Andolana originals

ʼದೀಪಾವಳಿ ಸಂಭ್ರಮ ಪರಿಸರಕ್ಕೆ ಮಾರಕ ಆಗದಿರಲಿ’

• ಸಂದರ್ಶನ: ಬಾ.ನಾ.ಸುಬ್ರಹ್ಮಣ್ಯ
‘ಸಪ್ತ ಸಾಗರದಾಚೆ ಎಲ್ಲೋ’ ಚಿತ್ರದಲ್ಲಿ ತಮ್ಮ ಚೆಲುವು, ಮುಗ್ಧತೆ ಮತ್ತು ಅಭಿನಯದಿಂದ ಎಲ್ಲರಿಗೂ ಇಷ್ಟವಾದ ನಾಯಕನಟಿ ರುಕ್ಕಿಣಿ ವಸಂತ್, ಅಲ್ಪ ಕಾಲದಲ್ಲೇ ಪ್ರೇಕ್ಷಕರು ಮತ್ತು ವಿಮರ್ಶಕರ ಮೆಚ್ಚುಗೆಗೆ ಪಾತ್ರ ರಾಗಿದ್ದಾರೆ. ‘ಬರ’ ಮತ್ತು ಭೈರತಿ ರಣಗಲ್ ಚಿತ್ರಗಳಲ್ಲಿ ಕೂಡ ನಟಿಸಿದ್ದಾರೆ. ಈ ಸಂದರ್ಭದಲ್ಲಿ “ಆಂದೋಲನ’ದ ಜೊತೆಗೆ ಮಾತ್ರನಾಡಿರುವ ರುಕ್ಕಿಣಿ, ದೀಪಾವಳಿಯ ನೆನಪುಗಳು, ಈ ಬಾರಿಯ ದೀಪಾವಳಿ ಆಚರಣೆ ಕುರಿತಂತೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಆಂದೋಲನ: ದೀಪಾವಳಿ ಎಂದರೆ ನಿಮ್ಮ ಪಾಲಿಗೆ ಏನು?
ರುಕ್ಕಿಣಿ ವಸಂತ್‌: ಸಂಭ್ರಮ. ಎಲ್ಲರೂ ಒಟ್ಟಿಗೆ ಸೇರಲು ಸಿಗುವ ಅವಕಾಶ, ಖುಷಿ,

• ಆಂದೋಲನ: ದೀಪಾವಳಿ ಹಬ್ಬದ ನಿಮ್ಮ ಬಾಲ್ಯದ ನೆನಪು ಗಳೇನು? ಹೇಗೆ ಆಚರಿಸುತ್ತಿದ್ದಿರಿ?
ರುಕ್ಕಿಣಿ ವಸಂತ್‌: ನನಗೆ ದೀಪಾವಳಿ ಕುರಿತಂತೆ ಜಾಸ್ತಿ ನೆನಪುಗಳಿಲ್ಲ. ಆ ಅನುಭವದ ನೆನಪು ಮಾತ್ರ. ವಿದೇಶದಲ್ಲಿರುವ ನಮ್ಮ ಸಂಬಂಧಿಕರೆಲ್ಲ ನಮ್ಮ ಅಜ್ಜಿ ಮನೆಗೆ ಬರುತ್ತಿದ್ದರು. ಬೆಂಗಳೂರಿನಲ್ಲಿದ್ದಾಗ ನಾವು ಅಜ್ಜಿ ಮನೆಯಲ್ಲೇ ಇದ್ದೆವು. ಉಳಿದಂತೆ ಸೇನೆಯಲ್ಲಿದ್ದ ಅಪ್ಪನ ಜೊತೆಯಲ್ಲಿ ಬೇರೆ ಊರುಗಳಲ್ಲಿ ಇರುತ್ತಿದ್ದೆವು.

