Andolana originals

ಓದುಗರ ಪತ್ರ: ಪ್ರೀ-ಪೇಯ್ಡ್ ಆಟೋ ಬುಕಿಂಗ್ ಕೇಂದ್ರ ಕಾರ್ಯನಿರ್ವಹಿಸಲಿ

ಮೈಸೂರಿನ ರೈಲು ನಿಲ್ದಾಣದ ಬಳಿ ಇರುವ ಪ್ರೀ-ಪೇಯ್ಡ್ ಆಟೋ ಬುಕಿಂಗ್ ಕೇಂದ್ರವು ಸ್ಥಗಿತಗೊಂಡು ಸಾಕಷ್ಟು ತಿಂಗಳುಗಳೇ ಕಳೆದಿದ್ದು, ರೈಲು ನಿಲ್ದಾಣದಿಂದ ವಿವಿಧ ಭಾಗಗಳಿಗೆ ತೆರಳುವವರು ಅಧಿಕ ಹಣ ನೀಡಿ ಆಟೋ ಸೌಲಭ್ಯ ಪಡೆದುಕೊಳ್ಳಬೇಕಿದೆ.
ಕಳೆದ ಬಾರಿ ನಾನು ಪ್ರೀಪೇಯ್ಡ್ ಆಟೋ ಬುಕ್‌ ಮಾಡಿಕೊಂಡು ರೈಲು ನಿಲ್ದಾಣದಿಂದ ಶ್ರೀರಾಂಪುರಕ್ಕೆ ಕೇವಲ 110 ರೂ ಪಾವತಿಸಿ ಹೋಗಿದ್ದೆ. ಆದರೆ ಈಗ ಇಲ್ಲಿ ಪ್ರೀಪೇಯ್ಡ್ ಸೇವೆ ಸ್ಥಗಿತಗೊಂಡಿದ್ದು, ಇದರಿಂದಾಗಿ ಆಟೋಗಳಿಗೆ 250-300 ರೂ. ಪಾವತಿಸುವಂತಾಗಿದೆ.
ದಸರಾ ಪ್ರಯುಕ್ತ ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಮೈಸೂರಿನ ವಿವಿಧ ಭಾಗಗಳಿಗೆ ತೆರಳಲು ಆಟೋ ಸೌಲಭ್ಯ ಪಡೆದುಕೊಳ್ಳುತ್ತಾರೆ. ಆದರೆ ರೈಲು ನಿಲ್ದಾಣದ ಬಳಿ ಇರುವ -ಪ್ರೀಪೇಯ್ಡ್ ಆಟೋ ಬುಕಿಂಗ್ ಸೆಂಟರ್ ಸ್ಥಗಿತಗೊಂಡಿರುವ ಪರಿಣಾಮ ಪ್ರವಾಸಿಗರು ಆಟೋಗಳಿಗೆ ದುಪ್ಪಟ್ಟು ಹಣ ನೀಡಬೇಕಾಗಿದೆ. ಅದ್ದರಿಂದ ಸಂಬಂಧಪಟ್ಟವರು ಕೂಡಲೇ ಇಲ್ಲಿನ ಪ್ರೀ-ಪೇಯ್ಡ್ ಆಟೋ ಬುಕಿಂಗ್ ಕೇಂದ್ರವನ್ನು ಪುನರಾಂಭಿಸಲು ಕ್ರಮ ಕೈಗೊಳ್ಳಬೇಕು.
-ಎಂ.ಎಸ್.ಉಷಾ ಪ್ರಕಾಶ್, ಎಸ್‌ಬಿಎಂ ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಹನೂರು: ಮಹದೇಶ್ವರ ಬೆಟ್ಟದಲ್ಲಿ ಇತಿಹಾಸದಲ್ಲೇ ಮೊಟ್ಟ ಮೊದಲಿಗೆ ದಾಖಲೆ ಹುಂಡಿ ಹಣ ಸಂಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಶ್ರೀ…

45 mins ago

ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನೋದ್ಯಮಕ್ಕೆ ಉತ್ತೇಜನ: ಉದ್ಯಮಿಗಳ ಜೊತೆ ಕೇಂದ್ರ ಸಚಿವ ಎಚ್‌ಡಿಕೆ ಚರ್ಚೆ

ಬೆಂಗಳೂರು: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನ ಕ್ಷೇತ್ರದ ಅಭಿವೃದ್ಧಿ ಹಾಗೂ ಅದಕ್ಕೆ ಪೂರಕ ವ್ಯವಸ್ಥೆಯನ್ನು ಸೃಷ್ಟಿಸುವ ದಿಸೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ…

4 hours ago

ಪವಿತ್ರಾ ಗೌಡಗೆ ಬಿಗ್‌ ಶಾಕ್‌ ಕೊಟ್ಟ ಹೈಕೋರ್ಟ್:‌ ಏನದು ಗೊತ್ತಾ.?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಅವರಿಗೆ ಈಗ ಜೈಲಿನ ಊಟವೇ ಗತಿಯಾಗಿದೆ. ಈ…

5 hours ago

ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಉಂಟಾಗಬಾರದು: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘವು ರಾಜ್ಯದ ಸರ್ಕಾರಿ ಆಸ್ಪತ್ರೆಗಳಲ್ಲಿ ಮಾರ್ಚ್.11ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ…

5 hours ago

ಗುಂಡ್ಲುಪೇಟೆ: ಕಾಡಾನೆ ದಾಳಿ ನಿಯಂತ್ರಿಸುವಂತೆ ಅರಣ್ಯ ಇಲಾಖೆಗೆ ಮನವಿ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಮಂಚಹಳ್ಳಿ ಹಾಗೂ ಸವಕನಹಳ್ಳಿ ಪಾಳ್ಯದಲ್ಲಿ ಕಾಡಾನೆಗಳ ದಾಳಿಯಿಂದ ಫಸಲು ನಾಶವಾಗುತ್ತಿದ್ದು,…

5 hours ago

ಗುಂಡ್ಲುಪೇಟೆ: ಪಡಗೂರು ಬಳಿ ಎರಡು ಚಿರತೆ ಮರಿಗಳ ರಕ್ಷಣೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಪಡಗೂರು ಗ್ರಾಮದ ಶಿವಕುಮಾರ್ ಎಂಬುವವರ ಜಮೀನಿನಲ್ಲಿ ಎರಡು ಚಿರತೆ ಮರಿಗಳನ್ನು…

5 hours ago