವಾಹನಗಳು ಅತಿ ವೇಗವಾಗಿ ಬಂದು ಯಾವುದಾದರೂ ಅನಾಹುತ ಸಂಭವಿಸಿದರೆ ಇದಕ್ಕೆ ಯಾರು ಹೊಣೆ? ಎಂದು ಪ್ರಜ್ಞಾವಂತ ನಾಗರಿಕರು ಪ್ರಶ್ನೆ ಮಾಡಿದ್ದಾರೆ.

ಶೌಚಾಲಯದ ಕೊರತೆ: ಅಂಚಿಪಾಳ್ಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶೌಚಾಲಯ ಇಲ್ಲದೆ ಇರುವುದರಿಂದ ವಿದ್ಯಾರ್ಥಿಗಳು ಮಲಮೂತ್ರ ವಿಸರ್ಜನೆಗೆ ಬಯಲು ಪ್ರದೇಶವನ್ನೇ ಆಶ್ರಯಿಸಿದ್ದಾರೆ. ವಿದ್ಯಾರ್ಥಿನಿಯರ ಪಾಡಂತೂ ಹೇಳತೀರದಾಗಿದೆ. ಶಾಲೆಯಲ್ಲಿ ಶೌಚಾಲಯ ಇಲ್ಲದಿರುವ ಬಗ್ಗೆ ಶಾಲೆಯ ವಿದ್ಯಾರ್ಥಿನಿ ವಿಡಿಯೋದಲ್ಲಿ ಮುಖ್ಯಮಂತ್ರಿ ಗಳಿಗೆ ಮನವಿ ಮಾಡಿ ಶೌಚಾಲಯ ನಿರ್ಮಾಣ ಮಾಡಿ ಕೊಡು ವಂತೆ ಮನವಿ ಮಾಡಿರುವುದು ವಿಪರ್ಯಾಸವೆ ಸರಿ.

ಅಂಚಿಪಾಳ್ಯ ಸರ್ಕಾರಿ ಶಾಲೆಯ ಚಾವಣಿಯ ಸಿಮೆಂಟ್ ಕಿತ್ತುಬಂದು ಕಬ್ಬಿಣದ ರಾಡುಗಳು ಕಾಣಿಸುತ್ತಿವೆ. ಮಳೆಗಾಲದ ಸಂದರ್ಭದಲ್ಲಿ ಕಟ್ಟಡದ ಚಾವಣಿಯಲ್ಲಿ ಮಳೆಯ ನೀರು ಶೇಖರಣೆಯಾಗಿ ನೀರು ಶಾಲಾ ಕೊಠಡಿಯ ಒಳಗೆ ಸೋರುತ್ತದೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ಶಾಲೆಯಲ್ಲಿ ನಾಲ್ಕು ಕೊಠಡಿಗಳಿದ್ದು ಇರುವ ಕೊಠಡಿಗಳೆಲ್ಲ ಶಿಥಿಲ ಗೊಂಡಿರುವುದರಿಂದ ಹಾಗೂ ಮಳೆಯ ನೀರು ಸೋರುವುದಲ್ಲದೆ, ಸೀಲಿಂಗ್ ಕಾಂಕ್ರೀಟ್ನ ಚಕ್ಕೆಗಳು ನಿರಂತರವಾಗಿ ಕೆಳಗೆ ಬೀಳುತ್ತಿವೆ. ಒಂದು ವೇಳೆ ಹೆಚ್ಚಿನ ಪ್ರಮಾಣದಲ್ಲಿ ಸಿಮೆಂಟ್ ಚಕ್ಕೆಗಳು ವಿದ್ಯಾರ್ಥಿಗಳ ಮೇಲೆ ಬಿದ್ದು ಅಪಾಯವಾದರೆ ಯಾರು ಹೊಣೆ ಎಂಬುದು ಪೋಷಕರ ಪ್ರಶ್ನೆ.

ಅಂಚಿಪಾಳ್ಯ ಶಾಲೆಯಲ್ಲಿ ವಿದ್ಯಾರ್ಥಿಗಳು ಕುಳಿತುಕೊಳ್ಳಲು ಯಾವುದೇ ಬೆಂಚ್ ವ್ಯವಸ್ಥೆ ಇಲ್ಲದೆ ಇರುವುದರಿಂದ ನೆಲದ ಮೇಲೆ ಕುಳಿತು ಪಾಠ ಕೇಳಬೇಕು. ಮಳೆಗಾಲದ ಸಂದರ್ಭದಲ್ಲಿ ಮಳೆಯ ನೀರು ಕೆಳಗೆ ಬೀಳುತ್ತಿದ್ದು ಮಳೆಯ ನೀರಿನಲ್ಲಿಯೇ ಕುಳಿತುಕೊಂಡು ಪಾಠ ಕೇಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನು ಮುಂದಾದರೂ ಸಂಬಂಧಪಟ್ಟ ಅಧಿಕಾರಿಗಳು ಅಥವಾ ದಾನಿಗಳು ವಿದ್ಯಾರ್ಥಿಗಳಿಗೆ ಕುಳಿತುಕೊಳ್ಳಲು ಬೆಂಚ್ ವ್ಯವಸ್ಥೆ ಮಾಡಬೇಕು ಎಂದು ಪೋಷಕರು ಮನವಿ ಮಾಡಿದ್ದಾರೆ.

