ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ ಸೂಚಿಸಿ ಇದೀಗ ೨,೦೦೦ ರೂ.ಮೊತ್ತಗಳಿಗೆ ಯಾವುದೇ ಶುಲ್ಕವಿಲ್ಲದೆ ಪಾವತಿಸಿ ಅದಕ್ಕಿಂತ ಹೆಚ್ಚು ಮೊತ್ತವನ್ನು ಪಾವತಿಸಲು ೦.೪% ಎಂಡಿಆರ್ ಶುಲ್ಕ ವಿಧಿಸುವುದಕ್ಕೆ ಮುಂದಾಗಿರುವುದು ಅವೈಜ್ಞಾನಿಕ.
ಜೀವನೋಪಾಯಕ್ಕಾಗಿ ಸಣ್ಣ ಪುಟ್ಟ ವ್ಯಾಪಾರ ನಡೆಸುತ್ತಿರುವವರು, ಅನೇಕ ಸಂದರ್ಭಗಳಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿದ ವೇಳೆ ಖರ್ಚು ೨,೦೦೦ ರೂ. ಮೇಲ್ಪಟ್ಟಿರುತ್ತದೆ. ಇಂತಹ ಸಂದರ್ಭದಲ್ಲಿ ಈ ಶುಲ್ಕ ಕಟ್ಟುವುದು ಎಷ್ಟು ಸಮಂಜಸ? ಭಾರತ ದೇಶವು ಸುಮಾರು ೮೦% ಕೃಷಿಕರನ್ನು ಹೊಂದಿರುವ ದೇಶ ಎಂಬುದನ್ನೂ ಮರೆಯಬಾರದು. ಈ ಎಲ್ಲ ವಿಷಯವನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಮಂತ್ರಿಗಳು ಮತ್ತು ಕೇಂದ್ರ ಹಣಕಾಸು ಮಂತ್ರಿಗಳು ಕೂಡಲೇ ಎ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಆರ್ಥಿಕ ತಜ್ಞರ ಜೊತೆ ಸಭೆ ನಡೆಸಿ ಜಾರಿಗೆ ತರಲು ಹೊರಟಿರುವ ಎಂಡಿಆರ್ ಶುಲ್ಕದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು




