Andolana originals

ಮಹದೇಶ್ವರ ಬೆಟ್ಟದ ಮಾರ್ಗದಲ್ಲಿ ಚಿರತೆ ಹಾವಳಿ

ಮಹಾದೇಶ್ ಎಂ.ಗೌಡ

ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ

ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುವ ಮಾರ್ಗಮಧ್ಯದಲ್ಲಿ ಪ್ರತಿನಿತ್ಯ ಚಿರತೆ ಕಾಣಿಸಿಕೊಳ್ಳುತ್ತಿದ್ದರೂ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆ ಹಿಡಿಯುವಲ್ಲಿ ವಿಫಲರಾಗಿದ್ದಾರೆ ಎಂದು ವಾಹನ ಸವಾರರು, ಭಕ್ತಾದಿಗಳು ಆರೋಪಿಸಿದ್ದಾರೆ.

ತಾಳಬೆಟ್ಟ-ಮಲೆ ಮಹದೇಶ್ವರ ಬೆಟ್ಟ ಮಾರ್ಗ ಮಧ್ಯದ ರಂಗಸ್ವಾಮಿ ಒಡ್ಡು, ಆನೆ ತಲೆದಿಂಬ ಹಾಗೂ ಇನ್ನಿತರ ಕಡೆಗಳಲ್ಲಿ ನಿರಂತರವಾಗಿ ಚಿರತೆ ಕಾಣಿಸಿಕೊಳ್ಳುತ್ತಲೇ ಇದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋಗಳು ವೈರಲ್ ಆಗಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ಮೌನವಹಿಸಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಮ.ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ವೇಳೆ ರಂಗಸ್ವಾಮಿ ಒಡ್ಡಿನ ಸಮೀಪ ಮಂಡ್ಯ ಜಿಲ್ಲೆಯ ಪ್ರವೀಣ್ ಎಂಬವರ ಮೇಲೆ ದಾಳಿ ನಡೆಸಿ ಕೊಂದುಹಾಕಿತ್ತು. ನಂತರ ಅರಣ್ಯ ಇಲಾಖೆಯವರು ಎಚ್ಚೆತ್ತು ಮೂರು ದಿನಗಳ ಕಾಲ ಮ.ಬೆಟ್ಟಕ್ಕೆ ದ್ವಿಚಕ್ರ ವಾಹನ ಹಾಗೂ ಪಾದಯಾತ್ರಿಕರ ಸಂಚಾರವನ್ನು ನಿರ್ಬಂಧಿಸಿ ಒಂದು ಚಿರತೆಯನ್ನು ಸೆರೆಹಿಡಿದಿದ್ದರು. ಇದಾದ ಎರಡು ದಿನಗಳ ನಂತರ ಮತ್ತೊಂದು ಚಿರತೆ ರಂಗಸ್ವಾಮಿ ಒಡ್ಡಿನ ಸಮೀಪವೇ ಕಾಣಿಸಿಕೊಂಡಿರುವುದನ್ನು ವಾಹನ ಸವಾರರು ಸೆರೆಹಿಡಿದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದರು.

ನಂತರ ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಸಂಬಂಧ ಫೆ.೧೦ರಂದು ಪಾದಯಾತ್ರೆಯ ಮೂಲಕ ಬೆಟ್ಟಕ್ಕೆ ತೆರಳುತ್ತಿದ್ದ ಶ್ರೇಯಸ್ ಎಂಬ ಬಾಲಕನಮೇಲೆ ದಾಳಿ ನಡೆಸಿ ಗಾಯಗೊಳಿಸಿತ್ತು. ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪೂರ್ಣಗೊಂಡು ಒಂದು ತಿಂಗಳು ಕಳೆಯುತ್ತಿದ್ದರೂ ಚಿರತೆಯನ್ನು ಸೆರೆ ಹಿಡಿಯಲು ಕ್ರಮ ಕೈಗೊಂಡಿಲ್ಲ. ಇದರಿಂದ ಪ್ರತಿನಿತ್ಯ ಚಿರತೆ ಹಾವಳಿ ಹೆಚ್ಚಾಗುತ್ತಿದ್ದು ವಾಹನ ಸವಾರರು ಆತಂಕದಲ್ಲಿಯೇ ಮ.ಬೆಟ್ಟಕ್ಕೆ ತೆರಳುತ್ತಿದ್ದಾರೆ.

೩ ದಿನಗಳ ಹಿಂದೆ ರಾತ್ರಿ ವೇಳೆ ಆನೆ ತಲೆ ದಿಂಬದಲ್ಲಿ ಚಿರತೆ ಕಾಣಿಸಿಕೊಂಡರೆ, ಅದಾದ ಮರುದಿನವೇ ಬಂಡೆಕಲ್ಲಿನ ಮೇಲೆ ಚಿರತೆ ಕುಳಿತಿರುವುದನ್ನು ವಾಹನ ಸವಾರರು ಸೆರೆಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಕೂಡಲೇ ಚಿರತೆಯನ್ನು ಸೆರೆ ಹಿಡಿದು ಬೇರೆಡೆ ಸ್ಥಳಾಂತರ ಮಾಡಬೇಕು ಎಂದು ಪ್ರಜ್ಞಾವಂತ ನಾಗರಿಕರು ಆಗ್ರಹಿಸಿದ್ದಾರೆ.

