ಓದುಗರ ಪತ್ರ
ವಿಚ್ಛೇದನ ಸಿಕ್ಕಿದ್ದಕ್ಕೆ ವ್ಯಕ್ತಿಯೊಬ್ಬ ಹಾಲಿನಲ್ಲಿ ಸ್ನಾನ ಮಾಡಿ ಸಂಭ್ರಮಿಸಿರುವ ಸುದ್ದಿಯನ್ನು ಮಾಧ್ಯಮಗಳಲ್ಲಿ ನೋಡಿ ಅಚ್ಚರಿಯೂ, ಆತಂಕವೂ ಆಯಿತು. ಪತ್ನಿಯು ಅನೈತಿಕ ಸಂಬಂಧ ಹೊಂದಿದ್ದರಿಂದ ಬೇಸತ್ತು ಮಗಳ ಭವಿಷ್ಯಕ್ಕಾಗಿ ಇವೆಲ್ಲವನ್ನು ಸಹಿಸಿಕೊಂಡಿದ್ದ ಆತ ಕೋರ್ಟ್ ನಿಂದ ಅಧಿಕೃತವಾಗಿ ವಿಚ್ಛೇದನ ಸಿಕ್ಕ ಖುಷಿಗೆ ಲೀಟರ್ ಗಟ್ಟಲೆ ಹಾಲಿನಲ್ಲಿ ಸ್ನಾನ ಮಾಡಿ ನಾನು ಇನ್ನು ಸ್ವತಂತ್ರ ಎಂದು ಸಂಭ್ರಮಿಸಿದ್ದಾನೆ!
ಗಂಡಂದಿರು ಹೆಂಡತಿಯರಿಗೆ ಮೋಸ ಮಾಡುತ್ತಾರೆ! ಹಾಗೊಂದು ಮಾತು ನಮ್ಮಲ್ಲಿದೆ. ಆದರೆ ಈಗ ಕಾಲ ಬದಲಾಗಿದೆ! ಮೋಸ ಮಾಡು ವುದರಲ್ಲಿ ಹೆಂಡತಿಯರು ಗಂಡಂದಿರ ವಿರುದ್ಧ ಸ್ಪರ್ಧೆಗೆ ಇಳಿದಿದ್ದಾರೆ ಎನಿಸುತ್ತದೆ.
ನಮ್ಮ ದೇಶದಲ್ಲಿ ಮದುವೆಗೆ ನಂಬಿಕೆಯೇ ತಳಹದಿ. ಗಂಡ ಹೆಂಡತಿಯಲ್ಲಿ ಅಥವಾ ಹೆಂಡತಿ ಗಂಡನಲ್ಲಿ ನಂಬಿಕೆ ಕಳೆದುಕೊಂಡರು ಅಂದರೆ ದಾಂಪತ್ಯ ಮುರಿದು ಬಿತ್ತು ಎಂದರ್ಥ. ಕಾನೂನು ಬದ್ಧವಾಗಿ ವಿಚ್ಛೇದನ ನೀಡುವುದು ಔಪಚಾರಿಕವಷ್ಟೇ. ದಾಂಪತ್ಯದಲ್ಲಿ ನಂಬಿಕೆ ಕಳೆದುಕೊಳ್ಳುವುದಕ್ಕೆ ಪ್ರಮುಖ ಕಾರಣ ಸಂಗಾತಿಗಳಲ್ಲಿ ಒಬ್ಬರು ಇನ್ನೊಬ್ಬರಿಗೆ ಮಾಡುವ ಮೋಸ, ವಿಶ್ವಾಸದ್ರೋಹ. ಆದರೆ ಇತ್ತೀಚೆಗಂತೂ ನಂಬಿಕೆ ದ್ರೋಹದ ಪ್ರಕರಣಗಳು ಹೆಚ್ಚಾಗಿ ಕೊಲೆ, ವಿಚ್ಛೇದನದಲ್ಲಿ ಅಂತ್ಯವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.
–ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…