ಮೈಸೂರಿನ ರೈಲು ನಿಲ್ದಾಣದ ಬಳಿ ಇರುವ ಪ್ರೀ-ಪೇಯ್ಡ್ ಆಟೋ ಬುಕಿಂಗ್ ಕೇಂದ್ರವು ಸ್ಥಗಿತಗೊಂಡು ಸಾಕಷ್ಟು ತಿಂಗಳುಗಳೇ ಕಳೆದಿದ್ದು, ರೈಲು ನಿಲ್ದಾಣದಿಂದ ವಿವಿಧ ಭಾಗಗಳಿಗೆ ತೆರಳುವವರು ಅಧಿಕ ಹಣ ನೀಡಿ ಆಟೋ ಸೌಲಭ್ಯ ಪಡೆದುಕೊಳ್ಳಬೇಕಿದೆ.
ಕಳೆದ ಬಾರಿ ನಾನು ಪ್ರೀಪೇಯ್ಡ್ ಆಟೋ ಬುಕ್ ಮಾಡಿಕೊಂಡು ರೈಲು ನಿಲ್ದಾಣದಿಂದ ಶ್ರೀರಾಂಪುರಕ್ಕೆ ಕೇವಲ 110 ರೂ ಪಾವತಿಸಿ ಹೋಗಿದ್ದೆ. ಆದರೆ ಈಗ ಇಲ್ಲಿ ಪ್ರೀಪೇಯ್ಡ್ ಸೇವೆ ಸ್ಥಗಿತಗೊಂಡಿದ್ದು, ಇದರಿಂದಾಗಿ ಆಟೋಗಳಿಗೆ 250-300 ರೂ. ಪಾವತಿಸುವಂತಾಗಿದೆ.
ದಸರಾ ಪ್ರಯುಕ್ತ ಮೈಸೂರಿಗೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಮೈಸೂರಿನ ವಿವಿಧ ಭಾಗಗಳಿಗೆ ತೆರಳಲು ಆಟೋ ಸೌಲಭ್ಯ ಪಡೆದುಕೊಳ್ಳುತ್ತಾರೆ. ಆದರೆ ರೈಲು ನಿಲ್ದಾಣದ ಬಳಿ ಇರುವ -ಪ್ರೀಪೇಯ್ಡ್ ಆಟೋ ಬುಕಿಂಗ್ ಸೆಂಟರ್ ಸ್ಥಗಿತಗೊಂಡಿರುವ ಪರಿಣಾಮ ಪ್ರವಾಸಿಗರು ಆಟೋಗಳಿಗೆ ದುಪ್ಪಟ್ಟು ಹಣ ನೀಡಬೇಕಾಗಿದೆ. ಅದ್ದರಿಂದ ಸಂಬಂಧಪಟ್ಟವರು ಕೂಡಲೇ ಇಲ್ಲಿನ ಪ್ರೀ-ಪೇಯ್ಡ್ ಆಟೋ ಬುಕಿಂಗ್ ಕೇಂದ್ರವನ್ನು ಪುನರಾಂಭಿಸಲು ಕ್ರಮ ಕೈಗೊಳ್ಳಬೇಕು.
-ಎಂ.ಎಸ್.ಉಷಾ ಪ್ರಕಾಶ್, ಎಸ್ಬಿಎಂ ಕಾಲೋನಿ, ಮೈಸೂರು
ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…
ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ರಾಜ್ಯ ಕಾಂಗ್ರೆಸ್ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…
ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…
ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…