Andolana originals

ಕೆರೆಗಳಿಗೆ ಜೀವ ಜಲ; ಮನ್ರೇಗಾ ಬಲ

ಕೆ. ಬಿ. ರಮೇಶನಾಯಕ
ಮೈಸೂರು: ಗ್ರಾಮಾಂತರ ಪ್ರದೇಶಗಳಲ್ಲಿ ದಶಕಗಳ ಹಿಂದೆ ಕುಡಿಯುವ ನೀರಿಗೆ ಜೀವಸೆಲೆಯಾಗಿದ್ದ, ಪ್ರಸ್ತುತ ಒತ್ತುವರಿಯಿಂದ ಕಣ್ಮರೆಯಾಗಿರುವ ನೂರಾರು ಕೆರೆ ಗಳನ್ನು ರಕ್ಷಿಸುವ ಜೊತೆಗೆ ಮೇ ಮಾಸಾಂತ್ಯದೊಳಗೆ ಒತ್ತುವರಿ ತೆರವುಗೊಳಿಸಿ ಮತ್ತೆ ಜೀವ ಜಲ ತುಂಬಲು ಯೋಜನೆಯನ್ನು ರೂಪಿಸಲಾಗಿದೆ. ಮನ್ರೇಗಾ ಯೋಜನೆ ಯಡಿ ಹಳ್ಳಿಗಳ ಅಂಚಿನಲ್ಲಿರುವ ಕೆರೆ, ಕಟ್ಟೆ ಗಳಿಗೆ ನೀರು ಸೇರುವಂತೆ ಮಾಡಲು ಮೈಸೂರು ಜಿಲ್ಲಾ ಪಂಚಾಯಿತಿ ಮುಂದಾಗಿದೆ.

ಸಿಎಸ್‌ಆರ್ ನಿಽ ಯಡಿ ಪ್ರಮುಖ ಕೆರೆ ಗಳನ್ನು ತುಂಬಿಸಲು ಖಾಸಗಿ ಕಂಪೆನಿಗಳು ಒಲವು ತೋರಿವೆ. ಜೊತೆಗೆ ಅಂತ ರ್ಜಲ ಹೆಚ್ಚಳಕ್ಕೆ ಸಹ ಕಾರಿಯಾಗುವಂತಹ ಕೆರೆಗಳಿಗೆ ಮರು ಜೀವ ನೀಡಲು ಮುಂದಾಗಿರುವ ಜಿಪಂ ಮುಂದಿನ ವರ್ಷದಿಂದ ಮನ್ರೇಗಾ ಯೋಜನೆ ಯಡಿ ಕೆರೆಗಳ ಹದ್ದುಬಸ್ತಿನಲ್ಲಿ ಸುತ್ತಲೂ ಏರಿಯನ್ನು ಭದ್ರ ಪಡಿಸುವ ಕಾಮಗಾರಿಗಳನ್ನು ಹೆಚ್ಚು ಕೈಗೆತ್ತಿಕೊಳ್ಳುವಂತೆ ಗ್ರಾಮ ಪಂಚಾಯಿತಿ ಅಽಕಾರಿ ಗಳಿಗೆ ಸಂದೇಶ ರವಾನಿ ಸಲಾಗಿದೆ. ಇದರಿಂದಾಗಿ ಮುಂದಿನ ಆರ್ಥಿಕ ವರ್ಷದಲ್ಲಿ ಮನ್ರೇಗಾ ಯೋಜನೆ ಯಡಿ ಕ್ರಿಯಾಯೋಜನೆಗಳನ್ನು ರೂಪಿಸುವಾಗ ಕೆರೆಗಳ ಪುನಶ್ಚೇತನಕ್ಕೆ ಬೇಕಾಗುವ ರೀತಿಯಲ್ಲಿ ಒತ್ತು ಕೊಡುವುದು ಅನಿವಾರ್ಯವಾಗಿದೆ.

