Andolana originals

ಗ್ರಂಥಾಲಯ ಸ್ಥಾಪನೆ; ಶತಕ ಸಾಧನೆ

ಸರ್ಕಾರಿ ಶಾಲೆಯಲ್ಲಿ 100ನೇ ಲೈಬ್ರರಿ ಸ್ಥಾಪಿಸಿದ ಕಲಿಸು ಫೌಂಡೇಶನ್

ಮೈಸೂರು: ಗ್ರಂಥಾಲಯಗಳಲ್ಲಿ ಕಂಪ್ಯೂಟರ್‌ಗಳಿರುವುದನ್ನೇ ಡಿಜಿಟಲ್ ಲೈಬ್ರರಿ ಎಂದು ಹೇಳುವುದಿತ್ತು. ಆದರೆ ಕಲಿಸು ಫೌಂಡೇಶನ್ ಸಂಸ್ಥೆ ಮೈಸೂರಿನ ಕುಂಬಾರಕೊಪ್ಪಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ ಆರಂಭಿಸಿರುವ ಮೊದಲ ಹಾಗೂ ಸಂಸ್ಥೆಯ 100ನೇ ಗ್ರಂಥಾ ಲಯ ಆಡಿಯೋ ಹಾಗೂ ವಿಷು ಯಲ್ ಸೌಲಭ್ಯಗಳನ್ನು ಹೊಂದಿರುವ ಮೊದಲ ಡಿಜಿಟಲ್ ಲೈಬ್ರರಿ ಆಗಿರುವುದು ವಿಶೇಷವಾಗಿದೆ.

ಈ ಸರ್ಕಾರಿ ಶಾಲೆಯ ಲೈಬ್ರರಿಯಲ್ಲಿ 3,500ಕ್ಕೂ ಹೆಚ್ಚು ಪುಸ್ತಕಗಳಿವೆ. ಓದುವ ಹವ್ಯಾಸ, ಜ್ಞಾನಾರ್ಜನೆಗಾಗಿ ಪುಸ್ತಕಗಳು ಹೆಚ್ಚು ಸಹಕಾರಿಯಾಗಿವೆ.

‌ಇದರ ಜೊತೆಗೆ 60 ಅಂಗುಲದ ಟಿವಿ ಪರದೆ ಮೂಲಕ ವಿದ್ಯಾರ್ಥಿಗಳಿಗೆ ಕಥೆಗಳನ್ನು ಹೇಳಲಾಗುತ್ತದೆ.

ಸದ್ಯಕ್ಕೆ 5ರಿಂದ 8ನೇ ತರಗತಿ ವರೆಗಿನ ವಿದ್ಯಾರ್ಥಿಗಳಿಗೆ 30 ಕಥೆಗಳನ್ನು ಅಳವಡಿಸಲಾಗಿದೆ. ಇದರಲ್ಲಿ ನೀತಿ ಕಥೆಗಳು, ಮೈಸೂರಿನ ಸಣ್ಣ ಕಥೆಗಳು, ಇತಿಹಾಸದ ಕಥೆಗಳು ಹಾಗೂ ಪಂಚತಂತ್ರ ಕಥೆಗಳು ಇವೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚು ಆಡಿಯೋ ವಿಷುಯಲ್ ಕಾಠ್ಯಕ್ರಮಗಳನ್ನು ಅಳವಡಿಸುತ್ತೇವೆ ಎಂದು ಕಲಿಸು ಫೌಂಡೇಶನ್‌ನ ನಿಖಿಲೇಶ್ ಪತ್ರಿಕೆಗೆ ತಿಳಿಸಿದರು. ಈ ಗ್ರಂಥಾಲಯ ಅಂದಾಜು 850 ಚದರ ಅಡಿಗಳಿದ್ದು, 45 ಮಕ್ಕಳು ಕುಳಿತು ಓದಬಹುದಾಗಿದೆ. ಸಧ್ಯಕ್ಕೆ ಸಾಹಿತ್ಯ, ವಿಜ್ಞಾನ, ಇತಿಹಾಸ, ಜೀವಶಾಸ್ತ್ರ, ಗಣಿತ, ಆತ್ಮಚರಿತ್ರೆ ಹಾಗೂ ಪೌರಾಣಿಕ ಕಥೆಗಳಿರುವ ಪುಸ್ತಕಗಳು ಇವೆ. ಈ ಗ್ರಂಥಾ;ಯವನ್ನು 4.5 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿದೆ.

