ಹುಣಸೂರು: ಚಿರತೆ ಮರಿ ದಾಳಿಯಿಂದ ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಗಾವಡಗೆರೆಹೋಬಳಿಯ ಹುಲ್ಯಾಳು ಗ್ರಾಮದ ಅಜಯ್ ಹಾಗೂ ಕೋಳಿ ಫಾರಂ ಮಾಲೀಕ ಕೆ.ಆರ್.ನಗರದ ನಿವಾಸಿ ರಾಜು ಗಾಯಗೊಂಡವರು.
ಅಜಯ್ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ರಾಜು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾನುವಾರ ಸಂಜೆ ಗ್ರಾಮದೊಳಗೆ ನುಗ್ಗಿದ್ದ ಚಿರತೆ ಮರಿಯು ಅಜಯ್ರಿಗೆ ಸೇರಿದ ಹುಲ್ಲಿನ ಮೆದೆಯೊಳಗೆ ಅಡಗಿ ಕುಳಿತಿತ್ತು. ಪಕ್ಕದಲ್ಲೇ ನಡೆದು ಹೋಗುತ್ತಿದ್ದ ಅಜಯ್ ಮೇಲೆರಗಿ ಕೈಗೆ ಕಚ್ಚಿದೆ.
ಈ ವೇಳೆ ಅಜಯ್ ಜೋರಾಗಿ ಕೂಗಿಕೊಂಡಿದ್ದರಿಂದ ಸಮೀಪದಲ್ಲಿದ್ದ ಜನರು ನೆರವಿಗೆ ಧಾವಿಸಿದ್ದಾರೆ. ಈ ಸಂದರ್ಭದಲ್ಲಿ ಕೋಳಿ ಫಾರಂ ಮಾಲೀಕ ರಾಜು ಅವರ ಮೇಲೆರಗಿದ ಚಿರತೆ ಅವರನ್ನು ಕಚ್ಚಿ ಗಾಯಗೊಳಿಸಿ ಚಿರತೆಯು ಮತ್ತೆ ಮೆದೆಯೊಳಗೆ ಸೇರಿಕೊಂಡಿತ್ತು. ಹುಲ್ಲಿನ ಮೆದೆ ಸುತ್ತುವರಿದ ಗ್ರಾಮಸ್ಥರು ಬಲೆ ಹಾಕಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸಾಮಾಜಿಕ ಅರಣ್ಯ ವಿಭಾಗದ ಡಿಆರ್ಎಫ್ಒ ರಮಣಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಸುಮಾರು ಒಂದು ವರ್ಷದ ಚಿರತೆ ಮರಿಯನ್ನು ವಶಕ್ಕೆ ಪಡೆದು ಪಶುವೈದ್ಯರಿಂದ ಚಿಕಿತ್ಸೆ ಕೊಡಿಸಿ, ಬಂಧ ಮುಕ್ತಗೊಳಿಸಿದ್ದಾರೆ.
ಗಾಯಾಳುಗಳಿಗೆ ಕೆ.ಆರ್.ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಣ್ಯ ಇಲಾಖೆ ವೆಚ್ಚ ಭರಿಸಲಿ : ಹುಲ್ಯಾಳು ಗ್ರಾಮದಲ್ಲಿ ಚಿರತೆ ದಾಳಿಯಿಂದ ಗಾಯಗೊಂಡಿ ರುವ ಗಾಯಾಳುಗಳಿಗೆ ಇಲಾಖೆ ವತಿಯಿಂದಲೇ ಉತ್ತಮ ಚಿಕಿತ್ಸೆ ಕೊಡಿಸುವ ಜೊತೆಗೆ ಸೂಕ್ತ ಪರಿಹಾರ ನೀಡಬೇಕೆಂದು ಸತ್ಯ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಒತ್ತಾಯಿಸಿದ್ದಾರೆ.
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…