ಗ್ರಾಮೀಣ ಕೆರೆಗಳೇ ಅಧಿಕ: ಜಿಲ್ಲೆಯಲ್ಲಿ ಸಣ್ಣ ನೀರಾ ವರಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಜಲ ಸಂಪನ್ಮೂಲ, ಪೌರಾಡಳಿತ ಇತರೆ ಇಲಾಖೆಗಳ ಸುಪಽಯಲ್ಲಿ ೨,೯೯೧ ಕೆರೆಗಳಿದ್ದು, ಇದರಲ್ಲಿ ಸಣ್ಣ ನೀರಾವರಿ ಇಲಾಖೆ- ೧೧೦, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾ ಯತ್ ರಾಜ್ ಇಲಾಖೆ-೨,೮೦೫, ಜಲಸಂಪನ್ಮೂಲ ಇಲಾಖೆ-೨೬, ಪೌರಾಡಳಿತ-೧೪, ಇತರೆ ಇಲಾಖೆಗಳಿಂದ ೩೬ ಕೆರೆಗಳಿದ್ದು, ಅದರಲ್ಲಿ ಹೆಚ್ಚು ಗ್ರಾಮೀಣ ಕೆರೆಗಳೂ ಇವೆ. ಈಗಾಗಲೇ ೨,೫೬೮ ಕೆರೆಗಳನ್ನು ಸರ್ವೇ ಮಾಡ ಲಾಗಿದ್ದು, ೪೨೩ ಕೆರೆಗಳನ್ನು ಅಳತೆ ಮಾಡಬೇಕಾಗಿದೆ. ಜಿಲ್ಲೆಯಲ್ಲಿ ೧,೨೨೯ ಕೆರೆಗಳ ಒತ್ತುವರಿಯನ್ನು ಗುರುತಿಸ ಲಾಗಿದ್ದು, ಈತನಕ ೮೦೫ ಕೆರೆಗಳ ಒತ್ತುವರಿ ತೆರವುಗೊಳಿಸ ಲಾಗಿದೆ. ಮೇ ತಿಂಗಳ ಒಳಗೆ ಉಳಿದಿರುವ ೪೨೪ ಕೆರೆ ಗಳನ್ನೂ ಸರ್ವೇ ಮಾಡಿಸಿ, ಒತ್ತುವರಿಯಾಗಿದ್ದರೆ ತೆರವು ಗೊಳಿಸುವಂತೆ ಸೂಚಿಸಲಾಗಿದೆ.

ಕೆರೆ, ಕಟ್ಟೆಗಳ ಗುರುತು: ಗ್ರಾಮೀಣ ಭಾಗದಲ್ಲಿರುವ ಸರ್ಕಾರಿ ಕೆರೆ, ಕಟ್ಟೆಗಳನ್ನು ಗುರುತಿಸಿ ನಾಮ-ಲಕ ಅಳ ವಡಿಸುವಂತೆ ಹೇಳಲಾಗಿದೆ. ಮನ್ರೇಗಾ ಯೋಜನೆ
ಯಡಿ ಕಟ್ಟೆಗಳನ್ನು ದುರಸ್ತಿಪಡಿಸಿ ಸುತ್ತಲೂ ತಡೆ ಗೋಡೆ ಮಾಡುವುದು, ಪಕ್ಕದಲ್ಲಿ ಜಾನುವಾರುಗಳ ಕುಡಿಯುವ ನೀರಿಗಾಗಿ ತೊಟ್ಟಿಯನ್ನು ನಿರ್ಮಿಸುವುದು. ಕಟ್ಟೆಗಳಿಗೆ ನೀರು ಸೇರುವ ಮಾರ್ಗಗಳು ಇದ್ದರೆ ಅದನ್ನು ಗುರುತಿಸಿ ಚರಂಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳುವಂತೆ ಹೇಳಲಾಗಿದೆ. ಇದರಿಂದಾಗಿ ಮಳೆ ಬಂದಾಗ ನೀರು ಸರಾಗ ವಾಗಿ ಕಟ್ಟೆ ಸೇರುವಂತೆ ಮಾಡಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಸಿಎಸ್‌ಆರ್ ನೀರು ಬಳಕೆಗೆ ಪ್ಲಾನ್: ತಾಲ್ಲೂಕು ಮಟ್ಟದಲ್ಲಿರುವ ಪ್ರಮುಖ ಕೆರೆಗಳನ್ನು ಅಭಿವೃದ್ಧಿಪಡಿಸಲು ಸಿಎಸ್‌ಆರ್ ನಿಧಿಯನ್ನು ಬಳಸಿಕೊಳ್ಳುವ ಪ್ಲಾನ್ ಮಾಡ ಲಾಗಿದೆ. ನಂಜನಗೂಡು ತಾಲ್ಲೂಕಿನಲ್ಲಿರುವ ಕೈಗಾರಿಕೆ ಗಳಿಗೆ ಕೆರೆಗಳ ಜವಾಬ್ದಾರಿಯನ್ನು ನೀಡಲಿದ್ದು, ಕೆಲ ವರು ಸ್ವಯಂಪ್ರೇರಣೆಯಿಂದ ಅಭಿವೃದ್ಧಿಪಡಿಸಿದ್ದಾರೆ. ರೀಡ್ ಅಂಡ್ ಟೇಲರ್, ಟಿವಿಎಸ್ ಕಂಪೆನಿ ಇನ್ನಿತರ ಕಂಪೆನಿಗಳು ಕೆರೆ ಅಭಿವೃದ್ಧಿಪಡಿಸಿದ್ದರೆ, ಬೆಳವಾಡಿ ಕೈಗಾರಿಕಾ ಬಡಾವಣೆ ಯಲ್ಲಿರುವ ಕಾರ್ಖಾನೆಗಳು ಕೂಡ ತಮ್ಮ ಪಾಲಿನ ನಿಧಿ ಯನ್ನು ನೀಡುತ್ತಿವೆ. ಇದರಿಂದಾಗಿ ಮುಂದಿನ ವರ್ಷ ದಿಂದ ಹೆಚ್ಚು ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ.