” ಶಾಲೆಯಲ್ಲಿ ಅಂಗವಿಕಲ ಮಕ್ಕಳು, ಗಂಡು ಮತ್ತು ಹೆಣ್ಣು ಮಕ್ಕಳಿಗೆ ಪ್ರತ್ಯೇಕ ಮೂರು ಶೌಚಾಲಯಗಳಿವೆ. ಆಟದ ಮೈದಾನ ಇಲ್ಲದಿರುವ ಬಗ್ಗೆ ಹಾಗೂ ಮಳೆಯ ನೀರು ಸೋರುವ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲಾಗಿದೆ.”

-ಆರೋಗ್ಯಮ್ಮಾಳ್, ಪ್ರಭಾರ ಮುಖ್ಯಶಿಕ್ಷಕಿ,

” ಅಂಚಿಪಾಳ್ಯ ಶಾಲೆಯಲ್ಲಿ ಒಂದನೇ ತರಗತಿಯಿಂದ ೫ನೇ ತರಗತಿಯವರೆಗೆ ೪೧ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಕೇವಲ ೨ ಕೊಠಡಿಗಳು ಮಾತ್ರ ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ. ಮಳೆಗಾಲದ ಸಂದರ್ಭದಲ್ಲಿ ಮಳೆಯ ನೀರು ಸೋರುವುದರಿಂದ ಮಕ್ಕಳ ಕಲಿಕೆಗೆ ತೊಂದರೆಯಾಗಿದೆ. ಸಂಬಂಧ ಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಇನ್ನಾದರೂ ನಮ್ಮ ಮಕ್ಕಳಿಗೆ ಅಗತ್ಯ ಮೂಲ ಸೌಲಭ್ಯ ಒದಗಿಸಬೇಕು.

ಶ್ರೀನಿವಾಸ್, ಎಸ್‌ಡಿಎಂಸಿ ಅಧ್ಯಕ್ಷರು, ಅಂಚಿಪಾಳ್ಯ

” ಅಂಚಿಪಾಳ್ಯ ಗ್ರಾಮದ ಶಾಲೆಗೆ ಮೂಲಸೌಲಭ್ಯ ಕಲ್ಪಿಸಿಕೊಡಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ವಿಫಲರಾಗಿದ್ದಾರೆ. ನಮ್ಮ ಶಾಲೆಯ ವಿದ್ಯಾರ್ಥಿಗಳಿಗೆ ಶುದ್ಧ ಕುಡಿಯುವ ನೀರು, ಆಟದ ಮೈದಾನ, ಕೊಠಡಿ ದುರಸ್ತಿ ಕಾಮಗಾರಿ ಆಗದೆ ಇರುವುದರಿಂದ ಮಾಧ್ಯಮದವರ ಮೊರೆ ಹೋಗಿದ್ದೇವೆ.”

-ಮೇಘಲ, ಪೋಷಕರು

ಆಂದೋಲನ ಡೆಸ್ಕ್

Recent Posts

ಕಾರ್ಮಿಕರ ಮೇಲೆ ಕಾಡಾನೆ ದಾಳಿ: ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ

ಕೊಡಗು: ಸಿದ್ದಾಪುರ ವ್ಯಾಪ್ತಿಯ ಶಿಲ್ಪ ಎಸ್ಟೇಟ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಬಂಗಾಳ ಮೂಲದ…

2 hours ago

ಕಾವೇರಿ ವನ್ಯಜೀವಿಧಾಮದಲ್ಲಿ ಎನ್‌ಕೌಂಟರ್: ಮೃತ 3 ಕುಟುಂಬಗಳಿಗೆ ಶಾಸಕ ಎಂ.ಆರ್. ಮಂಜುನಾಥ್ 15 ಲಕ್ಷ ಪರಿಹಾರ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಗುಂಡಿನ ದಾಳಿಗೆ ಬಲಿಯಾಗಿದ್ದ…

2 hours ago

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

4 hours ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

7 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

7 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

7 hours ago