Andolana originals

ಉತ್ತಮ ಶಿಕ್ಷಕರನ್ನು ಇಲಾಖೆಯೇ ಗುರುತಿಸಲಿ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರತಿ ವರ್ಷ ಸರ್ಕಾರದ ವತಿಯಿಂದ ಉತ್ತಮ ಶಿಕ್ಷಕರನ್ನು ಗುರುತಿಸಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿ ಪಡೆಯಲು ಸ್ವತಃ ಶಿಕ್ಷಕರೇ ತಮ್ಮ ಸ್ವವಿವರಗಳ ಜತೆ ಕರ್ತವ್ಯದ ಅವಧಿ, ಸಾಧನೆಗಳ ಮಾಹಿತಿಗಳನ್ನು ಲಗತ್ತಿಸಿ ಆನ್‌ಲೈನ್ ಮೂಲಕ ಪ್ರಶಸ್ತಿ ನೀಡುವ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು. ಇತ್ತೀಚೆಗೆ ಎಲ್ಲರಿಗೂ ಪ್ರಶಸ್ತಿ ಪಡೆಯುವುದು ಎಂದರೆ ಒಂದು ಪ್ರತಿಷ್ಠೆಯ ಸಂಕೇತ ಎಂಬಂತಾಗಿದೆ. ಇದರಿಂದಾಗಿ ಪ್ರಶಸ್ತಿ ಪಡೆಯಲು ಕೆಲ ಶಿಕ್ಷಕರು ಬೇರೆ ಬೇರೆ ಮಾರ್ಗಗಳನ್ನು ಅನುಸರಿಸುತ್ತಿದ್ದು, ಅನರ್ಹರೂ ಪ್ರಶಸ್ತಿ ಪಡೆದುಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದ ಸಾಕಷ್ಟು ಶಾಲೆಗಳಲ್ಲಿ ಸೌಲಭ್ಯಗಳ ಕೊರತೆ ಇದ್ದರೂ ಮಕ್ಕಳನ್ನು ಶಾಲೆಗೆ ಕರೆತರುವ ಪ್ರಯತ್ನದಿಂದ ಹಿಡಿದು ಅವರಿಗೆ ವಿದ್ಯಾಭ್ಯಾಸ ನೀಡಿ, ಅವರಲ್ಲಿನ ಇತರೆ ಕಲೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡಿ ಸಾಧನೆಯ ಹಾದಿ ತೋರುವ ಶಿಕ್ಷಕರೂ ಇದ್ದಾರೆ. ಇವರು ನಿಜವಾಗಿಯೂ ಪ್ರಶಸ್ತಿಗಳಿಗೆ ಅರ್ಹರಾಗಿದ್ದರೂ ಅದರ ಗೋಜಿಗೇ ಹೋಗದೆ ಎಲೆಮರೆಯ ಕಾಯಿಯಂತೆ ಉಳಿದುಬಿಡುತ್ತಾರೆ. ಆದ್ದರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸುವ ಬದಲು ಇಂತಹ ಶಿಕ್ಷಕರನ್ನು ಸ್ವತಃ ಶಿಕ್ಷಣ ಇಲಾಖೆಯೇ ಗುರುತಿಸಿ ಪ್ರಶಸ್ತಿ ನೀಡುವ ಪ್ರಯತ್ನ ಮಾಡಬೇಕಿದೆ. ಆಗ ಪ್ರಶಸ್ತಿಯ ಮೌಲ್ಯವೂ ಹೆಚ್ಚಲಿದೆ.
-ದೇವರಹಳ್ಳಿ ಲೋಕೇಶ್, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ಮೈಸೂರು ಕೇಂದ್ರೀಯ ಸಂಪರ್ಕ ಬ್ಯೂರೋ-CBC ಕಚೇರಿ ಸ್ಥಗಿತ ಬೇಡ : ಕೇಂದ್ರ ವಾರ್ತಾ ಸಚಿವ ಅಶ್ವಿನಿ ವೈಷ್ಣವ್‌ಗೆ ಪತ್ರ ಬರೆದ ಸಚಿವ ಎಚ್‌ಡಿಕೆ

ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…

8 hours ago

ಉನ್ನಾವೋ ಅತ್ಯಾಚಾರ ಪ್ರಕರಣ : ರಾಹುಲ್‌ಗಾಂಧಿ ಭೇಟಿಯಾದ ಸಂತ್ರಸ್ತೆ ಕುಟುಂಬ

ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…

8 hours ago

ಉನ್ನಾವೊ ಪ್ರಕರಣ : ಸೆಂಗರ್‌ ಶಿಕ್ಷೆ ಅಮಾನತು ; ಸಂತ್ರಸ್ತೆ ತಾಯಿ ಹೇಳಿದಿಷ್ಟು?

ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…

9 hours ago

ಚಂದನವನದಲ್ಲಿ ಸ್ಟಾರ್‌ ವಾರ್‌ : ನಟಿ ರಕ್ಷಿತಾ ಪ್ರೇಮ್‌ ಹೇಳಿದಿಷ್ಟು?

ಬೆಂಗಳೂರು : ಮಾರ್ಕ್‌ʼ ಸಿನಿಮಾದ ಪ್ರೀ-ರಿಲೀಸ್‌ ಈವೆಂಟ್‌ನಲ್ಲಿ ಕಿಚ್ಚ ಸುದೀಪ್‌ ಹೇಳಿದ ಮಾತೊಂದು ಸೋಶಿಯಲ್‌ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…

9 hours ago

ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್

ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…

9 hours ago

ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜಿನಲ್ಲಿ ನೇಮಕಾತಿ ; ಆಸಕ್ತರು ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…

9 hours ago