Andolana originals

ಗ್ರಂಥಾಲಯ ಸ್ಥಾಪನೆ; ಶತಕ ಸಾಧನೆ

ಸರ್ಕಾರಿ ಶಾಲೆಯಲ್ಲಿ 100ನೇ ಲೈಬ್ರರಿ ಸ್ಥಾಪಿಸಿದ ಕಲಿಸು ಫೌಂಡೇಶನ್

ಮೈಸೂರು: ಗ್ರಂಥಾಲಯಗಳಲ್ಲಿ ಕಂಪ್ಯೂಟರ್‌ಗಳಿರುವುದನ್ನೇ ಡಿಜಿಟಲ್ ಲೈಬ್ರರಿ ಎಂದು ಹೇಳುವುದಿತ್ತು. ಆದರೆ ಕಲಿಸು ಫೌಂಡೇಶನ್ ಸಂಸ್ಥೆ ಮೈಸೂರಿನ ಕುಂಬಾರಕೊಪ್ಪಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಆರಂಭಿಸಿರುವ ಮೊದಲ ಹಾಗೂ ಸಂಸ್ಥೆಯ 100ನೇ ಗ್ರಂಥಾ ಲಯ ಆಡಿಯೋ ಹಾಗೂ ವಿಷು ಯಲ್ ಸೌಲಭ್ಯಗಳನ್ನು ಹೊಂದಿರುವ ಮೊದಲ ಡಿಜಿಟಲ್ ಲೈಬ್ರರಿ ಆಗಿರುವುದು ವಿಶೇಷವಾಗಿದೆ.

ಈ ಸರ್ಕಾರಿ ಶಾಲೆಯ ಲೈಬ್ರರಿಯಲ್ಲಿ 3,500ಕ್ಕೂ ಹೆಚ್ಚು ಪುಸ್ತಕಗಳಿವೆ. ಓದುವ ಹವ್ಯಾಸ, ಜ್ಞಾನಾರ್ಜನೆಗಾಗಿ ಪುಸ್ತಕಗಳು ಹೆಚ್ಚು ಸಹಕಾರಿಯಾಗಿವೆ.

‌ಇದರ ಜೊತೆಗೆ 60 ಅಂಗುಲದ ಟಿವಿ ಪರದೆ ಮೂಲಕ ವಿದ್ಯಾರ್ಥಿಗಳಿಗೆ ಕಥೆಗಳನ್ನು ಹೇಳಲಾಗುತ್ತದೆ.

ಸದ್ಯಕ್ಕೆ 5ರಿಂದ 8ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ 30 ಕಥೆಗಳನ್ನು ಅಳವಡಿಸಲಾಗಿದೆ. ಇದರಲ್ಲಿ ನೀತಿ ಕಥೆಗಳು, ಮೈಸೂರಿನ ಸಣ್ಣ ಕಥೆಗಳು, ಇತಿಹಾಸದ ಕಥೆಗಳು ಹಾಗೂ ಪಂಚತಂತ್ರ ಕಥೆಗಳು ಇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಆಡಿಯೋ ವಿಷುಯಲ್ ಕಾಠ್ಯಕ್ರಮಗಳನ್ನು ಅಳವಡಿಸುತ್ತೇವೆ ಎಂದು ಕಲಿಸು ಫೌಂಡೇಶನ್‌ನ ನಿಖಿಲೇಶ್ ಪತ್ರಿಕೆಗೆ ತಿಳಿಸಿದರು. ಈ ಗ್ರಂಥಾಲಯ ಅಂದಾಜು 850 ಚದರ ಅಡಿಗಳಿದ್ದು, 45 ಮಕ್ಕಳು ಕುಳಿತು ಓದಬಹುದಾಗಿದೆ. ಸಧ್ಯಕ್ಕೆ ಸಾಹಿತ್ಯ, ವಿಜ್ಞಾನ, ಇತಿಹಾಸ, ಜೀವಶಾಸ್ತ್ರ, ಗಣಿತ, ಆತ್ಮಚರಿತ್ರೆ ಹಾಗೂ ಪೌರಾಣಿಕ ಕಥೆಗಳಿರುವ ಪುಸ್ತಕಗಳು ಇವೆ. ಈ ಗ್ರಂಥಾ;ಯವನ್ನು 4.5 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.

ರಾಜ್ಯ ಸರ್ಕಾರ ಹೊಸದಾಗಿ ‘ಪುಸ್ತಕ ಓದು’ ಕಾರ್ಯಕ್ರಮ ವನ್ನು ರೂಪಿಸಿದೆ ಆದರೆ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗ್ರಂಥಾಲಯಗಳ ಕೊರತೆ ಇದೆ. ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಓದಲು ಆಸಕ್ತಿ ಮೂಡಿಸುವ ವಾತಾವರಣ ಇಲ್ಲ. ಮೊದಲು ಅಂತಹ ವಾತಾವರಣ ಸೃಷ್ಟಿಸಬೇಕು. ಈ ಕೆಲಸಕ್ಕೆ ಕಲಿಸು ಫೌಂಡೇಶನ್ ಮುಂದಾಗಿದೆ. ಇದು ನಮ್ಮ ಸಂಸ್ಥೆಯ ಮೊದಲ ಡಿಜಿಟಲ್ ಲೈಬ್ರರಿ ಆಗಿದೆ.

ಎಂ.ಎಂ.ನಿಖಿಲೇಶ್
ಸಂಸ್ಥಾಪಕರು, ಸಿಇಓ, ಕಲಿಸು ಫೌಂಡೇಶನ್

ಆಂದೋಲನ ಡೆಸ್ಕ್

Recent Posts

ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು

ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…

4 mins ago

ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ನಿಗಾ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌…

27 mins ago

ಚೀನಾದಲ್ಲಿ ಕಲ್ಲಿದ್ದಲು ಗಣಿ ಸ್ಫೋಟ: 82 ಜನರು ಸಾವು

ಬೀಜಿಂಗ್:‌ ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…

57 mins ago

ನಟ ದರ್ಶನ್‌ ಆತ್ಮಹತ್ಯೆಗೆ ಯತ್ನ ವದಂತಿ: ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್‌ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…

2 hours ago

ಓದುಗರ ಪತ್ರ: ಕೆಪಿಎಸ್ ಶಾಲೆ ಯೋಜನೆ ಸರ್ಕಾರದ ಜಾಣ ನಡೆ!

ಶಾಲಾ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಹೊಸದಾಗಿ ೮೦೦ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯಲು…

5 hours ago

ಓದುಗರ ಪತ್ರ: ಸರ್ಕಾರಿ ಶಾಲೆ ದತ್ತು ಪಡೆಯುವ ಪ್ರಕ್ರಿಯೆ ಆರಂಭವಾಗಲಿ

ರಾಜ್ಯಾದ್ಯಂತ ಸರ್ಕಾರಿ ಶಾಲೆಗಳು ಮೇ ೨೯ರಂದು ಪ್ರಾರಂಭವಾಗುತ್ತಿವೆ. ಸರ್ಕಾರಿ ಶಾಲೆಗಳಲ್ಲಿ ರಾಜ್ಯ ಸರ್ಕಾರ ಪ್ರತೀ ವರ್ಷ ಮಕ್ಕಳಿಗೆ ಉಚಿತ ಪಠ್ಯಪುಸ್ತಕ,…

5 hours ago