Andolana originals

ಉತ್ತಮ ಶಿಕ್ಷಕರನ್ನು ಇಲಾಖೆಯೇ ಗುರುತಿಸಲಿ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರತಿ ವರ್ಷ ಸರ್ಕಾರದ ವತಿಯಿಂದ ಉತ್ತಮ ಶಿಕ್ಷಕರನ್ನು ಗುರುತಿಸಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿ ಪಡೆಯಲು ಸ್ವತಃ ಶಿಕ್ಷಕರೇ ತಮ್ಮ ಸ್ವವಿವರಗಳ ಜತೆ ಕರ್ತವ್ಯದ ಅವಧಿ, ಸಾಧನೆಗಳ ಮಾಹಿತಿಗಳನ್ನು ಲಗತ್ತಿಸಿ ಆನ್‌ಲೈನ್ ಮೂಲಕ ಪ್ರಶಸ್ತಿ ನೀಡುವ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು. ಇತ್ತೀಚೆಗೆ ಎಲ್ಲರಿಗೂ ಪ್ರಶಸ್ತಿ ಪಡೆಯುವುದು ಎಂದರೆ ಒಂದು ಪ್ರತಿಷ್ಠೆಯ ಸಂಕೇತ ಎಂಬಂತಾಗಿದೆ. ಇದರಿಂದಾಗಿ ಪ್ರಶಸ್ತಿ ಪಡೆಯಲು ಕೆಲ ಶಿಕ್ಷಕರು ಬೇರೆ ಬೇರೆ ಮಾರ್ಗಗಳನ್ನು ಅನುಸರಿಸುತ್ತಿದ್ದು, ಅನರ್ಹರೂ ಪ್ರಶಸ್ತಿ ಪಡೆದುಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದ ಸಾಕಷ್ಟು ಶಾಲೆಗಳಲ್ಲಿ ಸೌಲಭ್ಯಗಳ ಕೊರತೆ ಇದ್ದರೂ ಮಕ್ಕಳನ್ನು ಶಾಲೆಗೆ ಕರೆತರುವ ಪ್ರಯತ್ನದಿಂದ ಹಿಡಿದು ಅವರಿಗೆ ವಿದ್ಯಾಭ್ಯಾಸ ನೀಡಿ, ಅವರಲ್ಲಿನ ಇತರೆ ಕಲೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡಿ ಸಾಧನೆಯ ಹಾದಿ ತೋರುವ ಶಿಕ್ಷಕರೂ ಇದ್ದಾರೆ. ಇವರು ನಿಜವಾಗಿಯೂ ಪ್ರಶಸ್ತಿಗಳಿಗೆ ಅರ್ಹರಾಗಿದ್ದರೂ ಅದರ ಗೋಜಿಗೇ ಹೋಗದೆ ಎಲೆಮರೆಯ ಕಾಯಿಯಂತೆ ಉಳಿದುಬಿಡುತ್ತಾರೆ. ಆದ್ದರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸುವ ಬದಲು ಇಂತಹ ಶಿಕ್ಷಕರನ್ನು ಸ್ವತಃ ಶಿಕ್ಷಣ ಇಲಾಖೆಯೇ ಗುರುತಿಸಿ ಪ್ರಶಸ್ತಿ ನೀಡುವ ಪ್ರಯತ್ನ ಮಾಡಬೇಕಿದೆ. ಆಗ ಪ್ರಶಸ್ತಿಯ ಮೌಲ್ಯವೂ ಹೆಚ್ಚಲಿದೆ.
-ದೇವರಹಳ್ಳಿ ಲೋಕೇಶ್, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ಮುಸ್ಲಿಂ ಸಮುದಾಯದ ಜಹಾನ ಈಗ ವೈದ್ಯೆ!

ಕೋಟೆ ತಾಲ್ಲೂಕಿನ ಮುಸ್ಲಿಂ ಸಮುದಾಯದ ಪ್ರಥಮ ವೈದ್ಯೆ ಎಂಬ ಹೆಗ್ಗಳಿಕೆ ಹೊಂದಿದ ಜಹಾನ   ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ…

7 hours ago

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

11 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

11 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

11 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

12 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

12 hours ago