ಪ್ರಸಾದ್ ಲಕ್ಕೂರು
ಮೇಯುವ ಜಾನುವಾರು, ಮೇಕೆಗಳ ಮೇಲೆ ದಾಳಿ; ಜಮೀನುಗಳಿಗೆ ಹೋಗಲು ಗ್ರಾಮಸ್ಥರ ಆತಂಕ
ಚಾಮರಾಜನಗರ: ತಾಲ್ಲೂಕಿನ ಉಮ್ಮತ್ತೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಒಂದು ತಿಂಗಳಿನಿಂದ ಚಿರತೆಗಳ ಹಾವಳಿ ಹೆಚ್ಚಾಗಿದ್ದು, ಗ್ರಾಮಸ್ಥರು ಆತಂಕಗೊಂಡಿದ್ದಾರೆ.
ಉಮ್ಮತ್ತೂರು, ಲಿಂಗಣಾಪುರ, ತೊರವಳ್ಳಿ, ದೇಮಹಳ್ಳಿ, ಕುದೇರು, ದಾಸನೂರು, ಬಾಗಳಿ, ಜನ್ನೂರು, ಹಳ್ಳಿಕೆರೆಹುಂಡಿ ಗ್ರಾಮಗಳ ಜಮೀನುಗಳ ವ್ಯಾಪ್ತಿಯಲ್ಲಿ ಚಿರತೆಗಳ ಉಪಟಳ ಮಿತಿಮೀರಿದೆ. ಇದರಿಂದಾಗಿ ಈ ಗ್ರಾಮಗಳ ಜನರು ತಮ್ಮ ಜಮೀನುಗಳಿಗೆ ಹೋಗಿ ಬರಲು ಹಾಗೂ ಜಾನುವಾರುಗಳನ್ನು ಮೇಯಿಸಲು ಬರಡು ಭೂಮಿಗಳತ್ತ ತೆರಳಲು ಭಯಭೀತರಾಗಿದ್ದಾರೆ. ಉಮ್ಮತ್ತೂರು ಕೃಷ್ಣಮೃಗ ವನ್ಯಧಾಮಕ್ಕೆ ಹೊಂದಿಕೊಂಡಂತೆ ಇರುವ ಬಸವನ ಬೆಟ್ಟ ಹಾಗೂ ಬೆಟ್ಟದ ತಪ್ಪಲಿನಲ್ಲಿರುವ ಆನೆ ಕೆಂಬರೆ (ಹಳ್ಳ)ಯಲ್ಲಿ ೩-೪ ಚಿರತೆಗಳು ವಾಸವಾಗಿವೆ. ಅವುಗಳು ಆಗಾಗ್ಗೆ ಜಮೀನುಗಳು, ಬಂಜರು ಬಿದ್ದಿರುವ ಭೂಮಿಯಲ್ಲಿ ಜಾನುವಾರುಗಳು ಮೇಯುವಾಗ ದಾಳಿ ಮಾಡುತ್ತಿವೆ ಎಂದು ಗ್ರಾಮಸ್ಥರು ದೂರಿದ್ದಾರೆ.
ರಾತ್ರಿ ವೇಳೆ ಮತ್ತು ಬೆಳಗಿನ ಜಾವ ಈ ಗ್ರಾಮಗಳ ಜನರು ತಮ್ಮ ಪಂಪ್ಸೆಟ್ ನೀರಾವರಿ ಜಮೀನು ಹಾಗೂ ಮಳೆಯಾಶ್ರಿತ ಜಮೀನುಗಳಿಗೆ ಹೋಗಿ ಬರಲು ಭಯಪಡುತ್ತಿದ್ದಾರೆ. ಸಮೀಪವೇ ಇರುವ ಅರಣ್ಯವನ್ನು ಬಿಟ್ಟು ಆಹಾರ ಅರಸಿ ಅಡ್ಡಾಡುವ ಚಿರತೆಗಳು ದಾಳಿ ನಡೆಸಬಹುದೆಂಬ ಆತಂಕದಿಂದಲೇ ಓಡಾಡಬೇಕಿದೆ ಎಂದು ರೈತರಾದ ನಟೇಶ್ ಅಳಲು ತೋಡಿಕೊಂಡಿದ್ದಾರೆ.
