ಓದುಗರ ಪತ್ರ
ನಾಡ ದೇವತೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಬೇಕು ಹಾಗೂ ಇದರಿಂದ ಭಕ್ತರಿಗೂ ಸಮಸ್ಯೆಯಾಗಬಾರದು ಎಂದು ಸಂಸದ ಯದುವೀರ್ ಚಾಮರಾಜ ಒಡೆಯರ್ ಹೇಳಿರುವುದು ಚಿಂತನಾರ್ಹ.
ಚಾಮುಂಡೇಶ್ವರಿ ದೇವಿಯ ವಿಶೇಷ ದರ್ಶನಕ್ಕೆ ೨,೦೦೦ ರೂ. ನಿಗದಿಪಡಿಸಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಕಡಿಮೆ ದರ ನಿಗದಿ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿರುವುದಾಗಿಯೂ ಹೇಳಿರುವುದು ಸ್ವಾಗತಾರ್ಹ. ತಿರುಪತಿ ಮಾದರಿಯಲ್ಲಿ ನಮ್ಮ ಚಾಮುಂಡಿ ಬೆಟ್ಟದಲ್ಲಿಯೂ ಮೊಬೈಲ್ ಫೋನ್ ಹಾಗೂ ಇತರೆ ವಿದ್ಯುನ್ಮಾನ ಸಾಧನಗಳನ್ನು ನಿಷೇಧ ಮಾಡಬೇಕು. ಇತ್ತೀಚೆಗೆ ಕೆಲವರು ಗೊತ್ತಿದ್ದೋ, ಗೊತ್ತಿಲ್ಲದೆಯೋ ದೇವಿಯ ಮೂಲ ವಿಗ್ರಹದ ವಿಡಿಯೋ ಮಾಡುತ್ತಿರುವುದರಿಂದ ಧಾರ್ಮಿಕ ಕ್ಷೇತ್ರದ ಪಾವಿ ತ್ರ್ಯತೆಗೆ ಧಕ್ಕೆ ಬರುತ್ತಿದೆ. ಆದ್ದರಿಂದ ಈ ನಿಟ್ಟಿನಲ್ಲಿ ಅತಿ ಶೀಘ್ರದಲ್ಲೇ ನಿಷೇಧದ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವುದಾಗಿ ಹೇಳಿರುವುದು ಪ್ರತಿಯೊಬ್ಬರೂ ಮೆಚ್ಚುವಂತಹದ್ದು.
–ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…
ಬೆಂಗಳೂರು: ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಪತ್ತೆಗಾಗಿ ಪೊಲೀಸರು…
ಶಾಲಾ ಮಕ್ಕಳು ಭಾರವಾದ ಪುಸ್ತಕಗಳ ಬ್ಯಾಗ್ ಹೊರಲಾರದೆ ತ್ರಾಸದಿಂದಲೇ ಹೊತ್ತುಕೊಂಡು ನಡೆಯುವ ದೃಶ್ಯ ಈಗ ಎಲ್ಲೆಡೆ ಕಂಡುಬರುತ್ತದೆ. ಬ್ಯಾಗ್ನಲ್ಲಿ ಪಠ್ಯ…
ಸರ್ಕಾರ ಅಧಿಸೂಚನೆ ಹೊರಡಿಸುವುದು ಯಾವಾಗ? ಉದ್ಯೋಗ ನೇಮಕಾತಿ ಯಾವಾಗ? ಇದು ಸಾವಿರಾರು ಉದ್ಯೋಗ ಆಕಾಂಕ್ಷಿಗಳ ಪ್ರಶ್ನೆ. ಇದು ಕಳೆದ ಹಲವು…