Andolana originals

ಕೆಂಚಲಗೂಡಿನಲ್ಲಿ ಚಿರತೆ ಹಾವಳಿ; ಗ್ರಾಮಸ್ಥರಲ್ಲಿ ಭೀತಿ

ಎಸ್.ಎಸ್.ಭಟ್

ಗ್ರಾಮದಲ್ಲಿ ಐದಾರು ಆಡು, ಕುರಿ, ನಾಯಿಗಳನ್ನು ತಿಂದಿರುವ ಚಿರತೆ; ಸೆರೆಹಿಡಿಯಲು ಆಗ್ರಹ

ವರುಣ: ಮೈಸೂರು ತಾಲ್ಲೂಕಿನ ಕೆಂಚನಗೂಡಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯದಿಂದ ಜೀವನ ನಡೆಸುವಂತಾಗಿದೆ.

ಈಗಾಗಲೇ ಗ್ರಾಮದಲ್ಲಿ ಐದಾರು ಆಡು, ಕುರಿ, ನಾಯಿಗಳನ್ನು ತಿಂದಿರುವಚಿರತೆ ಈ ಗ್ರಾಮದ ಕೆರೆ ಬಳಿ ಮೂರು ಮರಿಗಳಿಗೆ ಜನ್ಮ ನೀಡಿದ್ದು, ಕೆರೆಯ ಬಳಿ ಹೋದವರಿಗೆ ಭೀತಿ ಮೂಡಿಸುತ್ತಿದೆ.

ಈ ಗ್ರಾಮದ ಸುತ್ತ ಕೆಎಚ್‌ಬಿ ಸೇರಿದಂತೆ ಅನೇಕ ಖಾಸಗಿ ಬಡಾವಣೆಗಳಿದ್ದು, ಅವುಗಳು ಅಭಿವೃದ್ಧಿಯಾಗದೆ ಕುರುಚಲು ಕಾಡಿನಿಂದ ಆವೃತವಾಗಿ ಕಾಡು ಪ್ರಾಣಿಗಳ ವಾಸದ ಗೂಡಾಗಿವೆ. ಈಗಾಗಲೇ ಚಿರತೆ ಸಾಕುಪ್ರಾಣಿಗಳನ್ನು ಚಿರತೆ ತಿಂದುಹಾಕಿದೆ.

ಚಿರತೆಯನ್ನು ಸೆರೆಹಿಡಿದು ಗ್ರಾಮದಲ್ಲಿನ ಚಿರತೆ ಹಾವಳಿಯ ಆತಂಕ ನಿವಾರಿಸಬೇಕು ಎಂದು ಮೈಸೂರಿನ ಅರಣ್ಯಾಧಿಕಾರಿಗಳಿಗೆ ದೂರು ನೀಡಿದ್ದರೂ ಪ್ರಯೋಜನವಾಗಿಲ್ಲ ಎಂಬುದು ಗ್ರಾಮಸ್ಥರ ಆರೋಪ.

ಚಿರತೆ ಈಗ ಅಲ್ಲೇ ತನ್ನ ಮೂರೂ ಮರಿಗಳೊಂದಿಗೆ ಸುತ್ತಾಡಲಾರಂಬಿಸಿದೆ. ಗುರುವಾರ ಮಧ್ಯಾಹ್ನ ಗ್ರಾಮದ ಜೋಗನಾಯಕ ಅಡು, ಕುರಿಗಳೊಂದಿಗೆ ಕೆರೆಗೆ ನೀರು ಕುಡಿಸಲು ಹೋದಾಗ ಆಡಿನ ಹಿಂಡಿನ ಮೇಲೆ ಚಿರತೆ ಬಂದು ಎರಗಿದೆ.

ಆಗ ಜೋಗನಾಯಕ ಜೋರಾಗಿ ಕಿರುಚಾಡಿದ್ದು, ಅದರಿಂದ ಗಾಬರಿಯಾದ ಚಿರತೆ ಕುರುಚಲು ಕಾಡಿನತ್ತ ತೆರಳಿದೆ. ಹೀಗಾಗಿ ಜೋಗನಾಯಕ ಆಡು ಕುರಿಗಳೊಂದಿಗೆ ಗ್ರಾಮ ಸೇರಿಕೊಂಡಿದ್ದಾರೆ.