ಕೊಟ್ಟಿಗೆಯಲ್ಲಿದ್ದ ಕರು ಹೊತ್ತೊಯ್ದ ಚಿರತೆ…”
ಚಾ.ನಗರ: ಬುಧವಾರ ತಡರಾತ್ರಿ ಚಿರತೆಯೊಂದು ಲಿಂಗಣಾಪುರದ ಹೊರವಲಯದಲ್ಲಿರುವ ನಟೇಶ್ ಎಂಬವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಜಾನುವಾರುಗಳ ಪೈಕಿ ಒಂದು ಕರುವನ್ನು ಹೊತ್ತೊಯ್ದು ಪಕ್ಕದ ಪೊದೆಯಲ್ಲಿ ತಿಂದು ಹಾಕಿದೆ. ಮಂಗಳವಾರ ಸಂಜೆ ಇದೇ ಗ್ರಾಮದ ಪುಟ್ಟೇಗೌಡ ಎಂಬವರು ತಮ್ಮ ಜಮೀನಿನ ಬಳಿ ಜಾನುವಾರುಗಳು ಹಾಗೂ ಮೇಕೆಗಳನ್ನು ಮೇಯಿಸುತ್ತಿದ್ದಾಗ ಚಿರತೆಯು ೨ ಮೇಕೆಗಳನ್ನು ಎಳೆದೊಯ್ದು ತಿಂದು ಹಾಕಿದೆ. ಚಿರತೆಯ ಹಾವಳಿಯಿಂದ ನಟೇಶ್ ಮತ್ತು ಪುಟ್ಟೇಗೌಡ ಅವರು ಸಹಸ್ರಾರು ರೂ. ನಷ್ಟ ಅನುಭವಿಸಿದ್ದಾರೆ.
೨೦ ದಿನಗಳಲ್ಲಿ ೩ ಚಿರತೆಗಳು ಸೆರೆ”
ಚಾ.ನಗರ: ಗ್ರಾಮಗಳ ವ್ಯಾಪ್ತಿಯಲ್ಲಿ ಚಿರತೆಗಳ ಹಾವಳಿ ಕುರಿತು ಗ್ರಾಮಸ್ಥರು ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಲಾಖೆಯ ಸಿಬ್ಬಂದಿ ಕುದೇರು ಮತ್ತು ಉಮ್ಮತ್ತೂರು ಬಳಿಯ ಜಮೀನುಗಳಲ್ಲಿ ಬೋನುಗಳನ್ನು ಇರಿಸಿ ಮೇಕೆಗಳನ್ನು ಕಟ್ಟಿಹಾಕಿದ್ದರು. ೨೦ ದಿನಗಳ ಅಂತರದಲ್ಲಿ ಉಮ್ಮತ್ತೂರು-ದಾಸನೂರು ಮಾರ್ಗದ ಕ್ವಾರಿ ಸಮೀಪದ ಜಮೀನಿನ ಬಳಿ ಇಡಲಾಗಿದ್ದ ಬೋನಿಗೆ ೨ ಚಿರತೆಗಳು ಹಾಗೂ ಕಳೆದ ಶನಿವಾರ ಕುದೇರು-ತೊರವಳ್ಳಿ ರಸ್ತೆ ಬದಿಯ ಕರಿಕಲ್ಲು ಕ್ವಾರಿ ಬಳಿ ಇಟ್ಟಿದ್ದ ಬೋನಿಗೆ ಒಂದು ಚಿರತೆ ಸೆರೆಯಾಗಿದೆ. ಇನ್ನೇನು ಚಿರತೆಗಳ ಕಾಟ ತಪ್ಪಿತು ಎಂದು ಗ್ರಾಮಸ್ಥರು ನಿಟ್ಟುಸಿರು ಬಿಡುತ್ತಿದ್ದಂತೆ ಬುಧವಾರ ರಾತ್ರಿ ಚಿರತೆಯೊಂದು ಕರುವೊಂದನ್ನು ಎಳೆದೊಯ್ದು ತಿಂದಿದೆ.
” ಲಿಂಗಣಾಪುರದ ಹೊರವಲಯದಲ್ಲಿ ರಾತ್ರಿ ಚಿರತೆ ದಾಳಿಗೆ ಕರು ಬಲಿಯಾಗಿರುವುದು ಗಮನಕ್ಕೆ ಬಂದಿದೆ. ಸಿಬ್ಬಂದಿಯನ್ನು ಸ್ಥಳಕ್ಕೆ ಕಳುಹಿಸಿ ಪರಿಶೀಲನೆ ನಡೆಸಲಾಗಿದೆ. ಕರುವಿನ ಕಳೇಬರದ ಮರಣೋತ್ತರ ಪರೀಕ್ಷೆ ವರದಿ ಬಳಿಕ ಇಲಾಖೆಯಿಂದ ಪರಿಹಾರ ನೀಡಲಾಗುವುದು. ಲಿಂಗಣಾಪುರ ಬಳಿ ಬೋನು ಇಟ್ಟು ಚಿರತೆ ಸೆರೆ ಹಿಡಿಯಲಾಗುವುದು.”
-ಸಂದೀಪ್ ಕಮ್ಮಾರ್, ಪ್ರೊಬೆಷನರಿ ಎಸಿಎಫ್, ಚಾಮರಾಜನಗರ ವಲಯ
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…