ಓದುಗರ ಪತ್ರ
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ ಸೂಚಿಸಿ ಇದೀಗ ೨,೦೦೦ ರೂ.ಮೊತ್ತಗಳಿಗೆ ಯಾವುದೇ ಶುಲ್ಕವಿಲ್ಲದೆ ಪಾವತಿಸಿ ಅದಕ್ಕಿಂತ ಹೆಚ್ಚು ಮೊತ್ತವನ್ನು ಪಾವತಿಸಲು ೦.೪% ಎಂಡಿಆರ್ ಶುಲ್ಕ ವಿಧಿಸುವುದಕ್ಕೆ ಮುಂದಾಗಿರುವುದು ಅವೈಜ್ಞಾನಿಕ.
ಜೀವನೋಪಾಯಕ್ಕಾಗಿ ಸಣ್ಣ ಪುಟ್ಟ ವ್ಯಾಪಾರ ನಡೆಸುತ್ತಿರುವವರು, ಅನೇಕ ಸಂದರ್ಭಗಳಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿದ ವೇಳೆ ಖರ್ಚು ೨,೦೦೦ ರೂ. ಮೇಲ್ಪಟ್ಟಿರುತ್ತದೆ. ಇಂತಹ ಸಂದರ್ಭದಲ್ಲಿ ಈ ಶುಲ್ಕ ಕಟ್ಟುವುದು ಎಷ್ಟು ಸಮಂಜಸ? ಭಾರತ ದೇಶವು ಸುಮಾರು ೮೦% ಕೃಷಿಕರನ್ನು ಹೊಂದಿರುವ ದೇಶ ಎಂಬುದನ್ನೂ ಮರೆಯಬಾರದು. ಈ ಎಲ್ಲ ವಿಷಯವನ್ನು ಗಮನದಲ್ಲಿಟ್ಟುಕೊಂಡು, ಪ್ರಧಾನಮಂತ್ರಿಗಳು ಮತ್ತು ಕೇಂದ್ರ ಹಣಕಾಸು ಮಂತ್ರಿಗಳು ಕೂಡಲೇ ಎ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ಆರ್ಥಿಕ ತಜ್ಞರ ಜೊತೆ ಸಭೆ ನಡೆಸಿ ಜಾರಿಗೆ ತರಲು ಹೊರಟಿರುವ ಎಂಡಿಆರ್ ಶುಲ್ಕದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ಸೂಕ್ತ.
-ನಾಗೇಶ್, ಮಾನಸಗಂಗೋತ್ರಿ, ಮೈಸೂರು
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…
ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…
ಮಧುಕರ ಎಮ್.ಎಲ್. ಯಳಂದೂರಿನಲ್ಲೊಂದು ಅಪರೂಪದ ಜೋಡಿ ಅದು ಬೇಸಿಗೆ ಕಾಲ, ಬೆಳಗಿನ ವೇಳೆಯಲ್ಲಿ ವಾಕಿಂಗ್ ಮಾಡುವ ಜನರ ಸಂಖ್ಯೆ ಹೆಚ್ಚು,…
ಪ್ರಕಾಶ್ ಪುಟ್ಟಪ್ಪ ಸುತ್ತಮುತ್ತ ಹಳ್ಳಿಗಳಿಗೆಲ್ಲ ಸೋಬಾನೆ ಮಾಳಗರಸಮ್ಮ ಎಂದೇ ಪ್ರಖ್ಯಾತಿ ಗಳಿಸಿರೋ ಈ ಹಿರಿ ತಾಯಿಯ ವೈಯಕ್ತಿಕ ಬದುಕು ನಿಜಕ್ಕೂ…