Andolana originals

ಚಿರತೆ ದಾಳಿ: ಇಬ್ಬರಿಗೆ ಗಾಯ

ಹುಣಸೂರು: ಚಿರತೆ ಮರಿ ದಾಳಿಯಿಂದ ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ.

ತಾಲ್ಲೂಕಿನ ಗಾವಡಗೆರೆಹೋಬಳಿಯ ಹುಲ್ಯಾಳು ಗ್ರಾಮದ ಅಜಯ್ ಹಾಗೂ ಕೋಳಿ ಫಾರಂ ಮಾಲೀಕ ಕೆ.ಆರ್.ನಗರದ ನಿವಾಸಿ ರಾಜು ಗಾಯಗೊಂಡವರು.

ಅಜಯ್ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ರಾಜು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭಾನುವಾರ ಸಂಜೆ ಗ್ರಾಮದೊಳಗೆ ನುಗ್ಗಿದ್ದ ಚಿರತೆ ಮರಿಯು ಅಜಯ್‌ರಿಗೆ ಸೇರಿದ ಹುಲ್ಲಿನ ಮೆದೆಯೊಳಗೆ ಅಡಗಿ ಕುಳಿತಿತ್ತು. ಪಕ್ಕದಲ್ಲೇ ನಡೆದು ಹೋಗುತ್ತಿದ್ದ ಅಜಯ್ ಮೇಲೆರಗಿ ಕೈಗೆ ಕಚ್ಚಿದೆ.

ಈ ವೇಳೆ ಅಜಯ್ ಜೋರಾಗಿ ಕೂಗಿಕೊಂಡಿದ್ದರಿಂದ ಸಮೀಪದಲ್ಲಿದ್ದ ಜನರು ನೆರವಿಗೆ ಧಾವಿಸಿದ್ದಾರೆ. ಈ ಸಂದರ್ಭದಲ್ಲಿ ಕೋಳಿ ಫಾರಂ ಮಾಲೀಕ ರಾಜು ಅವರ ಮೇಲೆರಗಿದ ಚಿರತೆ ಅವರನ್ನು ಕಚ್ಚಿ ಗಾಯಗೊಳಿಸಿ ಚಿರತೆಯು ಮತ್ತೆ ಮೆದೆಯೊಳಗೆ ಸೇರಿಕೊಂಡಿತ್ತು. ಹುಲ್ಲಿನ ಮೆದೆ ಸುತ್ತುವರಿದ ಗ್ರಾಮಸ್ಥರು ಬಲೆ ಹಾಕಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸಾಮಾಜಿಕ ಅರಣ್ಯ ವಿಭಾಗದ ಡಿಆರ್‌ಎಫ್‌ಒ ರಮಣಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಸುಮಾರು ಒಂದು ವರ್ಷದ ಚಿರತೆ ಮರಿಯನ್ನು ವಶಕ್ಕೆ ಪಡೆದು ಪಶುವೈದ್ಯರಿಂದ ಚಿಕಿತ್ಸೆ ಕೊಡಿಸಿ, ಬಂಧ ಮುಕ್ತಗೊಳಿಸಿದ್ದಾರೆ.

ಗಾಯಾಳುಗಳಿಗೆ ಕೆ.ಆರ್.ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅರಣ್ಯ ಇಲಾಖೆ ವೆಚ್ಚ ಭರಿಸಲಿ : ಹುಲ್ಯಾಳು ಗ್ರಾಮದಲ್ಲಿ ಚಿರತೆ ದಾಳಿಯಿಂದ ಗಾಯಗೊಂಡಿ ರುವ ಗಾಯಾಳುಗಳಿಗೆ ಇಲಾಖೆ ವತಿಯಿಂದಲೇ ಉತ್ತಮ ಚಿಕಿತ್ಸೆ ಕೊಡಿಸುವ ಜೊತೆಗೆ ಸೂಕ್ತ ಪರಿಹಾರ ನೀಡಬೇಕೆಂದು ಸತ್ಯ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಒತ್ತಾಯಿಸಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಬಿಡದಿ ಟೌನ್‌ಶಿಪ್‌ ಡಿಪಿಆರ್‌ಗೆ ಸಿದ್ಧತೆ : 26 ಕೋಟಿ ರೂ. ವೆಚ್ಚದ ಟೆಂಡರ್ ಕರೆಯಲು ತೀರ್ಮಾನ

ಬೆಂಗಳೂರು : ಬಿಡದಿ ಟೌನ್‌ಶಿಪ್ ಯೋಜನೆ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆ, ರೈತರ ಪ್ರತಿಭಟನೆ ಹಾಗೂ ಆರೋಪ-ಪ್ರತ್ಯಾರೋಪಗಳ ನಡುವೆಯೂ ಗ್ರೇಟರ್…

1 hour ago

ದುಬಾರೆ ದುರಂತ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ; ಆನೆ ಶಿಬಿರಗಳಿಗೆ ಹೊಸ ನಿಯಮ

ಬೆಂಗಳೂರು : ರಾಜ್ಯದ ಆನೆ ಶಿಬಿರಗಳು, ಸೆರೆಯಲ್ಲಿರುವ ಆನೆಗಳ ಕೇಂದ್ರಗಳು ಹಾಗೂ ಸಾರ್ವಜನಿಕ ವೀಕ್ಷಣಾ ಕೇಂದ್ರಗಳಿಗೆ ಕರ್ನಾಟಕ ಅರಣ್ಯ ಇಲಾಖೆ…

2 hours ago

ಬಿಡದಿ ಟೌನ್‌ಶಿಪ್: ಪೋಸ್ಟರ್ ಸಮರ

ಬೆಂಗಳೂರು : ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜಾ.ದಳ ನಡುವಿನ ವಾಕ್ ಸಮರ ತಾರಕಕ್ಕೇರಿದೆ.…

4 hours ago

UGC NET | ಪ್ರವೇಶ ಪತ್ರ ಬಿಡುಗಡೆ

ಹೊಸದಿಲ್ಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಯುಜಿಸಿ ನೆಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗಾಗಿ ಪ್ರವೇಶ ಪತ್ರಗಳನ್ನು ಬುಧವಾರ ಅಧಿಕೃತವಾಗಿ ಬಿಡುಗಡೆ…

4 hours ago

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್‌ ರಾಜ್‌ ಹೆಸರು: ನಟ ಏನಂದ್ರು ಗೊತ್ತಾ?

ಬೆಂಗಳೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಪ್ರಕರಣದಲ್ಲಿ ತಮ್ಮ ಹೆಸರನ್ನು ಕೆಲವರು ಅನಗತ್ಯವಾಗಿ ಉಲ್ಲೇಖಿಸುತ್ತಿದ್ದಾರೆ. ನಾನು ಯಾವುದೇ ರೀತಿಯ ತಪ್ಪು ಮಾಡಿಲ್ಲ.…

9 hours ago

ನೀಟ್‌ ವಿದ್ಯಾರ್ಥಿಗಳಿಗೆ ಪ್ರಯಾಣದಲ್ಲಿ 50% ರಿಯಾಯಿತಿ: ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಆದೇಶ

ಲಕ್ನೋ: ಜೂನ್.‌21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್‌ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ…

11 hours ago