Andolana originals

ಉತ್ತಮ ಶಿಕ್ಷಕರನ್ನು ಇಲಾಖೆಯೇ ಗುರುತಿಸಲಿ

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಪ್ರತಿ ವರ್ಷ ಸರ್ಕಾರದ ವತಿಯಿಂದ ಉತ್ತಮ ಶಿಕ್ಷಕರನ್ನು ಗುರುತಿಸಿ ಜಿಲ್ಲಾ ಹಾಗೂ ರಾಜ್ಯಮಟ್ಟದ ಉತ್ತಮ ಶಿಕ್ಷಕ’ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಈ ಪ್ರಶಸ್ತಿ ಪಡೆಯಲು ಸ್ವತಃ ಶಿಕ್ಷಕರೇ ತಮ್ಮ ಸ್ವವಿವರಗಳ ಜತೆ ಕರ್ತವ್ಯದ ಅವಧಿ, ಸಾಧನೆಗಳ ಮಾಹಿತಿಗಳನ್ನು ಲಗತ್ತಿಸಿ ಆನ್‌ಲೈನ್ ಮೂಲಕ ಪ್ರಶಸ್ತಿ ನೀಡುವ ಪ್ರಾಧಿಕಾರಕ್ಕೆ ಅರ್ಜಿ ಸಲ್ಲಿಸಬೇಕು. ಇತ್ತೀಚೆಗೆ ಎಲ್ಲರಿಗೂ ಪ್ರಶಸ್ತಿ ಪಡೆಯುವುದು ಎಂದರೆ ಒಂದು ಪ್ರತಿಷ್ಠೆಯ ಸಂಕೇತ ಎಂಬಂತಾಗಿದೆ. ಇದರಿಂದಾಗಿ ಪ್ರಶಸ್ತಿ ಪಡೆಯಲು ಕೆಲ ಶಿಕ್ಷಕರು ಬೇರೆ ಬೇರೆ ಮಾರ್ಗಗಳನ್ನು ಅನುಸರಿಸುತ್ತಿದ್ದು, ಅನರ್ಹರೂ ಪ್ರಶಸ್ತಿ ಪಡೆದುಕೊಳ್ಳುತ್ತಿದ್ದಾರೆ. ಗ್ರಾಮೀಣ ಭಾಗದ ಸಾಕಷ್ಟು ಶಾಲೆಗಳಲ್ಲಿ ಸೌಲಭ್ಯಗಳ ಕೊರತೆ ಇದ್ದರೂ ಮಕ್ಕಳನ್ನು ಶಾಲೆಗೆ ಕರೆತರುವ ಪ್ರಯತ್ನದಿಂದ ಹಿಡಿದು ಅವರಿಗೆ ವಿದ್ಯಾಭ್ಯಾಸ ನೀಡಿ, ಅವರಲ್ಲಿನ ಇತರೆ ಕಲೆಗಳನ್ನು ಗುರುತಿಸಿ ಪ್ರೋತ್ಸಾಹ ನೀಡಿ ಸಾಧನೆಯ ಹಾದಿ ತೋರುವ ಶಿಕ್ಷಕರೂ ಇದ್ದಾರೆ. ಇವರು ನಿಜವಾಗಿಯೂ ಪ್ರಶಸ್ತಿಗಳಿಗೆ ಅರ್ಹರಾಗಿದ್ದರೂ ಅದರ ಗೋಜಿಗೇ ಹೋಗದೆ ಎಲೆಮರೆಯ ಕಾಯಿಯಂತೆ ಉಳಿದುಬಿಡುತ್ತಾರೆ. ಆದ್ದರಿಂದ ಪ್ರಶಸ್ತಿಗಾಗಿ ಅರ್ಜಿ ಆಹ್ವಾನಿಸುವ ಬದಲು ಇಂತಹ ಶಿಕ್ಷಕರನ್ನು ಸ್ವತಃ ಶಿಕ್ಷಣ ಇಲಾಖೆಯೇ ಗುರುತಿಸಿ ಪ್ರಶಸ್ತಿ ನೀಡುವ ಪ್ರಯತ್ನ ಮಾಡಬೇಕಿದೆ. ಆಗ ಪ್ರಶಸ್ತಿಯ ಮೌಲ್ಯವೂ ಹೆಚ್ಚಲಿದೆ.
-ದೇವರಹಳ್ಳಿ ಲೋಕೇಶ್, ಪಾಂಡವಪುರ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

2 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

2 hours ago

ಓದುಗರ ಪತ್ರ: ಶಾಲಾ ಶಿಕ್ಷಣದಲ್ಲಿ ಕೃಷಿ ಬಗ್ಗೆ ಪಠ್ಯ ಅಳವಡಿಸಿ

ಮನುಷ್ಯನಿಗೆ ಅತ್ಯಗತ್ಯವಾಗಿರುವುದು ಆಹಾರ. ಇದಕ್ಕೆ ಕೃಷಿಯೇ ಮೂಲ. ರೈತನ ಪರಿಶ್ರಮದಿಂದ ಜನರು ನೆಮ್ಮದಿಯಿಂದ ಊಟ ಮಾಡಲು ಸಾಧ್ಯವಾಗಿದೆ. ಆಧುನಿಕ ಆವಿಷ್ಕಾರಗಳಿಂದ…

2 hours ago

ಸೌಹಾರ್ದ ಸಮಾಜಕ್ಕಾಗಿ ಮಕ್ಕಳಲ್ಲಿ ಭಾವೈಕ್ಯತೆ ಬಿತ್ತನೆ ಅತ್ಯಗತ್ಯ

ಟಿ.ಕೆ.ಹರೀಶ್ ತಂತ್ರಜ್ಞಾನ ಬಳಕೆ ಅತಿಯಾದರೆ ಮಕ್ಕಳಲ್ಲಿ ಸಹಾನುಭೂತಿ ಕ್ಷೀಣ  ಮಾನವೀಯತೆಯ ಮೂಲ ಮಂತ್ರವೇ ಸೌಹಾರ್ದತೆ. ಇದು ಕೇವಲ ಸಹಬಾಳ್ವೆಯಲ್ಲ, ಬದಲಿಗೆ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಸೋಲಿನಿಂದ ಸೊರಗಿದ ದೀದಿಯನ್ನು ಕೈಬಿಟ್ಟ ಆಪ್ತರು

ರಾಜಕಾರಣವೀಗ ಅಧಿಕಾರದಾಹಿಗಳ ಅಡ್ಡ ಆಗಿಹೋಗಿದೆ. ಅಧಿಕಾರವಿಲ್ಲದೆ ಯಾರಿಗೂ ಯಾವ ಸೈದ್ಧಾಂತಿಕ ರಾಜಕಾರಣವೂ ಬೇಡವಾಗಿದೆ. ಕಾಲ ಸರಿಯುತ್ತಿದ್ದಂತೆ ನಿತ್ಯದ ರಾಜಕಾರಣದ ಬದಲಾವಣೆಯೂ…

2 hours ago

ಇತಿಹಾಸದ ಪುಟಗಳಲ್ಲಿ ಜಿರಳೆಗಳು

ರೇಣುಕಾ ನಿಡುಗುಂದಿ ಯಾವುದೇ ಒಬ್ಬ ಸರ್ವಾಧಿಕಾರಿ ಅಥವಾ ಭ್ರಷ್ಟ ರಾಜಕಾರಣಿ ಜನರಲ್ಲಿ ತನ್ನ ಬಗ್ಗೆ ಭಯ ಹುಟ್ಟಿಸಿ ಆಡಳಿತ ನಡೆಸುತ್ತಾನೆ.…

2 hours ago