ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು ಸರ್ಕಾರವು ತ್ಯಾಜ್ಯದಿಂದ ವಿದ್ಯುತ್ ಮತ್ತು ಗೊಬ್ಬರ ತಯಾರಿಸುವ ಆಧುನಿಕ ಯೋಜನೆಗಳನ್ನು ಪ್ರತಿಯೊಂದು ಜಿಲ್ಲೆಗಳಲ್ಲಿಯೂ ಜಾರಿಗೆ ತರಬೇಕು. ಮೂಲದಲ್ಲೇ ಕಸ ವಿಂಗಡಣೆ ಮಾಡುವುದನ್ನು ಕಡ್ಡಾಯಗೊಳಿಸಿ ಸಾರ್ವಜನಿಕರಲ್ಲಿ ಕಸ ನಿರ್ವಹಣೆ ಬಗ್ಗೆ ವ್ಯಾಪಕ ಅರಿವು ಮೂಡಿಸುವುದು ಅತ್ಯಗತ್ಯ. ಪ್ರತಿಯೊಂದು ಜಿಲ್ಲೆಯಲ್ಲಿಯೂ ವಿಕೇಂದ್ರೀಕೃತ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಿದರೆ ಸಾಗಣೆ ವೆಚ್ಚ ಕಡಿಮೆಯಾಗುತ್ತದೆ. ಮನೆಮನೆಗೆ ವಿದ್ಯುತ್ ರಿಯಾಯಿತಿ ಅಥವಾ ‘ಸ್ವಚ್ಛತಾ ಅಂಕ’ (ಗ್ರೀನ್ ಪಾಯಿಂಟ್) ನೀಡುವಂತಹ ವಿನೂತನ ಪ್ರೋತ್ಸಾಹಕ ಕ್ರಮಗಳನ್ನು ಕೈಗೊಂಡರೆ ಜನರು ಸ್ವಯಂಪ್ರೇರಿತರಾಗಿ ಕಸ ವಿಂಗಡಣೆಯಲ್ಲಿ ಭಾಗವಹಿಸುತ್ತಾರೆ. ಇದು ನಗರಗಳ ನೈರ್ಮಲ್ಯ ಮತ್ತು ಪಾಲಿಕೆಯ ಆದಾಯ ಎರಡನ್ನೂ ಹೆಚ್ಚಿಸಿ ಶಕ್ತಿ ಸಮೃದ್ಧ ನಗರ ನಿರ್ಮಾಣಕ್ಕೆ ನಾಂದಿ ಹಾಡಲಿದೆ.
-ಡಾ. ಎಚ್.ಕೆ. ವಿಜಯಕುಮಾರ್, ಬೆಂಗಳೂರು
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…
ನರೇಂದ್ರ ಮೋದಿ ಅವರು ೨೦೦೧ರಲ್ಲಿ ಮೊದಲ ಬಾರಿಗೆ ಗುಜರಾತ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಸತತ ೧೫ ವರ್ಷಗಳು ಅಲ್ಲಿ…
ಜವಾಹರಲಾಲ್ ಎಂಬ ಅಪಾಯಕಾರಿ ಮನುಷ್ಯ ೬ ಬಾರಿ ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷರಾಗಿ ೩ ಬಾರಿ ಸತತವಾಗಿ ದೇಶದ ಪ್ರಧಾನಿಯಾಗಿದ್ದ ಜವಾಹರಲಾಲ್…
ಮಹಾದೇಶ್ ಎಂ.ಗೌಡ ಗ್ರಾಮ ಪಂಚಾಯಿತಿಗೆ ವಾರ್ಷಿಕ ೧೨ ರಿಂದ ೧೫ ಲಕ್ಷ ರೂ.ನಷ್ಟ; ಕ್ರಮಕ್ಕೆ ಸಾರ್ವಜನಿಕರ ಆಗ್ರಹ ಹನೂರು: ತಾಲ್ಲೂಕಿನ…