ಉತ್ತರ ಭಾರತದಲ್ಲಿ, ಬೇರೆ ಬೇರೆ ಕಡೆ… ದೀಪಾವಳಿ ವೇಳೆ ನಾವೆಲ್ಲ ಸೇರಿಕೊಂಡು ಅಜ್ಜಿ ಮನೆಗೆ ಹೋಗ್ತಾ ಇದ್ವಿ. ಅಲ್ಲಿ ಹಬ್ಬದೂಟ, ಹೊಸಬಟ್ಟೆ… ಕೆಲವೊಬ್ರು ಪಟಾಕಿ ಹೊಡೀತಾ ಇದ್ರು… ನನಗೆ ಆ ಶಬ್ದಇಷ್ಟ ಆಗ್ತಿರಲಿಲ್ಲ… ನಾನು ಬರೀ ಸ್ಟಾರ್ಕ್ಟರ್ ಹಿಡ್ಕೊಂಡು ಓಡಾಡುತ್ತಿದ್ದೆ ಎಲ್ಲಾ ಕಡೆ, ನನಗೆ ಹೊಸ ಬಟ್ಟೆ, ಹಬ್ಬದೂಟ, ಎಲ್ಲ ಕಡೆ ದೀಪ ಹಚ್ಚೇದು ಆ ತರಹದ ನೆನಪುಗಳಿರೋದು.

ಕುಟುಂಬದ ಎಲ್ಲರೂ ಒಟ್ಟಿಗೆ ಸೇರುವ ಖುಷಿ ಮಾತ್ರ ಮರೆಯಲಾಗದ್ದು. ಕುಟುಂಬದ ಎಲ್ಲರೂ ಒಟ್ಟಿಗೆ ಸೇರುವ ಖುಷಿ ಮಾತ್ರ ಮರೆಯಲಾಗದ್ದು. ನಾವೆಲ್ಲ ಅಜ್ಜಿ ಮನೆಯಲ್ಲಿ ಸೇರ್ಕೊಂಡು, ಇಲ್ಲಿದ್ದರೆ ಆಂಟಿ, ಅಂಕಲ್ ಮನೇಲಿ ಸೇರ್ಕೊಂಡು ಒಟ್ಟಿಗೆ ಆಚರಿಸುತ್ತಿದ್ಬಿ. ಬಹಳ ದಿನಗಳ ನಂತರ ವರ್ಷದಲ್ಲೊಮ್ಮೆ ಕುಟುಂಬದವರೆಲ್ಲರ ಜೊತೆಗೆ ಸೇರುವ ಅವಕಾಶ; ಕಸಿನ್ಸ್ ಎಲ್ಲ ಒಟ್ಟಿಗೆ ಸೇರ್ಕೊಂಡು, ಓಡಾಡಿಕೊಂಡು ಹಬ್ಬ ಆಚರಿಸಿದ ಖುಷಿಯ ಅನುಭವ.

ಆಂದೋಲನ: ಈ ಬಾರಿ ದೀಪಾವಳಿ ಹೇಗೆ ಆಚರಿಸುತ್ತೀರಿ?
ರುಕ್ಕಿಣಿ ವಸಂತ್: ಈ ದೀಪಾವಳಿ ಸ್ವಲ್ಪ ಬೇರೆ ಥರ ಇರುತ್ತೆ. ಯಾಕೆಂದ್ರೆ ಬಘೀರ ಹಾಗೂ ಭೈರತಿ ರಣಗಲ್ ಈ ಎರಡು ಚಿತ್ರಗಳು ರಿಲೀಸ್ ಆಗ್ತಿವೆ. ಹಾಗಾಗಿ ಹಿಂದಿನಂತೆ ಆಚರಿಸಲಿಕ್ಕೆ ಸಮಯಸಿಗುತ್ತಿಲ್ಲ. ನಮ್ಮ ಕುಟುಂಬದವರು ಈಗಾಗಲೇ ಇಂಡಿಯಾಕ್ಕೆ ಬಂದಿದ್ದಾರೆ. ಅವರ ಜೊತೆ ಕಾಲಕಳೆಯೋಕೆ ತುಂಬಾ ಆಸೆ. ಆದರೆ ಆಗುತ್ತಿಲ್ಲ. ಚಿತ್ರಗಳ ಪ್ರೊಮೋಶನ್‌ ಗಾಗಿ ಎಲ್ಲ ಕಡೆ ಓಡಾಡ್ತಾ ಇದ್ದೀನಿ; ಹಾಗೂ ಕೆಲವೊಂದು ಚಿತ್ರಗಳ ಚಿತ್ರೀಕರಣ ಬೇರೆ ನಡೆಯುತ್ತಿದೆ ಮಧ್ಯದಲ್ಲಿ ಹಾಗಾಗಿ ಈ ಸಲ ಪ್ರೊಫೆಶನಲ್ ದೀಪಾವಳಿ ಆಗಿಹೋಗಿದೆ. ತುಂಬಾ ಖುಷಿಯ ವಿಷಯ. ಯಾಕೆಂದರೆ ಅದು ಒಂದು ಬೇರೆಯೇ ರೀತಿಯ ಅನುಭವ.

