Andolana originals

ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಚಿರತೆ ಹಾವಳಿ

ಮಹಾದೇಶ್ ಎಂ.ಗೌಡ

ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗಮಧ್ಯದಲ್ಲಿ ಪ್ರತಿನಿತ್ಯ ಚಿರತೆ ಕಾಣಿಸಿಕೊಳ್ಳುತ್ತಿದ್ದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವಲ್ಲಿ ವಿಫಲರಾಗಿದ್ದಾರೆ ಎಂದು ವಾಹನ ಸವಾರರು, ಭಕ್ತಾದಿಗಳು ಆರೋಪಿಸಿದ್ದಾರೆ.

ತಾಳಬೆಟ್ಟ-ಮಲೆ ಮಹದೇಶ್ವರ ಬೆಟ್ಟ ಮಾರ್ಗ ಮಧ್ಯದ ರಂಗಸ್ವಾಮಿ ಒಡ್ಡು, ಆನೆ ತಲೆದಿಂಬ ಹಾಗೂ ಇನ್ನಿತರ ಕಡೆಗಳಲ್ಲಿ ನಿರಂತರವಾಗಿ ಚಿರತೆ ಕಾಣಿಸಿಕೊಳ್ಳುತ್ತಲೇ ಇದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳು ವೈರಲ್ ಆಗಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಮೌನವಹಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಮ.ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ವೇಳೆ ರಂಗಸ್ವಾಮಿ ಒಡ್ಡಿನ ಸಮೀಪ ಮಂಡ್ಯ ಜಿಲ್ಲೆಯ ಪ್ರವೀಣ್ ಎಂಬವರ ಮೇಲೆ ದಾಳಿ ನಡೆಸಿ ಕೊಂದುಹಾಕಿತ್ತು. ನಂತರ ಅರಣ್ಯ ಇಲಾಖೆಯವರು ಎಚ್ಚೆತ್ತು ಮೂರು ದಿನಗಳ ಕಾಲ ಮ.ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಪಾದಯಾತ್ರಿಕರ ಸಂಚಾರವನ್ನು ನಿರ್ಬಂಧಿಸಿ ಒಂದು ಚಿರತೆಯನ್ನು ಸೆರೆಹಿಡಿದಿದ್ದರು. ಇದಾದ ಎರಡು ದಿನಗಳ ನಂತರ ಮತ್ತೊಂದು ಚಿರತೆ ರಂಗಸ್ವಾಮಿ ಒಡ್ಡಿನ ಸಮೀಪವೇ ಕಾಣಿಸಿಕೊಂಡಿರುವುದನ್ನು ವಾಹನ ಸವಾರರು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.

ನಂತರ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಸಂಬಂಧ ಫೆ.೧೦ರಂದು ಪಾದಯಾತ್ರೆಯ ಮೂಲಕ ಬೆಟ್ಟಕ್ಕೆ ತೆರಳುತ್ತಿದ್ದ ಶ್ರೇಯಸ್ ಎಂಬ ಬಾಲಕನಮೇಲೆ ದಾಳಿ ನಡೆಸಿ ಗಾಯಗೊಳಿಸಿತ್ತು. ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪೂರ್ಣಗೊಂಡು ಒಂದು ತಿಂಗಳು ಕಳೆಯುತ್ತಿದ್ದರೂ ಚಿರತೆಯನ್ನು ಸೆರೆ ಹಿಡಿಯಲು ಕ್ರಮ ಕೈಗೊಂಡಿಲ್ಲ. ಇದರಿಂದ ಪ್ರತಿನಿತ್ಯ ಚಿರತೆ ಹಾವಳಿ ಹೆಚ್ಚಾಗುತ್ತಿದ್ದು ವಾಹನ ಸವಾರರು ಆತಂಕದಲ್ಲಿಯೇ ಮ.ಬೆಟ್ಟಕ್ಕೆ ತೆರಳುತ್ತಿದ್ದಾರೆ.

೩ ದಿನಗಳ ಹಿಂದೆ ರಾತ್ರಿ ವೇಳೆ ಆನೆ ತಲೆ ದಿಂಬದಲ್ಲಿ ಚಿರತೆ ಕಾಣಿಸಿಕೊಂಡರೆ, ಅದಾದ ಮರುದಿನವೇ ಬಂಡೆಕಲ್ಲಿನ ಮೇಲೆ ಚಿರತೆ ಕುಳಿತಿರುವುದನ್ನು ವಾಹನ ಸವಾರರು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಕೂಡಲೇ ಚಿರತೆಯನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರ ಮಾಡಬೇಕು ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

” ಮೂರು ತಿಂಗಳಿನಿಂದ ಮ.ಬೆಟ್ಟ ಮಾರ್ಗ ಮಧ್ಯದಲ್ಲಿ ನಿರಂತರವಾಗಿ ಚಿರತೆ ಕಾಣಿಸಿಕೊಳ್ಳುತ್ತಿದೆ. ಈಗಾಗಲೇ ಒಬ್ಬ ಪಾದಯಾತ್ರಿಕರ ಬಲಿ ತೆಗೆದುಕೊಂಡಿದೆ. ರಸ್ತೆ ಮಧ್ಯದಲ್ಲಿಯೇ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ವಾಹನ ಸವಾರರು ಆತಂಕದಲ್ಲಿಯೇ ಮ.ಬೆಟ್ಟ ತಲುಪಿ ಮಹದೇಶ್ವರ ದರ್ಶನ ಪಡೆಯಬೇಕಿದೆ. ಇನ್ನು ಮುಂದಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು.”

ಚಿರಂಜೀವಿ, ಮಲೆ ಮಹದೇಶ್ವರ ಬೆಟ್ಟ ನಿವಾಸಿ

” ಮ.ಬೆಟ್ಟ ರಸ್ತೆ ಮಾರ್ಗ ಮಧ್ಯದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ನಮ್ಮ ಸಿಬ್ಬಂದಿ ಚಲನವಲನದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಡ್ರೋನ್ ಮುಖಾಂತರ ಸರ್ವೆ ಮಾಡಲು ಮನವಿ ಮಾಡಲಾಗಿತ್ತು. ಇದೀಗ ಡ್ರೋನ್ ಸಿಬ್ಬಂದಿ ಆಗಮಿಸಲಿದ್ದಾರೆ. ಸಿಸಿಎಫ್ ರವರ ಜೊತೆ ಚರ್ಚೆ ನಡೆಸಿ ಚಿರತೆ ಸೆರೆಗೆ ಸೂಕ್ತ ಕ್ರಮ ವಹಿಸಲಾಗುವುದು.”

ಭಾಸ್ಕರ್, ಡಿಸಿಎಫ್, ಮಲೆ ಮಹದೇಶ್ವರ ವನ್ಯಧಾಮ

 

 

ಆಂದೋಲನ ಡೆಸ್ಕ್

Recent Posts

ಹನೂರಿನಲ್ಲಿ ಮೂವರ ಎನ್‌ಕೌಂಟರ್ ಪ್ರಕರಣ: ಘಟನಾ ಸ್ಥಳಕ್ಕೆ ತನಿಖಾ ತಂಡ ಭೇಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಕಾವೇರಿ ವನ್ಯಜೀವಿ ಧಾಮ ವ್ಯಾಪ್ತಿಯಲ್ಲಿ ನಡೆದ ಎನ್‌ಕೌಂಟರ್ ಘಟನೆಯ…

17 mins ago

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

4 hours ago