ರಾಜ್ಯ ಸರ್ಕಾರ ಹೊಸದಾಗಿ ‘ಪುಸ್ತಕ ಓದು’ ಕಾರ್ಯಕ್ರಮ ವನ್ನು ರೂಪಿಸಿದೆ ಆದರೆ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗ್ರಂಥಾಲಯಗಳ ಕೊರತೆ ಇದೆ. ಗ್ರಂಥಾಲಯಗಳಲ್ಲಿ ಮಕ್ಕಳಿಗೆ ಓದಲು ಆಸಕ್ತಿ ಮೂಡಿಸುವ ವಾತಾವರಣ ಇಲ್ಲ. ಮೊದಲು ಅಂತಹ ವಾತಾವರಣ ಸೃಷ್ಟಿಸಬೇಕು. ಈ ಕೆಲಸಕ್ಕೆ ಕಲಿಸು ಫೌಂಡೇಶನ್ ಮುಂದಾಗಿದೆ. ಇದು ನಮ್ಮ ಸಂಸ್ಥೆಯ ಮೊದಲ ಡಿಜಿಟಲ್ ಲೈಬ್ರರಿ ಆಗಿದೆ.

ಎಂ.ಎಂ.ನಿಖಿಲೇಶ್
ಸಂಸ್ಥಾಪಕರು, ಸಿಇಓ, ಕಲಿಸು ಫೌಂಡೇಶನ್

ಆಂದೋಲನ ಡೆಸ್ಕ್

Recent Posts

ಮಕ್ಕಳನ್ನು ಪ್ರಚೋದಿಸಬೇಡಿ, ಸರಿಯಾದ ದಾರಿ ತೋರಿಸಿ: ಪ್ರಧಾನಿ ಮೋದಿ ಮಹತ್ವದ ಸಂದೇಶ

ನವದೆಹಲಿ: ನೀಟ್‌-ಯುಜಿ 2026 ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಕುರಿತು ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ…

9 hours ago

ಪ್ರಧಾನಿ ನಿವಾಸದ ಎದುರು ರಾಹುಲ್‌, ಪ್ರಿಯಾಂಕಾ ಪ್ರತಿಭಟನೆ

ನವದೆಹಲಿ: ದೆಹಲಿಯಲ್ಲಿ ಸಿಜೆಪಿ ಬೆಂಬಲಿಗರ ಮೇಲಿನ ಪೊಲೀಸರ ಕ್ರಮ ಖಂಡಿಸಿ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರಿಂದು ಪ್ರಧಾನಿ…

9 hours ago

ಖಾಸಗಿ ಆಸ್ಪತ್ರೆಗೆ ಸೋನಮ್‌ ವಾಂಗ್ಚುಕ್‌ ಸ್ಥಳಾಂತರಕ್ಕೆ ದೆಹಲಿ ಹೈಕೋರ್ಟ್‌ ಸೂಚನೆ

ನವದೆಹಲಿ: ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಜೂನ್.‌28ರಿಂದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಸೋನಮ್‌ ವಾಂಗ್ಚುಕ್‌ ಅವರನ್ನು ಇಲ್ಲಿನ ಸಫ್ದರ್‌ಜಂಗ್‌…

10 hours ago

ಹಾರಂಗಿ ಜಲಾಶಯ ಭರ್ತಿಗೆ 8 ಅಡಿ ಬಾಕಿ: ಅನ್ನದಾತರ ಮೊಗದಲ್ಲಿ ಮಂದಹಾಸ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿದಿದ್ದು, ಹಾರಂಗಿ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಹಾರಂಗಿ ಜಲಾಶಯಕ್ಕೆ 3 ಸಾವಿರಕ್ಕೂ…

11 hours ago

ಹುಣಸೂರು: ಇಬ್ಬರು ಮಕ್ಕಳು, ಹೆಂಡತಿಯನ್ನು ಕೊಂದು ಪತಿ ಆತ್ಮಹತ್ಯೆ

ಮೈಸೂರು: ಇಬ್ಬರು ಮಕ್ಕಳು ಹಾಗೂ ಹೆಂಡತಿಯನ್ನು ಕೊಂದು ಬಳಿಕ ಪತಿಯೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹುಣಸೂರಿನಲ್ಲಿ ನಡೆದಿದೆ.…

11 hours ago

ಇಂದು ಚಲೋ ಸಂಸದ್ ಮುಂದುವರಿಯಲಿದೆ: ಅಭಿಜಿತ್‌ ದೀಪ್ಕೆ ಘೋಷಣೆ

ನವದೆಹಲಿ: ಇಂದು ತಮ್ಮ ಪ್ರತಿಭಟನೆ ಹಾಗು ಚಲೋ ಸಂಸದ್‌ ಮುಂದುವರಿಯಲಿದೆ ಎಂದು ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ…

14 hours ago