ಈ ಘಟನೆಯಿಂದಾಗಿ ಈ ಗ್ರಾಮದ ರಸ್ತೆಗಳಲ್ಲಿ ನಿತ್ಯ ಸಂಚರಿಸುವ ಜನರುಭಯಭೀತರಾಗಿ ಆ ರಸ್ತೆಯನ್ನು ಬಿಟ್ಟು ಬಳಸು ಹಾಕಿ ಭಯದಿಂದಲೇ ಸಂಚರಿಸುವ ಸ್ಥಿತಿ ನಿರ್ಮಾಣವಾಗಿದೆ. ಈವರೆಗೆ ಆಡು, ಕುರಿ, ನಾಯಿಗಳ ಮೇಲೆ ಎರಗಿದ ಚಿರತೆ ಮನುಷ್ಯರ ಮೇಲೆ ಎರಗುವ ಮೊದಲು ಅದನ್ನು ಸೆರೆಹಿಡಿದು ಗ್ರಾಮಸ್ಥರ ಆತಂಕ ವನ್ನು ದೂರ ಮಾಡಬೇಕು ಎಂದು ಕೆಂಚಲಗೂಡಿನ ಜನತೆ ಆಗ್ರಹಿಸಿದ್ದಾರೆ.

ಚಿರತೆ ಹಾವಳಿ ತಡೆಯಬೇಕಾಗಿದ್ದ ಅರಣ್ಯಾಧಿಕಾರಿಗಳು ಗ್ರಾಮ ಪಂಚಾಯಿತಿ ಹಾಗೂ ಖಾಸಗಿ ಬಡಾವಣೆಗಳ ಮಾಲೀಕರು ಚಿರತೆ ಹಾವಳಿ ತಡೆಯಲು ಮುಂದಾಗದೆ ತಮ್ಮ ವ್ಯಾಪ್ತಿಗೆ ಬರುವುದಿಲ್ಲ ಎಂದು ಜಾರಿಕೊಳ್ಳುತ್ತಿದ್ದಾರೆ.

ಚಿರತೆ ಹಾವಳಿ ಇದೇ ರೀತಿ ಮುಂದುವರಿದಲ್ಲಿ ಮೈಸೂರಿನ ಅರಣ್ಯ ಇಲಾಖೆ ಮುಂದೆ ಪ್ರತಿಭಟನೆ ನಡೆಸಲಾಗುತ್ತದೆ ಎಂದು ರಾಜ್ಯ ರೈತ ಸಂಘದ ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ.ಮರಂಕಯ್ಯ ಎಚ್ಚರಿಸಿದ್ದಾರೆ.

” ಚಿರತೆಯು ಕುರಿಗಳ ಹಿಂಡಿನ ಮೇಲೆಎರಗಿದ್ದನ್ನು ಕಂಡ ನಾನು ಜೋರಾಗಿಕಿರುಚಾಡಿದಾಗ ಅದು ಕುರಿಯನ್ನು ಬಿಟ್ಟು ಕುರುಚಲು ಕಾಡಿನತ್ತ ಸಾಗಿತು. ನಾನು ಭಯದಿಂದ ಗ್ರಾಮದತ್ತ ಓಡಿ ಬಂದೆ.”

-ಜೋಗನಾಯಕ, ಕುರಿಗಾಹಿ, ಕೆಂಚಲಗೂಡು

ಆಂದೋಲನ ಡೆಸ್ಕ್

Recent Posts

ಟಿವಿಕೆ ಗೆಲುವು : ಹನೂರಲ್ಲಿ ಸಂಭ್ರಮಾಚರಣೆ

ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…

4 hours ago

ಪ.ಬಂಗಾಳ | ವಿಟೋ ಅಧಿಕಾರ ಬಳಸಿ ಮಂತ್ರಿಮಂಡಳ ವಿಸರ್ಜಿಸಿದ ರಾಜ್ಯಪಾಲ ; ದೀದಿಗೆ ಹಿನ್ನೆಡೆ

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…

4 hours ago

ಹನೂರು | ಕಾಡು ಹಂದಿ ದಾಳಿ ; ರೈತನಿಗೆ ಗಂಭೀರ ಗಾಯ

ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…

4 hours ago

ಡಿಎಂಕೆ-ಎಐಎಡಿಎಂಕೆ ಮೈತ್ರಿ ವದಂತಿ ; ಸ್ಟಾಲಿನ್‌ ಹೇಳಿದ್ದೇನು?

ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…

5 hours ago

ಮೇಲು-ಕೀಳು ಕಳೆಯಲಿ ; ಸರ್ವರೂ ಒಂದೇ ಎಂಬ ಮನೋಭಾವ ಮೂಡಲಿ : ಮೋಹನ್‌ ಭಾಗವತ್‌

ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…

5 hours ago

ಬೆಂಗಳೂರು ಕೈತಪ್ಪಿದ ಐಪಿಎಲ್‌ ಫೈನಲ್‌ ಪಂದ್ಯ : ಕೆಎಸ್‌ಸಿಎ ಹೇಳಿದ್ದೇನು?

ಬೆಂಗಳೂರು : ಇಂಡಿಯನ್‌ ಪ್ರೀಮಿಯರ್‌ ಲೀಗ್‌(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…

5 hours ago