ಮೈಸೂರಿನ ರೈಲು ನಿಲ್ದಾಣದ ಬಳಿ ಇರುವ ಪ್ರೀ-ಪೇಯ್ಡ್ ಆಟೋ ಬುಕಿಂಗ್ ಕೇಂದ್ರವು ಸ್ಥಗಿತಗೊಂಡು ಸಾಕಷ್ಟು ತಿಂಗಳುಗಳೇ ಕಳೆದಿದ್ದು, ರೈಲು ನಿಲ್ದಾಣದಿಂದ ವಿವಿಧ ಭಾಗಗಳಿಗೆ ತೆರಳುವವರು ಅಧಿಕ ಹಣ ನೀಡಿ ಆಟೋ ಸೌಲಭ್ಯ ಪಡೆದುಕೊಳ್ಳಬೇಕಿದೆ.
ಕಳೆದ ಬಾರಿ ನಾನು ಪ್ರೀಪೇಯ್ಡ್ ಆಟೋ ಬುಕ್ ಮಾಡಿಕೊಂಡು ರೈಲು ನಿಲ್ದಾಣದಿಂದ ಶ್ರೀರಾಂಪುರಕ್ಕೆ ಕೇವಲ 110 ರೂ ಪಾವತಿಸಿ ಹೋಗಿದ್ದೆ. ಆದರೆ ಈಗ ಇಲ್ಲಿ ಪ್ರೀಪೇಯ್ಡ್ ಸೇವೆ ಸ್ಥಗಿತಗೊಂಡಿದ್ದು, ಇದರಿಂದಾಗಿ ಆಟೋಗಳಿಗೆ 250-300 ರೂ. ಪಾವತಿಸುವಂತಾಗಿದೆ.
ದಸರಾ ಪ್ರಯುಕ್ತ ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಮೈಸೂರಿನ ವಿವಿಧ ಭಾಗಗಳಿಗೆ ತೆರಳಲು ಆಟೋ ಸೌಲಭ್ಯ ಪಡೆದುಕೊಳ್ಳುತ್ತಾರೆ. ಆದರೆ ರೈಲು ನಿಲ್ದಾಣದ ಬಳಿ ಇರುವ -ಪ್ರೀಪೇಯ್ಡ್ ಆಟೋ ಬುಕಿಂಗ್ ಸೆಂಟರ್ ಸ್ಥಗಿತಗೊಂಡಿರುವ ಪರಿಣಾಮ ಪ್ರವಾಸಿಗರು ಆಟೋಗಳಿಗೆ ದುಪ್ಪಟ್ಟು ಹಣ ನೀಡಬೇಕಾಗಿದೆ. ಅದ್ದರಿಂದ ಸಂಬಂಧಪಟ್ಟವರು ಕೂಡಲೇ ಇಲ್ಲಿನ ಪ್ರೀ-ಪೇಯ್ಡ್ ಆಟೋ ಬುಕಿಂಗ್ ಕೇಂದ್ರವನ್ನು ಪುನರಾಂಭಿಸಲು ಕ್ರಮ ಕೈಗೊಳ್ಳಬೇಕು.
-ಎಂ.ಎಸ್.ಉಷಾ ಪ್ರಕಾಶ್, ಎಸ್ಬಿಎಂ ಕಾಲೋನಿ, ಮೈಸೂರು
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…
ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…
ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…
ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…