ಆಂದೋಲನ: ದೀಪಾವಳಿಯ ಸಂದರ್ಭದಲ್ಲಿ ನಿಮ್ಮ ಆಶಯಗಳೇನು?
ರುಕ್ಷಿಣಿ ವಸಂತ್: ನಾನು ಈ ದೀಪಾವಳಿಗೆ ಬರೀ ಸಿನಿಮಾ ಬಗ್ಗೆ ಯೋಚನೆ ಮಾಡ್ತಾ ಇದ್ದೀನಿ. ನನಗೆ ವೃತ್ತಿಪರ ನಿರೀಕ್ಷೆ ಮತ್ತು ಕನಸುಗಳಿವೆ. ಬಘೀರ ಮತ್ತು ಭೈರತಿ ರಣಗಲ್ ಚೆನ್ನಾಗಿ ಓಡಬೇಕು, ಜನರಿಗೆ ಇಷ್ಟ ಆಗಬೇಕು; ನನ್ನ ಪಾತ್ರಗಳು, ನಾನು ಪಾತ್ರಗಳನ್ನು ನಿಭಾಯಿಸಿದ ರೀತಿ ಎಲ್ಲರಿಗೂ ಇಷ್ಟ ಆಗಬೇಕು ಅಂತ ಆಶಿಸುತ್ತೀನಿ.

ಆಂದೋಲನ: ನಮ್ಮ ಓದುಗರಿಗೆ, ಕನ್ನಡಿಗರಿಗೆ, ಈ ಸಂದರ್ಭದಲ್ಲಿ ಏನು ಹೇಳಲು ಬಯಸುತ್ತೀರಿ?
ರುಕ್ಕಿಣಿ ವಸಂತ್: ನಿಮಗೆಲ್ಲರಿಗೂ ದೀಪಾವಳಿ ಹಬ್ಬದ ಶುಭಾಶಯಗಳು. ಎಲ್ಲರೂ ಈ ಹಬ್ಬಾನ ನಿಮ್ಮ ಕುಟುಂಬದ ಜೊತೆಗೆ, ಸ್ನೇಹಿತರ ಜೊತೆಗೆ ಆಚರಿಸಿ, ಸಂಭ್ರಮಿಸಿ ಪಟಾಕಿ ಹೊಡೆಯುವುದಾದರೆ ಹುಷಾರಾಗಿ ಹೊಡೆಯಿರಿ. ಹೆಚ್ಚು ಪರಿಸರ ಮಾಲಿನ್ಯ ಆಗಲು ಅವಕಾಶ ಕೊಡಬೇಡಿ ಅಂತ ಕೇಳಿಕೊಳ್ಳುತ್ತೇನೆ.

ಆಂದೋಲನ ಡೆಸ್ಕ್

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

12 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

12 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

13 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

15 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

18 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

18 hours ago