Andolana originals

ಓದುಗರ ಪತ್ರ:  ರಾಜ್ಯೋತ್ಸವ ನಿತ್ಯೋತ್ಸವವಾಗಲಿ

ಕನ್ನಡ ರಾಜ್ಯೋತ್ಸವ ಬಂದರೆ ಸಾಕು ಕನ್ನಡದ ಮೇಲೆ ಅಭಿಮಾನ ಉಕ್ಕಿ ಹರಿಯುತ್ತದೆ. ಅಂಗಡಿ, ಹೋಟೆಲ್‌ಗಳು ಕನ್ನಡಮಯವಾಗಿರುತ್ತವೆ. ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಅಭಿಮಾನವನ್ನು ತೋರುವ ಈ ಅಭಿಮಾನಿಗಳಿಗೆ ಉಳಿದ ದಿನಗಳಲ್ಲಿ ಇವರ ಕನ್ನಡ ಅಭಿಮಾನ ಎಲ್ಲಿ ಹೋಗಿರುತ್ತದೆ ಎಂದು ಪ್ರಶ್ನಿಸಿದರೆ ಉತ್ತರ ಸಿಗುವುದಿಲ್ಲ.

ನವೆಂಬರ್‌ನಲ್ಲಿ ಕನ್ನಡ ಧ್ವಜ ಸ್ತಂಭಗಳಲ್ಲಿ  ಧ್ವಜಾರೋಹಣ ಮಾಡಿದರೆ ಅದು ಸೂಕ್ತ ನಿರ್ವಹಣೆಯಿಲ್ಲದೇ ಹರಿದುಹೋಗಿದ್ದರೂ ಹಾಗೆಯೇ ಇರುತ್ತದೆ. ಧ್ವಜಸ್ತಂಭಗಳಿಗೆ ಬಣ್ಣ ಬಳಿದು ಮತ್ತೆ ಹೊಸ ಧ್ವಜಾರೋಹಣವಾಗುವುದು ನವೆಂಬರ್ ಬಂದಾಗಲೇ ಎನ್ನುವುದು ವಿಪರ್ಯಾಸದ ಸಂಗತಿಯಾಗಿದೆ. ಕನ್ನಡ ಧ್ವಜಾರೋಹಣ ಮಾಡಿದ ಮೇಲೆ ಸೂಕ್ತ ನಿರ್ವಹಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ.

ಇದನ್ನೂ ಓದಿ:-ದಾರಿ ತಪ್ಪಿದ ಮಕ್ಕಳನ್ನು ಮನೆ ತಲುಪಿಸುವ ಐಎಎಸ್ ಅಧಿಕಾರಿ

ಪ್ರತಿಯೊಬ್ಬರೂ ವರ್ಷಪೂರ್ತಿ ಕನ್ನಡದ ಮೇಲೆ ಅಭಿಮಾನ ತೋರಿಸಬೇಕು. ನವೆಂಬರ್ ತಿಂಗಳಿನಲ್ಲಿ ಮಾತ್ರ ಗುಂಪು ಕಟ್ಟಿಕೊಂಡು ಇಂಗ್ಲಿಷ್ ಫಲಕಗಳಿರುವ ಅಂಗಡಿಗಳ ಮೇಲೆ ದಾಳಿ ಮಾಡುವುದಲ್ಲ. ಹೊರ ರಾಜ್ಯದಿಂದ ಬಂದವರಿಗೆ ಮೊದಲು ಕನ್ನಡ ಓದಲು, ಬರೆಯಲು ಕಲಿಸಬೇಕು. ರಾಜ್ಯೋತ್ಸವ ಒಂದು ತಿಂಗಳಿಗೆ ಸೀಮಿತವಾಗದೇ ನಿತ್ಯೋತ್ಸವವಾಗಬೇಕು.

-ಎಂ. ಎಸ್. ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಹಾಳಾಗಿರುವ ಜನರೇಟರ್; ಡಯಾಲಿಸಿಸ್ ರೋಗಿಗಳ ಪರದಾಟ

ವೈದ್ಯರು ಮೊಬೈಲ್ ಟಾರ್ಚ್ ‌ಬೆಳಕಿನಲ್ಲೇ ರೋಗಿಗಳ ತಪಾಸಣೆ ನಡೆಸಿ ಚೀಟಿ ಬರೆಯಬೇಕಾದ ಪರಿಸ್ಥಿತಿ ಶ್ರೀರಂಗಪಟ್ಟಣ ಸರ್ಕಾರಿ ಆಸ್ಪತ್ರೆಯ ದುಸ್ಥಿತಿ ಶ್ರೀರಂಗಪಟ್ಟಣ:…

16 seconds ago

1 ಕೆಜಿ 520 ಗ್ರಾಂ ತೂಕದ ಬಟರ್ ಫ್ರೂಟ್ ಬೆಳೆದ ಸಾವಯವ ಕೃಷಿಕ

ಮಂಜು ಕೋಟೆ ಕ್ಯಾತನಹಳ್ಳಿಯಲ್ಲಿ ಸಾವಯವ ಪದ್ಧತಿಯಲ್ಲಿ ಬೆಳೆ ಬೆಳೆದು ಗಮನ ಸೆಳೆದ ರೈತ ಎಚ್.ಆರ್.ಮೂರ್ತಿ ಎಚ್.ಡಿ.ಕೋಟೆ: ತಾಲ್ಲೂಕಿನ ಸಾವಯವ ಕೃಷಿಕ…

6 mins ago

ಡಿಕೆಶಿ ಸಂಪುಟದಲ್ಲಿ ಡಾ.ಎಚ್‌ಸಿಎಂ ಕೈ ಬಿಟ್ಟಿದ್ದಕ್ಕೆ ದಸಂಸ ತೀವ್ರ ಅಸಮಾಧಾನ

ಮೈಸೂರು:  ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ   ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…

12 hours ago

ನನ್ನ ಗೆಲುವು ಜೆಡಿಎಸ್ ಭಿಕ್ಷೆ ಅಲ್ಲ, ನಾಗಮಂಗಲ ಜನರ ಭಿಕ್ಷೆ : ಸಚಿವ ಚಲುವರಾಯಸ್ವಾಮಿ

ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…

13 hours ago

ಓದುಗರ ಪತ್ರ: ಪುಷ್ಪ ವೃಷ್ಟಿ..!

ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…

24 hours ago