Andolana originals

ಓದುಗರ ಪತ್ರ:  ರಾಜ್ಯೋತ್ಸವ ನಿತ್ಯೋತ್ಸವವಾಗಲಿ

ಕನ್ನಡ ರಾಜ್ಯೋತ್ಸವ ಬಂದರೆ ಸಾಕು ಕನ್ನಡದ ಮೇಲೆ ಅಭಿಮಾನ ಉಕ್ಕಿ ಹರಿಯುತ್ತದೆ. ಅಂಗಡಿ, ಹೋಟೆಲ್‌ಗಳು ಕನ್ನಡಮಯವಾಗಿರುತ್ತವೆ. ನವೆಂಬರ್ ತಿಂಗಳಲ್ಲಿ ಮಾತ್ರ ಕನ್ನಡ ಅಭಿಮಾನವನ್ನು ತೋರುವ ಈ ಅಭಿಮಾನಿಗಳಿಗೆ ಉಳಿದ ದಿನಗಳಲ್ಲಿ ಇವರ ಕನ್ನಡ ಅಭಿಮಾನ ಎಲ್ಲಿ ಹೋಗಿರುತ್ತದೆ ಎಂದು ಪ್ರಶ್ನಿಸಿದರೆ ಉತ್ತರ ಸಿಗುವುದಿಲ್ಲ.

ನವೆಂಬರ್‌ನಲ್ಲಿ ಕನ್ನಡ ಧ್ವಜ ಸ್ತಂಭಗಳಲ್ಲಿ  ಧ್ವಜಾರೋಹಣ ಮಾಡಿದರೆ ಅದು ಸೂಕ್ತ ನಿರ್ವಹಣೆಯಿಲ್ಲದೇ ಹರಿದುಹೋಗಿದ್ದರೂ ಹಾಗೆಯೇ ಇರುತ್ತದೆ. ಧ್ವಜಸ್ತಂಭಗಳಿಗೆ ಬಣ್ಣ ಬಳಿದು ಮತ್ತೆ ಹೊಸ ಧ್ವಜಾರೋಹಣವಾಗುವುದು ನವೆಂಬರ್ ಬಂದಾಗಲೇ ಎನ್ನುವುದು ವಿಪರ್ಯಾಸದ ಸಂಗತಿಯಾಗಿದೆ. ಕನ್ನಡ ಧ್ವಜಾರೋಹಣ ಮಾಡಿದ ಮೇಲೆ ಸೂಕ್ತ ನಿರ್ವಹಣೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ.

ಇದನ್ನೂ ಓದಿ:-ದಾರಿ ತಪ್ಪಿದ ಮಕ್ಕಳನ್ನು ಮನೆ ತಲುಪಿಸುವ ಐಎಎಸ್ ಅಧಿಕಾರಿ

ಪ್ರತಿಯೊಬ್ಬರೂ ವರ್ಷಪೂರ್ತಿ ಕನ್ನಡದ ಮೇಲೆ ಅಭಿಮಾನ ತೋರಿಸಬೇಕು. ನವೆಂಬರ್ ತಿಂಗಳಿನಲ್ಲಿ ಮಾತ್ರ ಗುಂಪು ಕಟ್ಟಿಕೊಂಡು ಇಂಗ್ಲಿಷ್ ಫಲಕಗಳಿರುವ ಅಂಗಡಿಗಳ ಮೇಲೆ ದಾಳಿ ಮಾಡುವುದಲ್ಲ. ಹೊರ ರಾಜ್ಯದಿಂದ ಬಂದವರಿಗೆ ಮೊದಲು ಕನ್ನಡ ಓದಲು, ಬರೆಯಲು ಕಲಿಸಬೇಕು. ರಾಜ್ಯೋತ್ಸವ ಒಂದು ತಿಂಗಳಿಗೆ ಸೀಮಿತವಾಗದೇ ನಿತ್ಯೋತ್ಸವವಾಗಬೇಕು.

-ಎಂ. ಎಸ್. ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಚಿರಕನಹಳ್ಳಿ ; ಬೋನಿಗೆ ಬಿದ್ದ ಹುಲಿ

ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ವ್ಯಾಪ್ತಿಯ ಕುಂದಕೆರೆ ವಲಯದ ಚಿರಕನಹಳ್ಳಿ ಗ್ರಾಮದಲ್ಲಿ ಪೋತರಾಜು ಎಂಬುವವರ ಜಮೀನಿನಲ್ಲಿ ಅರಣ್ಯ…

3 hours ago

ವೆನಿಜುವೆಲಾ ಭೂಕಂಪ ; ಮೃತರ ಸಂಖ್ಯೆ 235ಕ್ಕೆ ಏರಿಕೆ

ಮುಂದುವರಿದ ರಕ್ಷಣಾ ಕಾರ್ಯಾಚರಣೆ ವೆನಿಜುವೆಲಾ : ವೆನಿಜುವೆಲಾದ ಉತ್ತರ ಭಾಗದಲ್ಲಿ ಬುಧವಾರ ಸಂಜೆ ಸಂಭವಿಸಿದ ಸತತ ಎರಡು ಪ್ರಬಲ ಭೂಕಂಪಗಳ…

3 hours ago

ಡಿಕೆಶಿ ಜೊತೆಗಿನ ಬಾಂಧ್ಯವ : ಧರ್ಮಸ್ಥಳದಲ್ಲಿ ವಿಜಯೇಂದ್ರ ಹೇಳಿದಿಷ್ಟು

ಧರ್ಮಸ್ಥಳ : ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಮತ್ತು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಜೊತೆಗಿನ ಬಾಂಧವ್ಯದ ಬಗ್ಗೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 26, ಶುಕ್ರವಾರ  

8 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಕನ್ನಡಕ್ಕೊಂದು ಒಟಿಟಿ, ʼಗರುಡ ಪುರಾಣʼ ಇತ್ಯಾದಿ

‘ವೆನ್ ಯು ವಾಂಟ್ ಟು ಡು ಸಮ್‌ತಿಂಗ್ ಡು ಇಟ್; ಆರ್ ಎಲ್ಸ್ ವಿಟ್ ನೆಸ್‌ಇಟ್’ ಇದು ಅತ್ಯಂತ ಪ್ರಚಲಿತವಿರುವ…

8 hours ago

ಹಿಟಾಚಿ ಮೇಲೆ ಬಿದ್ದ ಗೋಡೆ: ಚಾಲಕ ಪಾರು

ಮಳವಳ್ಳಿ: ಪೂರಿಗಾಲಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಆರಂಭವಾಗಿದ್ದು, ರಸ್ತೆ ಬದಿಯ ಕಟ್ಟಡ ನೆಲಸಮ ಮಾಡುವಾಗ ಕಟ್ಟಡದ ಗೋಡೆ ಹಿಟಾಚಿ…

1 day ago