Andolana originals

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ ನೀರಿನ ಲಭ್ಯತೆ, ರೈತರ ಸಮಸ್ಯೆ ಹಾಗೂ ಕುಡಿಯುವ ನೀರಿನ ಅವಶ್ಯಕತೆ ಬಗ್ಗೆಯೂ ಯೋಚಿಸಬೇಕಾಗುತ್ತದೆ. ವಾಸ್ತವಿಕತೆಯನ್ನು ಅರ್ಥಮಾಡಿಕೊಳ್ಳ ಬಾರದೇ? ಈ ಆದೇಶ ಎಷ್ಟರ ಮಟ್ಟಿಗೆ ಸರಿ? ರಾಜ್ಯದಲ್ಲಿ ಕಂಡುಬರುತ್ತಿರುವ ಬರದ ಸಂದರ್ಭದಲ್ಲೇ ನೀರಿನ ಬಗ್ಗೆ ಎಂತಹ ಗಂಭೀರ ಪರಿಸ್ಥಿತಿ ಇದೆ. ಈ ಮಾಹಿತಿಯನ್ನು ರಾಜ್ಯ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.

ಸಿಡಬ್ಲ್ಯುಆರ್‌ಸಿ ಎರಡೂ ರಾಜ್ಯಗಳ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಜೊತೆಗೆ ವಾಸ್ತವದ ಬಗ್ಗೆಯೂ ಅರಿವಿರಬೇಕು. ಸಿಡಬ್ಲ್ಯುಆರ್‌ಸಿಯ ತೀರ್ಮಾನ ಯಾವಾಗಲೂ ತಮಿಳುನಾಡು ಪರವಾಗಿಯೇ ಇರುತ್ತದೆ. ಈ ರೀತಿ ಆಗಬಾರದು.ಪ್ರತಿ ಸಲವೂ ಏಕಪಕ್ಷೀಯ ನಿರ್ಧಾರ ಆಗುತ್ತಿದ್ದರೆ ಅದರ ತೀರ್ಮಾನವನ್ನು ಪಕ್ಷೀಯ ತೀರ್ಮಾನವೆಂದು ಪರಿಗಣಿಸಬೇಕಾಗುತ್ತದೆ.

ನೀರಿನ ಲಭ್ಯತೆ ನೋಡಿಕೊಂಡು ಅಧ್ಯಯನ ಮಾಡಿ ನಿಷ್ಪಕ್ಷಪಾತವಾಗಿ ಸಿಡಬ್ಲ್ಯುಆರ್‌ಸಿ ಆದೇಶ ಮಾಡಬೇಕು.

-ಎ.ಎಸ್. ಗೋಪಾಲಕೃಷ್ಣ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

2 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

4 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

8 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

15 mins ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

21 mins ago