” ಮೂರು ತಿಂಗಳಿನಿಂದ ಮ.ಬೆಟ್ಟ ಮಾರ್ಗ ಮಧ್ಯದಲ್ಲಿ ನಿರಂತರವಾಗಿ ಚಿರತೆ ಕಾಣಿಸಿಕೊಳ್ಳುತ್ತಿದೆ. ಈಗಾಗಲೇ ಒಬ್ಬ ಪಾದಯಾತ್ರಿಕರ ಬಲಿ ತೆಗೆದುಕೊಂಡಿದೆ. ರಸ್ತೆ ಮಧ್ಯದಲ್ಲಿಯೇ ಚಿರತೆ ಕಾಣಿಸಿಕೊಳ್ಳುತ್ತಿರುವುದರಿಂದ ವಾಹನ ಸವಾರರು ಆತಂಕದಲ್ಲಿಯೇ ಮ.ಬೆಟ್ಟ ತಲುಪಿ ಮಹದೇಶ್ವರ ದರ್ಶನ ಪಡೆಯಬೇಕಿದೆ. ಇನ್ನು ಮುಂದಾದರೂ ಅರಣ್ಯ ಇಲಾಖೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು.”

ಚಿರಂಜೀವಿ, ಮಲೆ ಮಹದೇಶ್ವರ ಬೆಟ್ಟ ನಿವಾಸಿ

” ಮ.ಬೆಟ್ಟ ರಸ್ತೆ ಮಾರ್ಗ ಮಧ್ಯದಲ್ಲಿ ಚಿರತೆ ಕಾಣಿಸಿಕೊಳ್ಳುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ನಮ್ಮ ಸಿಬ್ಬಂದಿ ಚಲನವಲನದ ಬಗ್ಗೆ ಮಾಹಿತಿ ಕಲೆ ಹಾಕಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಡ್ರೋನ್ ಮುಖಾಂತರ ಸರ್ವೆ ಮಾಡಲು ಮನವಿ ಮಾಡಲಾಗಿತ್ತು. ಇದೀಗ ಡ್ರೋನ್ ಸಿಬ್ಬಂದಿ ಆಗಮಿಸಲಿದ್ದಾರೆ. ಸಿಸಿಎಫ್ ರವರ ಜೊತೆ ಚರ್ಚೆ ನಡೆಸಿ ಚಿರತೆ ಸೆರೆಗೆ ಸೂಕ್ತ ಕ್ರಮ ವಹಿಸಲಾಗುವುದು.”

ಭಾಸ್ಕರ್, ಡಿಸಿಎಫ್, ಮಲೆ ಮಹದೇಶ್ವರ ವನ್ಯಧಾಮ

 

 

ಆಂದೋಲನ ಡೆಸ್ಕ್

Recent Posts

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

6 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

7 hours ago

ಉತ್ತರ ಪ್ರದೇಶದಲ್ಲಿ ಮಳೆ ಅವಾಂತರ: ಸಾವಿನ ಸಂಖ್ಯೆ 104ಕ್ಕೆ ಏರಿಕೆ

ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…

8 hours ago

PGCET| MBA, MCA ಪ್ರವೇಶ ಪರೀಕ್ಷೆ ಜೂನ್.‌4ಕ್ಕೆ ಮುಂದೂಡಿದ ಕೆಇಎ

ಬೆಂಗಳೂರು: ಇದೇ ತಿಂಗಳ 24 ರಂದು ನಡೆಯಬೇಕಿದ್ದ ಎಂಬಿಎ, ಎಂಸಿಎ ಕೋರ್ಸ್‌ಗಳ ಪ್ರವೇಶ್‌ ಪರೀಕ್ಷೆಯನ್ನು ಜೂನ್.‌14ಕ್ಕೆ ಮುಂದೂಡಿಕೆ ಮಾಡಲಾಗಿದೆ ಎಂದು…

8 hours ago

ಹನೂರು| ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ…

9 hours ago

ಮಾರ್ಟಳ್ಳಿಯಲ್ಲಿ ಮರೀಚಿಕೆಯಾದ ಸ್ವಚ್ಛತೆ: ಗ್ರಾಮಸ್ಥರ ಆಕ್ರೋಶ

ಹನೂರು: ತಾಲ್ಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂಬ ಹೆಗ್ಗಳಿಕೆ ಹೊಂದಿರುವ ಮಾರ್ಟಳ್ಳಿಯಲ್ಲಿ ಸದ್ಯ ಸ್ವಚ್ಛತೆ ಎಂಬುದು ಮರೀಚಿಕೆಯಾಗಿದೆ. ಗ್ರಾಮದ…

9 hours ago