ಮೈಸೂರಿನ ರೈಲು ನಿಲ್ದಾಣದ ಬಳಿ ಇರುವ ಪ್ರೀ-ಪೇಯ್ಡ್ ಆಟೋ ಬುಕಿಂಗ್ ಕೇಂದ್ರವು ಸ್ಥಗಿತಗೊಂಡು ಸಾಕಷ್ಟು ತಿಂಗಳುಗಳೇ ಕಳೆದಿದ್ದು, ರೈಲು ನಿಲ್ದಾಣದಿಂದ ವಿವಿಧ ಭಾಗಗಳಿಗೆ ತೆರಳುವವರು ಅಧಿಕ ಹಣ ನೀಡಿ ಆಟೋ ಸೌಲಭ್ಯ ಪಡೆದುಕೊಳ್ಳಬೇಕಿದೆ.
ಕಳೆದ ಬಾರಿ ನಾನು ಪ್ರೀಪೇಯ್ಡ್ ಆಟೋ ಬುಕ್ ಮಾಡಿಕೊಂಡು ರೈಲು ನಿಲ್ದಾಣದಿಂದ ಶ್ರೀರಾಂಪುರಕ್ಕೆ ಕೇವಲ 110 ರೂ ಪಾವತಿಸಿ ಹೋಗಿದ್ದೆ. ಆದರೆ ಈಗ ಇಲ್ಲಿ ಪ್ರೀಪೇಯ್ಡ್ ಸೇವೆ ಸ್ಥಗಿತಗೊಂಡಿದ್ದು, ಇದರಿಂದಾಗಿ ಆಟೋಗಳಿಗೆ 250-300 ರೂ. ಪಾವತಿಸುವಂತಾಗಿದೆ.
ದಸರಾ ಪ್ರಯುಕ್ತ ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಮೈಸೂರಿನ ವಿವಿಧ ಭಾಗಗಳಿಗೆ ತೆರಳಲು ಆಟೋ ಸೌಲಭ್ಯ ಪಡೆದುಕೊಳ್ಳುತ್ತಾರೆ. ಆದರೆ ರೈಲು ನಿಲ್ದಾಣದ ಬಳಿ ಇರುವ -ಪ್ರೀಪೇಯ್ಡ್ ಆಟೋ ಬುಕಿಂಗ್ ಸೆಂಟರ್ ಸ್ಥಗಿತಗೊಂಡಿರುವ ಪರಿಣಾಮ ಪ್ರವಾಸಿಗರು ಆಟೋಗಳಿಗೆ ದುಪ್ಪಟ್ಟು ಹಣ ನೀಡಬೇಕಾಗಿದೆ. ಅದ್ದರಿಂದ ಸಂಬಂಧಪಟ್ಟವರು ಕೂಡಲೇ ಇಲ್ಲಿನ ಪ್ರೀ-ಪೇಯ್ಡ್ ಆಟೋ ಬುಕಿಂಗ್ ಕೇಂದ್ರವನ್ನು ಪುನರಾಂಭಿಸಲು ಕ್ರಮ ಕೈಗೊಳ್ಳಬೇಕು.
-ಎಂ.ಎಸ್.ಉಷಾ ಪ್ರಕಾಶ್, ಎಸ್ಬಿಎಂ ಕಾಲೋನಿ, ಮೈಸೂರು
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…