ಕೊಳಚೆ ನೀರು ಕೆರೆಗೆ ಸೇರದಂತೆ ಮಾಡಲು ಕಾರ್ಯಯೋಜನೆ: ಕೊಳಚೆ ನೀರು ಕೆರೆಗಳಿಗೆ ಸೇರದಂತೆ ಯೋಜನೆ ರೂಪಿಸುವಂತೆ ಹೇಳಲಾಗಿದೆ. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ನೀರಿನ ವರ್ಗೀ ಕರಣ ಮಾಡಿದ್ದು, ಎ-ವರ್ಗದಲ್ಲಿ ನದಿ ನೀರನ್ನು ಸಾಂಪ್ರ ದಾಯಿಕವಾಗಿ ಸಂಸ್ಕರಿಸದೆ ಸೋಂಕು ನಿವಾರಿಸಿದ ನಂತರ ಕುಡಿಯುವ ನೀರಿನ ಮೂಲವನ್ನಾಗಿ ಉಪಯೋಗಿ ಸುವುದು. ಬಿ-ವರ್ಗ ದಲ್ಲಿ ನದಿ ನೀರನ್ನು ವ್ಯವಸ್ಥಿತವಾಗಿ ಸ್ನಾನಕ್ಕೆ ಉಪಯೋಗಿ ಸುವ ಮೂಲ, ಸಿ-ವರ್ಗದಲ್ಲಿ ನದಿ ನೀರನ್ನು ಸಾಂಪ್ರ ದಾಯಿಕವಾಗಿ ಸಂಸ್ಕರಿಸಿ ಹಾಗೂ ಸೋಂಕು ನಿವಾರಿಸಿದ ನಂತರ ಕುಡಿಯುವ ನೀರಿನ ಮೂಲವನ್ನಾಗಿ ಉಪಯೋಗಿಸುವುದು. ಡಿ-ವರ್ಗದಲ್ಲಿ ನದಿ ನೀರನ್ನು ಮೀನು ಗಾರಿಕೆ ಹಾಗೂ ವನ್ಯಜೀವಿಗಳ ಬೆಳವಣಿಗೆಗೆ ಮೂಲ ವನ್ನಾಗಿ ಉಪಯೋಗಿಸುವುದು.

ಇ-ವರ್ಗದಲ್ಲಿ ನದಿ ನೀರನ್ನು ನಿಯಂತ್ರಿತ ವಿಲೇವಾರಿ, ಕೈಗಾರಿಕಾ ಶೀತಲೀಕರಣ ಹಾಗೂ ವ್ಯವಸಾಯಕ್ಕೆ ಉಪ ಯೋಗಿಸುವ ನೀರಿನ ಮೂಲವನ್ನಾಗಿ ಉಪಯೋಗಿಸಲು ಹೇಳಲಾಗಿದೆ.

