Andolana originals

ಬಡ ರೈತರ ಜೀವನ ರಕ್ಷಣೆಯ ಜವಾಬ್ದಾರಿಯನ್ನೂ ಸರ್ಕಾರವೇ ಹೊರಲಿ

ಒತ್ತುವರಿಯಾಗಿರುವ ಅರಣ್ಯ ಭೂಮಿಯನ್ನು ತೆರವುಗೊಳಿಸುವಂತೆ ಅರಣ್ಯ ಸಚಿವ ಈಶ್ವರ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ ಬೆನ್ನಲ್ಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಪ್ರವೃತ್ತರಾಗಿದ್ದು, ನೀಲಿ ನಕ್ಷೆಯನ್ನು ಸಿದ್ದಪಡಿಸಿಕೊಂಡು ತೆರವು ಮುಂದಾಗಿದ್ದಾರೆ. ಕಾರ್ಯಾಚರಣೆಗೆ

ಆದರೆ, ಅರಣ್ಯ ಇಲಾಖೆಯ ಈ ತೆರವು ಕಾರ್ಯಾಚರಣೆಯಲ್ಲಿ ಕೇವಲ ಸಣ್ಣ ಸಣ್ಣ ರೈತರ ಭೂಮಿಗಳೇ ಗುರಿಯಾಗಿವೆಯೇ ಹೊರತು ನೂರಾರು ಎಕರೆ ಒತ್ತುವರಿ ಮಾಡಿಕೊಂಡಿರುವವರ ವಿರುದ್ಧ ಕ್ರಮಕೈಗೊಳ್ಳಲು ಅರಣ್ಯ ಇಲಾಖೆಯ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ.

ಈ ತೆರವು ಕಾರ್ಯಾಚರಣೆಯಿಂದಾಗಿ ಕಾಡಂಚಿನಲ್ಲಿ 2-3 ಎಕರೆ ಭೂಮಿಯಲ್ಲಿ ಕೃಷಿ ಮಾಡುವ, ಮನೆಕಟ್ಟಿಕೊಂಡು ವಾಸಿಸುವ ಬಡಕುಟುಂಬಗಳು ಸಂಕಷ್ಟಕ್ಕೆ ಸಿಲುಕಿವೆ. ದಶಕಗಳಿಂದ ಅಲ್ಪಸ್ವಲ್ಪ ಭೂಮಿಯಲ್ಲಿಯೇ ಕೃಷಿ ಮಾಡಿಕೊಂಡು ಜೀವನ ಸಾಗಿಸುತ್ತಿರುವವರ ಭೂಮಿಯನ್ನೂ ಸರ್ಕಾರ ಕಿತ್ತುಕೊಂಡರೆ ಅವರು ಜೀವನ ಸಾಗಿಸುವುದಾದರೂ ಹೇಗೆ? ಅಲ್ಲದೆ ಅರಣ್ಯ ಇಲಾಖೆಯ ಅಧಿಕಾರಿಗಳು ತೆರವು ಕಾರ್ಯಾಚರಣೆಯ ಹೆಸರಿನಲ್ಲಿ ತೋಟಗಳಲ್ಲಿ ಬೆಳೆದಿರುವ ಗಿಡಮರಗಳನ್ನೂ ಬುಡಸಮೇತ ಕಡಿದುಹಾಕುತ್ತಿದ್ದಾರೆ.

ಇದರಿಂದಾಗಿ ಅನೇಕ ಬಡಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಕಾಡನ್ನು ರಕ್ಷಿಸುವುದು ಎಷ್ಟು ಮುಖ್ಯವೋ, ಅದರ ನೆರಳಲ್ಲಿಯೇ ಜೀವನ ಕಟ್ಟಿಕೊಂಡಿರುವ ಜನರ ರಕ್ಷಣೆಯೂ ಅಷ್ಟೇ ಮುಖ್ಯ. ನೂರಾರು ಎಕರೆ ಭೂಮಿಯನ್ನು ಒತ್ತುವರಿ ಮಾಡಿಕೊಂಡಿರುವವರನ್ನು ಬಿಟ್ಟು ಬಡ ರೈತರನ್ನು ಗುರಿಯಾಗಿಸಿಕೊಂಡು ತೆರವು ಕಾರ್ಯಾಚರಣೆ ಮಾಡುವುದು ಎಷ್ಟು ಸರಿ? ಸರ್ಕಾರ ಈ ಬಗ್ಗೆ ಗಮನಹರಿಸಿ ಬಡ ರೈತರ ಜೀವನದ ರಕ್ಷಣೆಯ ಜವಾಬ್ದಾರಿ ಹೊರಲಿ.

-ಎನ್.ಆರ್.ಚೇತನ, ಮೈಸೂರು.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

3 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

10 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

10 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

10 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

10 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

10 hours ago