ಓದುಗರ ಪತ್ರ
ಕನ್ನಡ ರಾಜ್ಯೋತ್ಸವ ಬಂದರೆ ಸಾಕು ಕನ್ನಡದ ಮೇಲೆ ಅಭಿಮಾನ ಉಕ್ಕಿ ಹರಿಯುತ್ತದೆ. ಅಂಗಡಿ, ಹೋಟೆಲ್ಗಳು ಕನ್ನಡಮಯವಾಗಿರುತ್ತವೆ. ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಅಭಿಮಾನವನ್ನು ತೋರುವ ಈ ಅಭಿಮಾನಿಗಳಿಗೆ ಉಳಿದ ದಿನಗಳಲ್ಲಿ ಇವರ ಕನ್ನಡ ಅಭಿಮಾನ ಎಲ್ಲಿ ಹೋಗಿರುತ್ತದೆ ಎಂದು ಪ್ರಶ್ನಿಸಿದರೆ ಉತ್ತರ ಸಿಗುವುದಿಲ್ಲ.
ನವೆಂಬರ್ನಲ್ಲಿ ಕನ್ನಡ ಧ್ವಜ ಸ್ತಂಭಗಳಲ್ಲಿ ಧ್ವಜಾರೋಹಣ ಮಾಡಿದರೆ ಅದು ಸೂಕ್ತ ನಿರ್ವಹಣೆಯಿಲ್ಲದೇ ಹರಿದುಹೋಗಿದ್ದರೂ ಹಾಗೆಯೇ ಇರುತ್ತದೆ. ಧ್ವಜಸ್ತಂಭಗಳಿಗೆ ಬಣ್ಣ ಬಳಿದು ಮತ್ತೆ ಹೊಸ ಧ್ವಜಾರೋಹಣವಾಗುವುದು ನವೆಂಬರ್ ಬಂದಾಗಲೇ ಎನ್ನುವುದು ವಿಪರ್ಯಾಸದ ಸಂಗತಿಯಾಗಿದೆ. ಕನ್ನಡ ಧ್ವಜಾರೋಹಣ ಮಾಡಿದ ಮೇಲೆ ಸೂಕ್ತ ನಿರ್ವಹಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ.
ಇದನ್ನೂ ಓದಿ:-ದಾರಿ ತಪ್ಪಿದ ಮಕ್ಕಳನ್ನು ಮನೆ ತಲುಪಿಸುವ ಐಎಎಸ್ ಅಧಿಕಾರಿ
ಪ್ರತಿಯೊಬ್ಬರೂ ವರ್ಷಪೂರ್ತಿ ಕನ್ನಡದ ಮೇಲೆ ಅಭಿಮಾನ ತೋರಿಸಬೇಕು. ನವೆಂಬರ್ ತಿಂಗಳಿನಲ್ಲಿ ಮಾತ್ರ ಗುಂಪು ಕಟ್ಟಿಕೊಂಡು ಇಂಗ್ಲಿಷ್ ಫಲಕಗಳಿರುವ ಅಂಗಡಿಗಳ ಮೇಲೆ ದಾಳಿ ಮಾಡುವುದಲ್ಲ. ಹೊರ ರಾಜ್ಯದಿಂದ ಬಂದವರಿಗೆ ಮೊದಲು ಕನ್ನಡ ಓದಲು, ಬರೆಯಲು ಕಲಿಸಬೇಕು. ರಾಜ್ಯೋತ್ಸವ ಒಂದು ತಿಂಗಳಿಗೆ ಸೀಮಿತವಾಗದೇ ನಿತ್ಯೋತ್ಸವವಾಗಬೇಕು.
-ಎಂ. ಎಸ್. ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…