ಮೈಸೂರು ನಗರದ ಪ್ರಮುಖ ಕೆರೆಗಳಾದ ಕುಕ್ಕರಹಳ್ಳಿ, ದಳವಾಯಿ ಕೆರೆ, ಹೆಬ್ಬಾಳು ಕೆರೆ, ಲಿಂಗಾಂಬುಽ ಕೆರೆ, ಕಾರಂಜಿ ಕೆರೆ, ದಡದಹಳ್ಳಿ ಕೆರೆ, ಬೊಮ್ಮನಹಳ್ಳಿ ಕೆರೆ, ವರುಣ ಕರೆಗಳು ಇ, ಡಿ ಮತ್ತು ಸಿ ವರ್ಗದಲ್ಲಿ ಗುರುತಿಸಿ ಕೊಂಡಿದ್ದು, ಬಿ ಮತ್ತು ಎ ವಲಯಕ್ಕೆ ತರುವುದಕ್ಕೆ ಕೊಳಚೆ ನೀರನ್ನು ಸೇರದಂತೆ ತಡೆಯಬೇಕಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಸಂಪ್ರದಾಯವಾಗಿ ನಡೆಯದ ವಿವಾಹ ಅಮಾನ್ಯ ; ಗುಜರಾತ್ ಹೈಕೋರ್ಟ್ ತೀರ್ಪು

ಸಪ್ತಪದಿ ಹಿಂದೂ ವಿವಾಹದ ಅಡಿಪಾಯ ; ಗುಜರಾತ್‌ ಹೈಕೋರ್ಟ್‌ ತೀರ್ಪು ಅಹಮದಾಬಾದ್ : ಸಪ್ತಪದಿಯಂತಹ ಸಾಂಪ್ರದಾಯಿಕ ವಿಧಿವಿಧಾನಗಳು ಮತ್ತು ಸಮಾರಂಭಗಳನ್ನು…

9 hours ago

ಬೋರ್‌ವೆಲ್, ಪಂಪ್‌ಸೆಟ್ ಕೇಬಲ್‌ ಕಳ್ಳತನ ಯುವಕರಿಗೆ ಧರ್ಮದೇಟು

ಮಂಡ್ಯ : ಬೋರ್‌ವೆಲ್, ಪಂಪ್‌ಸೆಟ್ ಕೇಬಲ್ ಕಳವು ಮಾಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿದಂತೆ ಮೂವರನ್ನು ಸಾರ್ವಜನಿಕರೇ ಹಿಡಿದು ಕಂಬಕ್ಕೆ ಕಟ್ಟಿ…

10 hours ago

ವಿದ್ಯುತ್‌ ಶಾರ್ಟ್‌ ಸರ್ಕ್ಯೂಟ್‌ ; ಸುಟ್ಟು ಹೋದ 6 ಎಕರೆ ಕಬ್ಬು

ಹನೂರು : ಅತಿಯಾದ ಗಾಳಿಯ ರಭಸಕ್ಕೆ ವಿದ್ಯುತ್ ತಂತಿ ಒಂದಕ್ಕೊಂದು ಸ್ಪರ್ಶಿಸಿ ಬೆಂಕಿ ಹೊತ್ತಿಕೊಂಡು ಜಮೀನಿನಲ್ಲಿದ್ದ 6 ಎಕರೆ ಕಬ್ಬು…

11 hours ago

ಆಷಾಢ ಶುಕ್ರವಾರ, ಶನಿವಾರ, ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ

ಮೈಸೂರು: ಆಷಾಢ ಶುಕ್ರವಾರ, ಶನಿವಾರ ಹಾಗೂ ಭಾನುವಾರ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ ಎಂದು ಸಚಿವ ಯತೀಂದ್ರ…

15 hours ago

ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’

ಮೈಸೂರು: ಜೀವವೈವಿಧ್ಯ ತಾಣವಾಗಿರುವn ಹಾಗೂ ಪ್ರಕೃತಿಯ ಸೊಬಗಿನ ವಾತಾವರಣದಿಂದ ಕೂಡಿರುವ ಕಾರಂಜಿ ಕೆರೆ ಉದ್ಯಾನದಲ್ಲಿ ‘ಪರಿಸರ ಅನುಭವ ವಲಯ’ ನಿರ್ಮಾಣ…

16 hours ago

ಅಲೆಮಾರಿ ಜನಾಂಗ ನಾಡಿನ ಸಂಸ್ಕೃತಿಯ ಜೀವಂತಿಕೆ

ಟಿ.ಕೆ.ಹರೀಶ್ ಸಮುದಾಯಗಳಿಗೆ ಸೂರು, ಶಿಕ್ಷಣ ಒದಗಿಸುವುದು ಅತ್ಯಗತ್ಯ ಭಾರತೀಯ ಅಲೆಮಾರಿ ಜನಾಂಗಗಳು ಕೇವಲ ಸಂಚಾರಿಗಳಲ್ಲ; ಅವರು ನಮ್ಮ ಶ್ರೀಮಂತ ಸಾಂಸ್ಕೃತಿಕ…

22 hours ago