Andolana originals

ಓದುಗರ ಪತ್ರ: ಚಾಮುಂಡಿ ಬೆಟ್ಟದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿ

ನಾಡ ದೇವತೆ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಬರುವ ಭಕ್ತರಿಗೆ ವಸ್ತ್ರ ಸಂಹಿತೆ ಜಾರಿಯಾಗಬೇಕು ಹಾಗೂ ಇದರಿಂದ ಭಕ್ತರಿಗೂ ಸಮಸ್ಯೆಯಾಗಬಾರದು ಎಂದು ಸಂಸದ ಯದುವೀರ್ ಚಾಮರಾಜ ಒಡೆಯರ್ ಹೇಳಿರುವುದು ಚಿಂತನಾರ್ಹ.

ಚಾಮುಂಡೇಶ್ವರಿ ದೇವಿಯ ವಿಶೇಷ ದರ್ಶನಕ್ಕೆ ೨,೦೦೦ ರೂ. ನಿಗದಿಪಡಿಸಿರುವ ಬಗ್ಗೆ ಸಾರ್ವಜನಿಕರಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಕಡಿಮೆ ದರ ನಿಗದಿ ಮಾಡುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿರುವುದಾಗಿಯೂ ಹೇಳಿರುವುದು ಸ್ವಾಗತಾರ್ಹ. ತಿರುಪತಿ ಮಾದರಿಯಲ್ಲಿ ನಮ್ಮ ಚಾಮುಂಡಿ ಬೆಟ್ಟದಲ್ಲಿಯೂ ಮೊಬೈಲ್ ಫೋನ್ ಹಾಗೂ ಇತರೆ ವಿದ್ಯುನ್ಮಾನ ಸಾಧನಗಳನ್ನು ನಿಷೇಧ ಮಾಡಬೇಕು. ಇತ್ತೀಚೆಗೆ ಕೆಲವರು ಗೊತ್ತಿದ್ದೋ, ಗೊತ್ತಿಲ್ಲದೆಯೋ ದೇವಿಯ ಮೂಲ ವಿಗ್ರಹದ ವಿಡಿಯೋ ಮಾಡುತ್ತಿರುವುದರಿಂದ ಧಾರ್ಮಿಕ ಕ್ಷೇತ್ರದ ಪಾವಿ ತ್ರ್ಯತೆಗೆ ಧಕ್ಕೆ ಬರುತ್ತಿದೆ. ಆದ್ದರಿಂದ ಈ ನಿಟ್ಟಿನಲ್ಲಿ ಅತಿ ಶೀಘ್ರದಲ್ಲೇ ನಿಷೇಧದ ಬಗ್ಗೆ ಶೀಘ್ರ ನಿರ್ಧಾರ ಕೈಗೊಳ್ಳುವುದಾಗಿ ಹೇಳಿರುವುದು ಪ್ರತಿಯೊಬ್ಬರೂ ಮೆಚ್ಚುವಂತಹದ್ದು.

ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಆರೋಗ್ಯ ಸಚಿವರ ಕಳಕಳಿ ಶ್ಲಾಘನೀಯ

ಮಹಿಳೆಯರಿಗೆ ಮೆನೋಪಾಸ್ (ಪ್ರೀ ಮೆನೋಪಾಸ್ ಹಾಗೂ ಪೋಸ್ಟ್ ಮೊನೋಪಾಸ್) ಸಮಸ್ಯೆ ಕುರಿತು ಸೂಕ್ತ ಮಾಹಿತಿ ಬೇಕು ಎಂದು ನಟಿ ರಮ್ಯಾ…

5 hours ago

ಓದುಗರ ಪತ್ರ: ರಾಜಕೀಯ ಗದ್ದಲದ ಮುಂದೆ ಜನರ ಸಮಸ್ಯೆ ಗೌಣವಾಗಬಾರದು

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಮ್ಮ ಸಚಿವ ಸಂಪುಟವನ್ನು ವಿಸ್ತರಿಸಿದ್ದಾರೆ. ಸಿದ್ದರಾಮಯ್ಯ ಅವರ ಸರ್ಕಾರದಲ್ಲಿದ್ದ ಹೆಚ್. ಸಿ ಮಹದೇವಪ್ಪ ಸೇರಿದಂತೆ ಅನೇಕರು ಸಚಿವ…

5 hours ago

ಓದುಗರ ಪತ್ರ: ಸಾಹಿತ್ಯ ಸಮಾರಂಭದಲ್ಲಿ ವಿಷಯಾಂತರ ಏಕೆ?

ಸಾಹಿತ್ಯ, ಸಂಗೀತ ಮತ್ತಿತರ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಅತಿಥಿಗಳು ಆದಷ್ಟು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯಗಳನ್ನು ಪ್ರಸ್ತಾಪಿಸಿದರೆ ಹೆಚ್ಚು ಸೂಕ್ತವಾಗುತ್ತದೆ. ಅದು…

5 hours ago

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

5 hours ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

5 hours ago