ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ನೀಲಿ ನಕ್ಷೆಯನ್ನು ಸಿದ್ದಪಡಿಸಿಕೊಂಡು ತೆರವು ಮುಂದಾಗಿದ್ದಾರೆ. ಕಾರ್ಯಾಚರಣೆಗೆ
ಆದರೆ, ಅರಣ್ಯ ಇಲಾಖೆಯ ಈ ತೆರವು ಕಾರ್ಯಾಚರಣೆಯಲ್ಲಿ ಕೇವಲ ಸಣ್ಣ ಸಣ್ಣ ರೈತರ ಭೂಮಿಗಳೇ ಗುರಿಯಾಗಿವೆಯೇ ಹೊರತು ನೂರಾರು ಎಕರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮಕೈಗೊಳ್ಳಲು ಅರಣ್ಯ ಇಲಾಖೆಯ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ.
ಈ ತೆರವು ಕಾರ್ಯಾಚರಣೆಯಿಂದಾಗಿ ಕಾಡಂಚಿನಲ್ಲಿ 2-3 ಎಕರೆ ಭೂಮಿಯಲ್ಲಿ ಕೃಷಿ ಮಾಡುವ, ಮನೆಕಟ್ಟಿಕೊಂಡು ವಾಸಿಸುವ ಬಡಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ದಶಕಗಳಿಂದ ಅಲ್ಪಸ್ವಲ್ಪ ಭೂಮಿಯಲ್ಲಿಯೇ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿರುವವರ ಭೂಮಿಯನ್ನೂ ಸರ್ಕಾರ ಕಿತ್ತುಕೊಂಡರೆ ಅವರು ಜೀವನ ಸಾಗಿಸುವುದಾದರೂ ಹೇಗೆ? ಅಲ್ಲದೆ ಅರಣ್ಯ ಇಲಾಖೆಯ ಅಧಿಕಾರಿಗಳು ತೆರವು ಕಾರ್ಯಾಚರಣೆಯ ಹೆಸರಿನಲ್ಲಿ ತೋಟಗಳಲ್ಲಿ ಬೆಳೆದಿರುವ ಗಿಡಮರಗಳನ್ನೂ ಬುಡಸಮೇತ ಕಡಿದುಹಾಕುತ್ತಿದ್ದಾರೆ.
ಇದರಿಂದಾಗಿ ಅನೇಕ ಬಡಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಕಾಡನ್ನು ರಕ್ಷಿಸುವುದು ಎಷ್ಟು ಮುಖ್ಯವೋ, ಅದರ ನೆರಳಲ್ಲಿಯೇ ಜೀವನ ಕಟ್ಟಿಕೊಂಡಿರುವ ಜನರ ರಕ್ಷಣೆಯೂ ಅಷ್ಟೇ ಮುಖ್ಯ. ನೂರಾರು ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವವರನ್ನು ಬಿಟ್ಟು ಬಡ ರೈತರನ್ನು ಗುರಿಯಾಗಿಸಿಕೊಂಡು ತೆರವು ಕಾರ್ಯಾಚರಣೆ ಮಾಡುವುದು ಎಷ್ಟು ಸರಿ? ಸರ್ಕಾರ ಈ ಬಗ್ಗೆ ಗಮನಹರಿಸಿ ಬಡ ರೈತರ ಜೀವನದ ರಕ್ಷಣೆಯ ಜವಾಬ್ದಾರಿ ಹೊರಲಿ.
-ಎನ್.ಆರ್.ಚೇತನ, ಮೈಸೂರು.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…