Andolana originals

ಓದುಗರ ಪತ್ರ: ಸಂಬಂಧಗಳಲ್ಲಿ ವಿಶ್ವಾಸ ಇರಲಿ

ವಿಚ್ಛೇದನ ಸಿಕ್ಕಿದ್ದಕ್ಕೆ ವ್ಯಕ್ತಿಯೊಬ್ಬ ಹಾಲಿನಲ್ಲಿ ಸ್ನಾನ ಮಾಡಿ ಸಂಭ್ರಮಿಸಿರುವ ಸುದ್ದಿಯನ್ನು ಮಾಧ್ಯಮಗಳಲ್ಲಿ ನೋಡಿ ಅಚ್ಚರಿಯೂ, ಆತಂಕವೂ ಆಯಿತು. ಪತ್ನಿಯು ಅನೈತಿಕ ಸಂಬಂಧ ಹೊಂದಿದ್ದರಿಂದ ಬೇಸತ್ತು ಮಗಳ ಭವಿಷ್ಯಕ್ಕಾಗಿ ಇವೆಲ್ಲವನ್ನು ಸಹಿಸಿಕೊಂಡಿದ್ದ ಆತ ಕೋರ್ಟ್ ನಿಂದ ಅಧಿಕೃತವಾಗಿ ವಿಚ್ಛೇದನ ಸಿಕ್ಕ ಖುಷಿಗೆ ಲೀಟರ್ ಗಟ್ಟಲೆ ಹಾಲಿನಲ್ಲಿ ಸ್ನಾನ ಮಾಡಿ ನಾನು ಇನ್ನು ಸ್ವತಂತ್ರ ಎಂದು ಸಂಭ್ರಮಿಸಿದ್ದಾನೆ!

ಗಂಡಂದಿರು ಹೆಂಡತಿಯರಿಗೆ ಮೋಸ ಮಾಡುತ್ತಾರೆ! ಹಾಗೊಂದು ಮಾತು ನಮ್ಮಲ್ಲಿದೆ. ಆದರೆ ಈಗ ಕಾಲ ಬದಲಾಗಿದೆ! ಮೋಸ ಮಾಡು ವುದರಲ್ಲಿ ಹೆಂಡತಿಯರು ಗಂಡಂದಿರ ವಿರುದ್ಧ ಸ್ಪರ್ಧೆಗೆ ಇಳಿದಿದ್ದಾರೆ ಎನಿಸುತ್ತದೆ.

ನಮ್ಮ ದೇಶದಲ್ಲಿ ಮದುವೆಗೆ ನಂಬಿಕೆಯೇ ತಳಹದಿ. ಗಂಡ ಹೆಂಡತಿಯಲ್ಲಿ ಅಥವಾ ಹೆಂಡತಿ ಗಂಡನಲ್ಲಿ ನಂಬಿಕೆ ಕಳೆದುಕೊಂಡರು ಅಂದರೆ ದಾಂಪತ್ಯ ಮುರಿದು ಬಿತ್ತು ಎಂದರ್ಥ. ಕಾನೂನು ಬದ್ಧವಾಗಿ ವಿಚ್ಛೇದನ ನೀಡುವುದು ಔಪಚಾರಿಕವಷ್ಟೇ. ದಾಂಪತ್ಯದಲ್ಲಿ ನಂಬಿಕೆ ಕಳೆದುಕೊಳ್ಳುವುದಕ್ಕೆ ಪ್ರಮುಖ ಕಾರಣ ಸಂಗಾತಿಗಳಲ್ಲಿ ಒಬ್ಬರು ಇನ್ನೊಬ್ಬರಿಗೆ ಮಾಡುವ ಮೋಸ, ವಿಶ್ವಾಸದ್ರೋಹ. ಆದರೆ ಇತ್ತೀಚೆಗಂತೂ ನಂಬಿಕೆ ದ್ರೋಹದ ಪ್ರಕರಣಗಳು ಹೆಚ್ಚಾಗಿ ಕೊಲೆ, ವಿಚ್ಛೇದನದಲ್ಲಿ ಅಂತ್ಯವಾಗುತ್ತಿರುವುದು ಕಳವಳಕಾರಿ ಸಂಗತಿಯಾಗಿದೆ.

ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

2026ರ ದಸರಾ ಗಜಪಡೆ ಪಟ್ಟಿ ಬಿಡುಗಡೆ: ಅಂಬಾರಿ ಸಾರಥಿ ಅಭಿಮನ್ಯುವಿಗೆ ಕೊಕ್‌

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಈ ಬಾರಿ ದಸರಾ ಗಜಪಡೆಯ ಪಟ್ಟಿಯಲ್ಲಿ ಮಹತ್ವದ…

4 hours ago

ಹನೂರು ಶೂಟೌಟ್‌ ಪ್ರಕರಣ: ತಮಿಳುನಾಡು ಸರ್ಕಾರದಿಂದಲೂ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ

ಚೆನ್ನೈ: ಹನೂರು ಶೂಟೌಟ್ ಪ್ರಕರಣದಲ್ಲಿ ಮೃತರ ಕುಟುಂಬಗಳಿಗೆ ತಮಿಳುನಾಡು ಸರ್ಕಾರದಿಂದಲೂ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಲಾಗಿದೆ.…

4 hours ago

ಗ್ಯಾರೇಜ್‌ಗೆ ಬೆಂಕಿ ಲಕ್ಷಾಂತರ ಮೌಲ್ಯದ ವಸ್ತುಗಳು ಭಸ್ಮ

ಗುಂಡ್ಲುಪೇಟೆ: ಪಟ್ಟಣದ ಕೇರಳ ರಸ್ತೆಯಲ್ಲಿರುವ ಗ್ಯಾರೇಜ್‌ಗೆ ಬೆಂಕಿ ತಗುಲಿ ಸಂಪೂರ್ಣ ಗ್ಯಾರೇಜ್ ಸುಟ್ಟುಹೋಗಿರುವ ಘಟನೆ ನಡೆದಿದೆ. ಪಟ್ಟಣದ ವಾಹಿದ್ ಎಂಬುವವರಿಗೆ…

5 hours ago

ಕೆಆರ್‌ಎಸ್‌ನಿಂದ ತಮಿಳುನಾಡಿಗೆ 4917 ಕ್ಯೂಸೆಕ್‌ ನೀರು ಬಿಡುಗಡೆ

ಮಂಡ್ಯ: ರಾಜ್ಯದಲ್ಲಿ ಕೆಆರ್‌ಎಸ್‌ ಜಲಾಶಯದ ನೀರಿನ ವಿಚಾರವೂ ಚರ್ಚೆಗೆ ಬಂದಿದ್ದು, ಕೇವಲ 1951 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿರುವ ಡ್ಯಾಂನಿಂದ…

6 hours ago

ಕಾಡಾನೆಗಳ ಸೆರೆಗೆ ಕಾರ್ಯಾಚರಣೆ: ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ

ಕೊಡಗು: ಸಾರ್ವಜನಿಕರಿಗೆ ಉಪಟಳ ನೀಡುತ್ತಿರುವ ಮೂರು ಗಂಡಾನೆಗಳನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆ ಆದೇಶ ನೀಡಿದೆ. ಇಂದು ಬೆಳಿಗ್ಗೆ 10…

11 hours ago

ಹನೂರು ಎನ್‌ಕೌಂಟರ್: ಆತ್ಮರಕ್ಷಣೆಗಾಗಿ ಗುಂಡು ಹಾರಿಸಿದೆವು: ACF ಮರಿಸ್ವಾಮಿ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ನಡೆದ ಹನೂರು ಎನ್‌ಕೌಂಟರ್ ಬಗ್ಗೆ ಮೊದಲ ಬಾರಿಗೆ ಕಾವೇರಿ ವನ್ಯಧಾಮದ ACF ಮರಿಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯೆ…

11 hours ago