ಓದುಗರ ಪತ್ರ
ನಾಡ ದೇವತೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಬೇಕು ಹಾಗೂ ಇದರಿಂದ ಭಕ್ತರಿಗೂ ಸಮಸ್ಯೆಯಾಗಬಾರದು ಎಂದು ಸಂಸದ ಯದುವೀರ್ ಚಾಮರಾಜ ಒಡೆಯರ್ ಹೇಳಿರುವುದು ಚಿಂತನಾರ್ಹ.
ಚಾಮುಂಡೇಶ್ವರಿ ದೇವಿಯ ವಿಶೇಷ ದರ್ಶನಕ್ಕೆ ೨,೦೦೦ ರೂ. ನಿಗದಿಪಡಿಸಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಕಡಿಮೆ ದರ ನಿಗದಿ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿರುವುದಾಗಿಯೂ ಹೇಳಿರುವುದು ಸ್ವಾಗತಾರ್ಹ. ತಿರುಪತಿ ಮಾದರಿಯಲ್ಲಿ ನಮ್ಮ ಚಾಮುಂಡಿ ಬೆಟ್ಟದಲ್ಲಿಯೂ ಮೊಬೈಲ್ ಫೋನ್ ಹಾಗೂ ಇತರೆ ವಿದ್ಯುನ್ಮಾನ ಸಾಧನಗಳನ್ನು ನಿಷೇಧ ಮಾಡಬೇಕು. ಇತ್ತೀಚೆಗೆ ಕೆಲವರು ಗೊತ್ತಿದ್ದೋ, ಗೊತ್ತಿಲ್ಲದೆಯೋ ದೇವಿಯ ಮೂಲ ವಿಗ್ರಹದ ವಿಡಿಯೋ ಮಾಡುತ್ತಿರುವುದರಿಂದ ಧಾರ್ಮಿಕ ಕ್ಷೇತ್ರದ ಪಾವಿ ತ್ರ್ಯತೆಗೆ ಧಕ್ಕೆ ಬರುತ್ತಿದೆ. ಆದ್ದರಿಂದ ಈ ನಿಟ್ಟಿನಲ್ಲಿ ಅತಿ ಶೀಘ್ರದಲ್ಲೇ ನಿಷೇಧದ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವುದಾಗಿ ಹೇಳಿರುವುದು ಪ್ರತಿಯೊಬ್ಬರೂ ಮೆಚ್ಚುವಂತಹದ್ದು.
–ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…